Andolana originals

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ

ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಗೆ ರೈತರು ಮತ್ತು ಸಾರ್ವಜನಿಕರ ೫ ಕೋಟಿ ರೂ. ಮೌಲ್ಯದ ಬೆಳೆಗಳು, ಮನೆ, ಆಸ್ತಿಪಾಸ್ತಿ ನಾಶವಾಗಿದ್ದು, ಮುಖ್ಯ ರಸ್ತೆ ಬದಿಯ ದೊಡ್ಡ ಮರಗಳು, ವಿದ್ಯುತ್ ಕಂಬಗಳು ಬಿರುಗಾಳಿಗೆ ಧರೆಗುರುಳಿವೆ.

ಬಿಸಿಲಿನ ತಾಪಮಾನದಿಂದ ಬಸವಳಿದಿದ್ದ ಸಾರ್ವಜನಿಕರಿಗೆ ಮಳೆ ಖುಷಿ ನೀಡಿತಾದರೂ ಬಿರುಗಾಳಿ ಮತ್ತು ಮಳೆಯಿಂದ ಬಾಳೆ, ಅಡಕೆ, ತೆಂಗು ಬೆಳೆಗಳು, ಮನೆಗಳ ಶೀಟುಗಳು, ಬೃಹತ್ ಮರಗಳು, ವಿದ್ಯುತ್ ಕಂಬಗಳು ನಾಶವಾಗಿದ್ದು, ರೈತರು, ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಮಳೆ ಪ್ರಮಾಣಕ್ಕಿಂತ ಬಿರುಗಾಳಿ ಹೆಚ್ಚಾಗಿದ್ದರಿಂದ ತಾಲ್ಲೂಕಿನ ಹೈರಿಗೆ, ಮಟಕೆರೆ, ಚೆನ್ನೇಗೌಡನ ಹುಂಡಿ, ಹ್ಯಾಂಡ್‌ಪೋಸ್ಟ್, ಕೋಟೆ, ಎರೆಹಳ್ಳಿ, ಚೌಡಳ್ಳಿ, ಜಕ್ಕಳ್ಳಿ, ಕೊಳ್ಳೇಗೌಡನಹಳ್ಳಿ, ಶಿರಮಳ್ಳಿ, ಯಲಮತ್ತೂರು, ಅನಗಟ್ಟಿ ಗ್ರಾಮಗಳಲ್ಲಿ ೧೫೦ ಎಕರೆ ಪ್ರದೇಶದಲ್ಲಿ ರೈತರು ಬೆಳೆದಿದ್ದ ಬಾಳೆ, ೧೫ ಎಕರೆಯಲ್ಲಿ ಬೆಳೆದಿದ್ದ ವಿವಿಧ ತರಕಾರಿಗಳು, ೫ ಎಕರೆಯಲ್ಲಿ ಬೆಳೆ ದಿದ್ದ ಅಡಕೆ, ೨೫ ತೆಂಗಿನ ಮರಗಳು, ೧೫ ಮನೆಗಳು ಐದು ಶೆಡ್‌ಗಳು, ರಸ್ತೆ ಬದಿಯಲ್ಲಿದ್ದ ೯ ದೊಡ್ಡ ಮರಗಳು, ೧೫ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನಾಶವಾಗಿವೆ.

ಬಿರುಗಾಳಿ ಮಳೆಗೆ ನಾಶವಾಗಿದ್ದರಿಂದ ರೈತ ಕುಟುಂಬದವರು ಕಂಗಾಲಾಗಿದ್ದರು. ವಾಸವಾಗಿದ್ದ ಮನೆಗಳ ಚಾವಣಿಗಳು ಗಾಳಿಗೆ ಹಾರಿ ಹೋಗಿವೆ. ಗೋಡೆ ಕುಸಿದು ಬಿದ್ದಿದೆ. ರಸ್ತೆ ಬದಿ ಇದ್ದ ಮರಗಳು ಮನೆಗಳ ಮೇಲೆ ಬಿದ್ದು ಮನೆಗಳು ಜಖಂಗೊಂಡಿವೆ. ಮನೆಯಲ್ಲಿದ್ದವರು ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶನಿವಾರ ಬೆಳಿಗ್ಗೆ ಮಳೆ ಹಾನಿ ಸ್ಥಳಗಳಿಗೆ ತಹಸಿಲ್ದಾರ್ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ನೇತ್ರಾವತಿ, ಅರಣ್ಯ ಅಧಿಕಾರಿ ರವಿಕುಮಾರ್, ಸೆಸ್ಕ್ ಅಧಿಕಾರಿ ಚಂದ್ರಕುಮಾರ್, ಅರುಣ್, ಕಂದಾಯ ಅಧಿಕಾರಿ ವಿಶ್ವನಾಥ್, ಸಹನ, ಗಂಗಾಧರ್, ಪಿಡಿಒ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

” ಶುಕ್ರವಾರ ಸುರಿದ ಮಳೆ ಮತ್ತು ಗಾಳಿಗೆ ಕಸಬಾ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಪ್ರದೇಶಗಳು ಮತ್ತು ಮನೆಗಳು ಹಾನಿಯಾಗಿವೆ. ನಾನು ಅನೇಕ ಕಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗರು ಪ್ರತಿಯೊಂದು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದ್ದೇನೆ. ನಂತರ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು.”

-ಶ್ರೀನಿವಾಸ್, ತಹಸಿಲ್ದಾರ್

” ತೋಟಗಾರಿಕೆ ಬೆಳೆಗಳಾದ ಬಾಳೆ, ತರಕಾರಿ, ಅಡಕೆ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಮಳೆಯಿಂದಾಗಿ ಹಾನಿಗೊಳಗಾಗಿದ್ದು, ನಾನು, ಇನ್ನಿತರ ಅಧಿಕಾರಿ ವರ್ಗದವರು ಭೇಟಿ ನೀಡಿ ಪರಿಶೀಲಿಸಿದ್ದೇವೆ. ನಷ್ಟದ ಬಗ್ಗೆ ವರದಿ ತಯಾರಿಸಿ ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಕಳುಹಿಸಲಾಗುವುದು.”

-ನೇತ್ರಾವತಿ, ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ

 

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago