Andolana originals

ನಾಳೆ ಕೋಟೆಯಲ್ಲಿ ೨ ಗಂಟೆಗಳ ಕಾಲ ಹೆಬ್ಬಾಳಯ್ಯ ಜಾತ್ರೆ!

ಮಂಜು ಕೋಟೆ

ಯುಗಾದಿ ಹಬ್ಬದ ಮರುದಿನ ಸಂಜೆ ನಡೆಯುವ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿ

ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮರುದಿನ ಸಂಜೆ ೨ ಗಂಟೆಗಳ ಕಾಲ ನಡೆಯುವ ಪಟ್ಟಣದ ಹೆಬ್ಬಾಳಯ್ಯ ಜಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗುವುದು ವಿಶೇಷ.

ಪಟ್ಟಣದ ಹೌಸಿಂಗ್ ಬೋರ್ಡ್‌ನಿಂದ ೧ ಕಿ.ಮೀ. ದೂರದಲ್ಲಿರುವ ಹೆಬ್ಬಾಳದ ನದಿಯ ಹತ್ತಿರದಲ್ಲಿ ಚೋಳರ ಕಾಲದ ಉದ್ಭವಮೂರ್ತಿಗಳಾದ ಹೆಬ್ಬಾಳಯ್ಯ ಬೀರಪ್ಪ, ಹೆಬ್ಬರಗಾಲಯ್ಯ, ಹೆಗ್ಗಡದೇವರಾಯ ಉತ್ಸವ ಮೂರ್ತಿಗಳಿಗೆ ಹೆಬ್ಬಾಳಯ್ಯ ದೇವಸ್ಥಾನದಲ್ಲಿ ಯುಗಾದಿ ಹಬ್ಬವಾದ ಮರುದಿನ ಸಂಜೆ ವಿಶೇಷ ಪೂಜೆ ಸಲ್ಲಿಸಿ ಜಾತ್ರೆ ನಡೆಸಲಾಗುತ್ತದೆ.

ಈ ಜಾತ್ರೆಯಲ್ಲಿ ೨೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುತ್ತಾರೆ. ದೇವರ ದರ್ಶನ, ಕುಣಿತ ಇತ್ಯಾದಿ ಕಾರ್ಯಕ್ರಮಗಳನ್ನು ನೋಡಲೆಂದೇ ತಾಲ್ಲೂಕು ಸೇರಿದಂತೆ ವಿವಿಧ ಭಾಗಗಳಿಂದ ಸಂಜೆ ೪ರಿಂದ ೬ರವರೆಗೆ ಜನರು ಆಗಮಿಸುತ್ತಾರೆ. ದೇವಸ್ಥಾನಕ್ಕೆ ಹೋಗಲು ಸಮರ್ಪಕವಾದ ರಸ್ತೆ ಇಲ್ಲದಿದ್ದರೂ ಜನಸಾಮಾನ್ಯರು ಇದನ್ನು ಲೆಕ್ಕಿಸದೆ ಚುನಾಯಿತ ಪ್ರತಿನಿಧಿಗಳಿಗೆ ಮತ್ತು ಸಂಬಂಧಪಟ್ಟವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಜಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ಪಟ್ಟಣದ ಕಾಳಿದಾಸ ರಸ್ತೆಯಲ್ಲಿರುವ ಬೀರಪ್ಪ ದೇವಸ್ಥಾನದ ಸಮಿತಿಯವರು ಹೆಬ್ಬಾಳಯ್ಯ ದೇವಸ್ಥಾನದ ಪೂಜೆ ಕಾರ್ಯಗಳ ಉಸ್ತುವಾರಿಯನ್ನು ಮತ್ತು ಜಾತ್ರಾ ಸಿದ್ಧತೆಗಳನ್ನು ಕುರುಬ  ಸಮಾಜದವರು ಹಾಗೂ ಇನ್ನಿತರ ಸಮುದಾಯದವರು ನೋಡಿಕೊಳ್ಳುತ್ತಾರೆ.

ಮಹಾರಾಜರ ಕಾಲದಲ್ಲಿ ಬೀರಪ್ಪ ದೇವಸ್ಥಾನಕ್ಕೆ ನೀಡಿದ ಪಂಚಲೋಹದ ವಿಗ್ರಹಗಳಾದ ಆನೆ, ಕುದುರೆ, ಒಂಟೆ, ಸೈನಿಕರು ಇನ್ನಿತರ ದೇವರ ವಿಗ್ರಹಗಳನ್ನು ಬಿಗಿ ಬಂದೋಬಸ್ತಿನಲ್ಲಿ ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸಿ ಜನರಿಗೆ ದರ್ಶನಕ್ಕೆ ಅವಕಾಶ ನೀಡಿ, ಮತ್ತೆ ಪಟ್ಟಣದ ಬೀರಪ್ಪ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುತ್ತಾರೆ.

ನದಿ ಮತ್ತು ಜಮೀನುಗಳ ಮಧ್ಯದಲ್ಲಿರುವ ಈ ದೇವಸ್ಥಾನ ಪ್ರಶಾಂತವಾದ ವಾತಾವರಣದಲ್ಲಿದ್ದು, ಜಾತ್ಯತೀತವಾಗಿ, ಹಿರಿಯರು, ಕಿರಿಯರು ಎಲ್ಲರೂ ಸೇರುತ್ತಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪಟ್ಟಣದ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸುತ್ತಾರೆ. ಜನಸಾಮಾನ್ಯರಿಗೆ ಮಜ್ಜಿಗೆ, ಪಾನಕ, ಮೊಸರನ್ನ, ಬಾತು ಇನ್ನಿತರ ಆಹಾರ ಪದಾರ್ಥಗಳನ್ನು ದಾನಿಗಳು ವಿತರಿಸುತ್ತಾರೆ. ಯುಗಾದಿ ಹಬ್ಬದ ಮರುದಿನ ಎರಡು ಗಂಟೆಗಳ ಕಾಲ ನಡೆಯುವ ಹೆಬ್ಬಾಳಯ್ಯ ಜಾತ್ರೆ ತನ್ನ ವಿಶೇಷತೆಯಿಂದ ಎಲ್ಲರ ಗಮನ ಸೆಳೆಯುತ್ತದೆ.

” ಪ್ರತಿವರ್ಷವೂ ಜಾತ್ರಾ ಮಹೋತ್ಸವಕ್ಕೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಚೋಳರ ಕಾಲದಲ್ಲಿ ನಿರ್ಮಾಣಗೊಂಡ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ.”

-ಬೀರಪ್ಪ, ಮುಖಂಡರು, ಕಾಳಿದಾಸ ರಸ್ತೆ 

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

1 hour ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

1 hour ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

1 hour ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

1 hour ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

11 hours ago