Andolana originals

ಐಟಿ-ಬಿಟಿ ತಂದ ಹೈಟೆಕ್‌ ಸಿಎಂ

ಕೈಗಾರಿಕೆ ಏಳ್ಗೆಗೆ ಶ್ರಮ: ಬೆಂಗಳೂರನ್ನು ಸಿಂಗಾಪುರ ಮಾಡುವ ಆಶಯ
ಬೆಂಗಳೂರು: ರಾಜಧಾನಿ ಬೆಂಗಳೂರಿನತ್ತ ವಿಶ್ವವೇ ತಿರುಗಿನೋಡುವಂತೆ ಮಾಡಿದ, ಐಟಿ ಬಿಟಿ ನಗರಿಯನ್ನಾಗಿ ಮಾಡಿ ಕರ್ನಾಟಕದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆಯಾಗಿ ನೀಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು ಎಸ್. ಎಂ. ಕೃಷ್ಣ ಅವರು.

ಹೈಟೆಕ್ ಮುಖ್ಯಮಂತ್ರಿ ಎಂದೇ ಹೆಸರಾಗಿದ್ದ ಎಸ್. ಎಂ. ಕೃಷ್ಣ ಅವರು ಬೆಂಗಳೂರಿಗೆ ಸಿಲಿಕಾನ್ ಸಿಟಿ ಎಂದು ಹೆಸರು ಬರಲು ಕಾರಣರಾಗಿದ್ದರು. ಈ ಮೂಲಕ ಜಾಗತಿಕ ಭೂಪಟದಲ್ಲಿ ಬೆಂಗಳೂರಿನ ಹೆಸರು ಕಾಣಿಸಿಕೊಳ್ಳುವಂತೆ ಮಾಡಿದ್ದರು.

ಐಟಿ ಬಿಟಿ ಕ್ಷೇತ್ರಕ್ಕೆ ಅಗಾಧವಾದ ಬೆಂಬಲ ನೀಡಿ ಬೆಂಗಳೂರು ನಗರದ ಬೆಳವಣಿಗೆಗೆ ಹಾಕಿಕೊಟ್ಟ ಭದ್ರಬುನಾದಿಯಿಂದ ಜಾಗತಿಕ ಮಟ್ಟದಲ್ಲಿ ಬೆಂಗಳೂರು ಸಿಲಿಕಾನ್ ವ್ಯಾಲಿ ಎಂದು ಹೆಸರು ಗಳಿಸಿ ಅಮೆರಿಕದ ಕ್ಯಾಲಿಫೋರ್ನಿ ನಗರಕ್ಕೆ ಪರ್ಯಾಯವಾಗಿ ಹೆಸರು ಗಳಿಸಿತ್ತು. ಇಂದು ರಾಜ್ಯದ ಆಯವ್ಯಯ ಮೂರು ಲಕ್ಷ ಕೋಟಿ ರೂ. ದಾಟಿದ್ದರೆ ಅದಕ್ಕೆ ಕಾರಣ ಕೃಷ್ಣರವರು ಐಟಿ ಕ್ಷೇತ್ರಕ್ಕೆ ನೀಡಿದ ಅವಕಾಶಗಳೇ ಕಾರಣ. ಲಕ್ಷಾಂತರ ಉದ್ಯೋಗ ಸೃಷ್ಟಿಸಿ ಹಲವು ಮೂಲ ಸೌಕರ್ಯಗಳನ್ನು ನೀಡಿ ಕನ್ನಡ ನಾಡನ್ನು ವಿಶ್ವ ಭೂಪಟದಲ್ಲಿ ಬೆಳಗಿಸಲು ಕೃಷ್ಣರವರ ಪಾತ್ರ ಅತ್ಯಂತ ದೊಡ್ಡದು.

೧೯೮೩ರಲ್ಲಿ ಕೇಂದ್ರ ಕೈಗಾರಿಕಾ ಸಚಿವರಾಗಿದ್ದ ಅವರು ಕೈಗಾರಿಕೆಗಳ ಏಳಿಗೆ ಬಗ್ಗೆ ಸಾಕಷ್ಟು ಶ್ರಮ ವಹಿಸಿದ್ದರು. ದೇಶದ ಪ್ರತಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕೈಗಾರಿಕಾ ಬಡಾವಣೆಗಳ ಸ್ಥಾಪನೆಗೆ ಮುಂದಾದರು. ಇದರ ಫಲವನ್ನು ಬಿಹಾರ, ಒರಿಸ್ಸಾ ಸೇರಿದಂತೆ ಹಲವು ರಾಜ್ಯಗಳು ಪಡೆದುಕೊಂಡವು.

೧೯೯೯ರಿಂದ ೨೦೦೪ ಕೃಷ್ಣ ರವರು ಮುಖ್ಯಮಂತ್ರಿಯಾಗಿ ನಾಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಅವರ ಕಾಲಘಟ್ಟದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಯೋಜನೆಗಳು ಇಂದಿಗೂ ಜಾರಿಯಲ್ಲಿದ್ದು, ಅದು ಕೃಷ್ಣರವರ ದೂರದೃಷ್ಟಿಯ ಫಲ. ಸ್ತ್ರೀ ಶಕ್ತಿ, ಅಕ್ಷರ ದಾಸೋಹ, ರೈತರಿಗೆ ಪಹಣಿ ನೀಡುವ ಭೂಮಿ ಯೋಜನೆ, ಯಶಸ್ವಿನಿ ಯೋಜನೆ ಸಮಾಜದ ಸರ್ವ ಜನರನ್ನು ಜನಪರ ಗೆದ್ದ ಯೋಜನೆಗಳಾಗಿವೆ.

ಬೆಂಗಳೂರು ಸಿಂಗಾಪುರದಂತೆ ಆಗಬೇಕು ಎಂದು ಕನಸು ಕಂಡಿದ್ದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು, ತಾವು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಐಟಿ ಕ್ಷೇತ್ರಕ್ಕೆ ಇನ್ನಿಲ್ಲದಷ್ಟು ಅವಕಾಶಗಳನ್ನು ಸೃಷ್ಟಿಸಿದ್ದರು. ಇದರಿಂದ ಉದ್ಯಾನ ನಗರಿಯು ಐಟಿ ಸಿಟಿಯಾಗಿ ಮಾರ್ಪಟ್ಟಿದ್ದಲ್ಲದೆ ’ಭಾರತದ ಸಿಲಿಕಾನ್ ವ್ಯಾಲಿ’ಯಾಗಿ ಬೆಳೆಯಲು ಸಾಧ್ಯವಾಯಿತು.

ಅವರು ಮುಖ್ಯಮಂತ್ರಿಯಾಗಿದ್ದಾಗಲೇ ವಿಕಾಸ ಸೌಧ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಕ್ಕೆ ಶ್ರಮಿಸಿದ್ದರು, ಬೆಂಗಳೂರಿಗೆ ಮೆಟ್ರೋ ತರುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago