ರಾಜ್ಯದ ಎಲ್ಲಾ ಗೊಂದಲಗಳಿಗೂ ಪರಿಹಾರಕ್ಕೆ ಮುಂದಾದ ಹೈಕಮಾಂಡ್
ಆರ್.ಟಿ.ವಿಠ್ಠಲಮೂರ್ತಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ನ ಎಲ್ಲ ಗೊಂದಲಗಳಿಗೂ ಪರಿಹಾರ ನೀಡಲು ಮುಂದಾಗಿರುವ ಕಾಂಗ್ರೆಸ್ ವರಿಷ್ಠರು,
ಸರ್ಕಾರ ಮತ್ತು ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು ಬಯಸಿದ್ದಾರೆ. ದಿಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಚರ್ಚಿಸಿದ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಅವರು ಈ ಇಂಗಿತ ವ್ಯಕ್ತಪಡಿಸಿದ್ದಾರೆ.
ಇದೇ ರೀತಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಒಗ್ಗಟ್ಟಿನ ಮಂತ್ರವನ್ನು ಬೋಧಿಸಿದ ವರಿಷ್ಠರು, ಹೆಚ್ಚೂ ಕಡಿಮೆಯಾದರೆ ಸರ್ಕಾರಕ್ಕೆ ಅಪಾಯ ವಾಗಲಿದೆ ಎಂದು ಎಚ್ಚರಿಸಿದ್ದಾರೆ. ಇನ್ನು ಸಂಪುಟ ಪುನಾರಚನೆ, ವಿಧಾನ ಪರಿಷತ್ಗೆ ನಾಮಕರಣ, ಜಾತಿಗಣತಿ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವು ವಿಷಯಗಳಲ್ಲಿ ಸಿಎಂ-ಡಿಸಿಎಂ ನಡುವೆ ಭುಗಿಲೆದ್ದಿರುವ ಭಿನ್ನಾಭಿಪ್ರಾಯ ವರಿಷ್ಠರ ಮುಂದೆ ಬಹಿರಂಗವಾಗಿಯೇ ವ್ಯಕ್ತವಾಗಿದ್ದು, ಉಭಯ ನಾಯಕರ ನಡುವಣ ಭಿನ್ನಾಭಿಪ್ರಾಯಗಳಿಗೆ ಬ್ರೇಕ್ ಹಾಕಲು ವರಿಷ್ಠರು ಹರಸಾಹಸ ನಡೆಸಿದರು ಎಂದು ಮೂಲಗಳು ಹೇಳಿವೆ.
ನಾಲ್ವರನ್ನು ವಿಧಾನಪರಿಷತ್ಗೆ ನಾಮಕರಣ ಮಾಡುವಾಗ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗಿದೆ. ಹೀಗಾಗಿ ಈ ಹೆಸರುಗಳನ್ನು ಬದಲಿಸಬೇಕು ಎಂದು ಸಭೆಯಲ್ಲಿ ಡಿಕೆಶಿ ಪಟ್ಟು ಹಿಡಿದರು. ಇದೇ ರೀತಿ ಸಂಪುಟ ಪುನಾರಚನೆಯ ಅಗತ್ಯವಿಲ್ಲ, ಜಾತಿ ಗಣತಿಯನ್ನು ಜಾರಿ ಮಾಡಲು ಹೊರಟರೆ ಸರ್ಕಾರಕ್ಕೆ
ಅಪಾಯವಿದೆ ಎಂದು ಡಿಕೆಶಿ ಎಚ್ಚರಿಸಿದರು. ಆದರೆ ವಿಧಾನಪರಿಷತ್ ನಾಮಕರಣ ಪಟ್ಟಿಯಲ್ಲಿ ಅಗತ್ಯ ಕಂಡರೆ ಅಲ್ಪ ಬದಲಾವಣೆ ಮಾಡುವುದಾಗಿ ಹೇಳಿದ ವರಿಷ್ಠರು, ಬೆಂಗಳೂರಿನ ಕಾಲ್ತುಳಿತ ಪ್ರಕರಣದಿಂದ ಪಕ್ಷದ ಇಮೇಜ್ಗಾದ ಹಾನಿಯ ಬಗ್ಗೆ ಪ್ರಸ್ತಾಪಿಸಿ ಆಕ್ಷೇಪ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ಡಿಕೆಶಿ ಹೆಜ್ಜೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ವರಿಷ್ಠರು, ಆರ್ಸಿಬಿ ವಿಜಯೋತ್ಸವದ ಬಗ್ಗೆ ರಾಜ್ಯ ಸರ್ಕಾರ ತಲೆ ಕೆಡಿಸಿಕೊಳ್ಳುವ ಅಗತ್ಯವಿರಲಿಲ್ಲ ಎಂದು ಹರಿಹಾಯ್ದರು ಎನ್ನಲಾಗಿದೆ. ಇವತ್ತಿನ ಸ್ಥಿತಿಯಲ್ಲಿ ಪಕ್ಷ ಮತ್ತು ಸರ್ಕಾರಕ್ಕೆ ಸರ್ಜರಿಯ ಅಗತ್ಯವಿದ್ದು, ಈ ಕುರಿತು ಕೆಲವೇ ದಿನಗಳಲ್ಲಿ ಸಂದೇಶ ರವಾನಿಸುವುದಾಗಿ ವರಿಷ್ಠರು ವಿವರಿಸಿದರು. ಜಾತಿ ಗಣತಿಯನ್ನು ಜಾರಿಗೊಳಿಸುವುದು ಪಕ್ಷದ ಅಜೆಂಡಾ. ಆದರೆ ಕರ್ನಾಟಕದಲ್ಲಿ ಹಿಂದೆ ನಡೆದಿರುವ ಜಾತಿಗಣತಿ ಬಗ್ಗೆ ಅಲ್ಲಲ್ಲಿ ಆಕ್ಷೇಪಗಳು ಎದ್ದಿವೆ. ಹೀಗಾಗಿ ಮರುಗಣತಿ ನಡೆಸಿ ಎಂದು ವರಿಷ್ಠರು ವಿವರಿಸಿದರು.
ಹಲವು ವರ್ಷಗಳ ಹಿಂದೆ ನಡೆದ ಗಣತಿಯಾದ್ದರಿಂದ ಜನ ಸಂಖ್ಯೆಯ ವಿಷಯದಲ್ಲಿ ಹಲವರು ಆಕ್ಷೇಪಗಳನ್ನು ಎತ್ತುತ್ತಿದ್ದಾರೆ. ಹೀಗಾಗಿ ಇಂತಹ ಆಕ್ಷೇಪಗಳನ್ನು ಪರಿಗಣಿಸಿ ಎರಡರಿಂದ ಮೂರು ತಿಂಗಳ ಒಳಗಾಗಿ ಮರುಗಣತಿ ನಡೆಸಿ ಎಂದು ಇದೇ ಸಂದರ್ಭದಲ್ಲಿ ವರಿಷ್ಠರು ವಿವರಿಸಿದರು.
ಇನ್ನಷ್ಟು ತೀವ್ರಗೊಳ್ಳಲಿದೆ ಸಂಘರ್ಷ
ಬೆಂಗಳೂರು: ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರ ದಿಲ್ಲಿ ಭೇಟಿ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಿಗೆ ಮುನ್ಸೂಚನೆಯಂತಿದ್ದು, ಮಂತ್ರಿ ಪದವಿ ಆಕಾಂಕ್ಷಿಗಳ ಸರ್ಕಸ್ಸಿಗೆ ದಾರಿಯಾಗಿದೆ. ಇವೇ ಮೂಲಗಳ ಪ್ರಕಾರ, ಇಂದಿನ ದಿಲ್ಲಿ ಭೇಟಿಯ ಸಂದರ್ಭದಲ್ಲಿ ವರಿಷ್ಠರು ಸಿಎಂ-ಡಿಸಿಎಂ ಅವರಿಗೆ ಒಗ್ಗಟ್ಟಿನ ಮಂತ್ರ ಬೋಧಿಸಿದರೂ ಉಭಯ ನಾಯಕರ ನಡುವಣ ಸಂಘರ್ಷ ತೀವ್ರವಾಗಲಿದೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…