Andolana originals

ಸರ್ಕಾರ ಮತ್ತು ಕಾಂಗ್ರೆಸ್‌ಗೆ ಮೇಜರ್‌ ಸರ್ಜರಿ

ರಾಜ್ಯದ ಎಲ್ಲಾ ಗೊಂದಲಗಳಿಗೂ ಪರಿಹಾರಕ್ಕೆ ಮುಂದಾದ ಹೈಕಮಾಂಡ್

ಆರ್.ಟಿ.ವಿಠ್ಠಲಮೂರ್ತಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನ ಎಲ್ಲ ಗೊಂದಲಗಳಿಗೂ ಪರಿಹಾರ ನೀಡಲು ಮುಂದಾಗಿರುವ ಕಾಂಗ್ರೆಸ್ ವರಿಷ್ಠರು,
ಸರ್ಕಾರ ಮತ್ತು ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು ಬಯಸಿದ್ದಾರೆ. ದಿಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಚರ್ಚಿಸಿದ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಅವರು ಈ ಇಂಗಿತ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಒಗ್ಗಟ್ಟಿನ ಮಂತ್ರವನ್ನು ಬೋಧಿಸಿದ ವರಿಷ್ಠರು, ಹೆಚ್ಚೂ ಕಡಿಮೆಯಾದರೆ ಸರ್ಕಾರಕ್ಕೆ ಅಪಾಯ ವಾಗಲಿದೆ ಎಂದು ಎಚ್ಚರಿಸಿದ್ದಾರೆ. ಇನ್ನು ಸಂಪುಟ ಪುನಾರಚನೆ, ವಿಧಾನ ಪರಿಷತ್ಗೆ ನಾಮಕರಣ, ಜಾತಿಗಣತಿ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವು ವಿಷಯಗಳಲ್ಲಿ ಸಿಎಂ-ಡಿಸಿಎಂ ನಡುವೆ ಭುಗಿಲೆದ್ದಿರುವ ಭಿನ್ನಾಭಿಪ್ರಾಯ ವರಿಷ್ಠರ ಮುಂದೆ ಬಹಿರಂಗವಾಗಿಯೇ ವ್ಯಕ್ತವಾಗಿದ್ದು, ಉಭಯ ನಾಯಕರ ನಡುವಣ ಭಿನ್ನಾಭಿಪ್ರಾಯಗಳಿಗೆ ಬ್ರೇಕ್ ಹಾಕಲು ವರಿಷ್ಠರು ಹರಸಾಹಸ ನಡೆಸಿದರು ಎಂದು ಮೂಲಗಳು ಹೇಳಿವೆ.

ನಾಲ್ವರನ್ನು ವಿಧಾನಪರಿಷತ್ಗೆ ನಾಮಕರಣ ಮಾಡುವಾಗ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗಿದೆ. ಹೀಗಾಗಿ ಈ ಹೆಸರುಗಳನ್ನು ಬದಲಿಸಬೇಕು ಎಂದು ಸಭೆಯಲ್ಲಿ ಡಿಕೆಶಿ ಪಟ್ಟು ಹಿಡಿದರು. ಇದೇ ರೀತಿ ಸಂಪುಟ ಪುನಾರಚನೆಯ ಅಗತ್ಯವಿಲ್ಲ, ಜಾತಿ ಗಣತಿಯನ್ನು ಜಾರಿ ಮಾಡಲು ಹೊರಟರೆ ಸರ್ಕಾರಕ್ಕೆ
ಅಪಾಯವಿದೆ ಎಂದು ಡಿಕೆಶಿ ಎಚ್ಚರಿಸಿದರು. ಆದರೆ ವಿಧಾನಪರಿಷತ್ ನಾಮಕರಣ ಪಟ್ಟಿಯಲ್ಲಿ ಅಗತ್ಯ ಕಂಡರೆ ಅಲ್ಪ ಬದಲಾವಣೆ ಮಾಡುವುದಾಗಿ ಹೇಳಿದ ವರಿಷ್ಠರು, ಬೆಂಗಳೂರಿನ ಕಾಲ್ತುಳಿತ ಪ್ರಕರಣದಿಂದ ಪಕ್ಷದ ಇಮೇಜ್ಗಾದ ಹಾನಿಯ ಬಗ್ಗೆ ಪ್ರಸ್ತಾಪಿಸಿ ಆಕ್ಷೇಪ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಡಿಕೆಶಿ ಹೆಜ್ಜೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ವರಿಷ್ಠರು, ಆರ್ಸಿಬಿ ವಿಜಯೋತ್ಸವದ ಬಗ್ಗೆ ರಾಜ್ಯ ಸರ್ಕಾರ ತಲೆ ಕೆಡಿಸಿಕೊಳ್ಳುವ ಅಗತ್ಯವಿರಲಿಲ್ಲ ಎಂದು ಹರಿಹಾಯ್ದರು ಎನ್ನಲಾಗಿದೆ. ಇವತ್ತಿನ ಸ್ಥಿತಿಯಲ್ಲಿ ಪಕ್ಷ ಮತ್ತು ಸರ್ಕಾರಕ್ಕೆ ಸರ್ಜರಿಯ ಅಗತ್ಯವಿದ್ದು, ಈ ಕುರಿತು ಕೆಲವೇ ದಿನಗಳಲ್ಲಿ ಸಂದೇಶ ರವಾನಿಸುವುದಾಗಿ ವರಿಷ್ಠರು ವಿವರಿಸಿದರು. ಜಾತಿ ಗಣತಿಯನ್ನು ಜಾರಿಗೊಳಿಸುವುದು ಪಕ್ಷದ ಅಜೆಂಡಾ. ಆದರೆ ಕರ್ನಾಟಕದಲ್ಲಿ ಹಿಂದೆ ನಡೆದಿರುವ ಜಾತಿಗಣತಿ ಬಗ್ಗೆ ಅಲ್ಲಲ್ಲಿ ಆಕ್ಷೇಪಗಳು ಎದ್ದಿವೆ. ಹೀಗಾಗಿ ಮರುಗಣತಿ ನಡೆಸಿ ಎಂದು ವರಿಷ್ಠರು ವಿವರಿಸಿದರು.
ಹಲವು ವರ್ಷಗಳ ಹಿಂದೆ ನಡೆದ ಗಣತಿಯಾದ್ದರಿಂದ ಜನ ಸಂಖ್ಯೆಯ ವಿಷಯದಲ್ಲಿ ಹಲವರು ಆಕ್ಷೇಪಗಳನ್ನು ಎತ್ತುತ್ತಿದ್ದಾರೆ. ಹೀಗಾಗಿ ಇಂತಹ ಆಕ್ಷೇಪಗಳನ್ನು ಪರಿಗಣಿಸಿ ಎರಡರಿಂದ ಮೂರು ತಿಂಗಳ ಒಳಗಾಗಿ ಮರುಗಣತಿ ನಡೆಸಿ ಎಂದು ಇದೇ ಸಂದರ್ಭದಲ್ಲಿ ವರಿಷ್ಠರು ವಿವರಿಸಿದರು.

ಇನ್ನಷ್ಟು ತೀವ್ರಗೊಳ್ಳಲಿದೆ ಸಂಘರ್ಷ
ಬೆಂಗಳೂರು: ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರ ದಿಲ್ಲಿ ಭೇಟಿ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಿಗೆ ಮುನ್ಸೂಚನೆಯಂತಿದ್ದು, ಮಂತ್ರಿ ಪದವಿ ಆಕಾಂಕ್ಷಿಗಳ ಸರ್ಕಸ್ಸಿಗೆ ದಾರಿಯಾಗಿದೆ. ಇವೇ ಮೂಲಗಳ ಪ್ರಕಾರ, ಇಂದಿನ ದಿಲ್ಲಿ ಭೇಟಿಯ ಸಂದರ್ಭದಲ್ಲಿ ವರಿಷ್ಠರು ಸಿಎಂ-ಡಿಸಿಎಂ ಅವರಿಗೆ ಒಗ್ಗಟ್ಟಿನ ಮಂತ್ರ ಬೋಧಿಸಿದರೂ ಉಭಯ ನಾಯಕರ ನಡುವಣ ಸಂಘರ್ಷ ತೀವ್ರವಾಗಲಿದೆ.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

9 mins ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

14 mins ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

37 mins ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

44 mins ago

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌…

1 hour ago

ಇರಾನ್‌ ಮೇಲೆ ಅಮೇರಿಕಾ ಭೀಕರ ದಾಳಿ: ಟಾಪ್‌ ಕಮಾಂಡರ್‌ಗಳ ಹತ್ಯೆ

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…

2 hours ago