Andolana originals

ʼಚಾಮುಂಡಿ ಬೆಟ್ಟ ದೇಗುಲದ ಆಸ್ತಿ; ಇರಲಿ ಯಥಾಸ್ಥಿತಿʼ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿ ಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶ್ರೀ ಚಾಮುಂಡೇಶರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿಂಧುತ್ವ ಪ್ರಶ್ನಿಸಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ‌ ಅವರಿದ್ದ ಏಕ ಸದಸ್ಯ ಪೀಠ ಮೇಲಿನಂತೆ ಸೂಚನೆ ನೀಡಿತು. ಮಂಗಳವಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗ ಬೇಕಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದರು.

ಪ್ರಮೋದಾದೇವಿ ಪರ ವಾದ ಮಂಡಿಸಿದ ವಕೀಲರು, ಚಾಮುಂಡೇಶ್ವರಿ ಕ್ಷೇತ್ರ ಮೈಸೂರು ರಾಜಮನೆತನದ ಖಾಸಗಿ ಆಸ್ತಿ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಪ್ರಾಧಿಕಾರ ರಚನೆಯಿಂದ ದೇವಾಲಯದ ಆಸ್ತಿ, ವಜ್ರ ವೈಡೂರ್ಯ ಸರ್ಕಾರದ ಸುಪರ್ದಿಗೆ ಹೋಗಲಿದೆ.

• ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ಸಲ್ಲಿಸಿದ್ದ
ತಕರಾರು ಅರ್ಜಿ ವಿಚಾರಣೆ
• ದೇವಸ್ಥಾನಕ್ಕೆ ಸಂಬಂಧಿಸಿದ ಚರ-ಸ್ಥಿರ ಆಸ್ತಿಗಳಲ್ಲಿ ಸದ್ಯ ಯಾವುದೇ ಬದಲಾವಣೆ ಮಾಡಬಾರದೆಂದು ಸೂಚನೆ

 

ಕ್ಷೇತ್ರದ ಧಾರ್ಮಿಕ ವಿಧಿ-ವಿಧಾನಗಳು, ಸಂಪ್ರದಾಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಲಿದೆ ಎಂದರು. ಚರ ಮತ್ತು ಸ್ಥಿರ ಆಸ್ತಿ ಗಳಲ್ಲಿ ವೇಗವಾಗಿ ಬದಲಾವಣೆ ತರಲಾಗು ತಿದೆ. ಪ್ರಾಧಿಕಾರ ರಚನೆಗೆ ಮಧ್ಯಂತರ ತಡೆ ನೀಡುವುದರ ಜೊತೆಗೆ ದೇವಾಲಯದ ಸಂಪ್ರದಾಯಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಮತ್ತು ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಬದಲಾವಣೆ ಮಾಡಬಾರದು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಎನ್. ದೇವದಾಸ್ ವಾದಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾ ಧೀಶರು ವಿಚಾರಣೆಯನ್ನು 5.258 ಮುಂದೂಡಿದರು. ಅಲ್ಲಿವರೆಗೆ ದೇಗುಲದೆ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದ ಲಾವಣೆಗಳನ್ನು ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದರು.

 

andolana

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

4 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

4 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

5 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

5 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

6 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

6 hours ago