ಬೆಂಗಳೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿ ಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಶ್ರೀ ಚಾಮುಂಡೇಶರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿಂಧುತ್ವ ಪ್ರಶ್ನಿಸಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ ಅವರಿದ್ದ ಏಕ ಸದಸ್ಯ ಪೀಠ ಮೇಲಿನಂತೆ ಸೂಚನೆ ನೀಡಿತು. ಮಂಗಳವಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗ ಬೇಕಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದರು.
ಪ್ರಮೋದಾದೇವಿ ಪರ ವಾದ ಮಂಡಿಸಿದ ವಕೀಲರು, ಚಾಮುಂಡೇಶ್ವರಿ ಕ್ಷೇತ್ರ ಮೈಸೂರು ರಾಜಮನೆತನದ ಖಾಸಗಿ ಆಸ್ತಿ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಪ್ರಾಧಿಕಾರ ರಚನೆಯಿಂದ ದೇವಾಲಯದ ಆಸ್ತಿ, ವಜ್ರ ವೈಡೂರ್ಯ ಸರ್ಕಾರದ ಸುಪರ್ದಿಗೆ ಹೋಗಲಿದೆ.
• ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ಸಲ್ಲಿಸಿದ್ದ
ತಕರಾರು ಅರ್ಜಿ ವಿಚಾರಣೆ
• ದೇವಸ್ಥಾನಕ್ಕೆ ಸಂಬಂಧಿಸಿದ ಚರ-ಸ್ಥಿರ ಆಸ್ತಿಗಳಲ್ಲಿ ಸದ್ಯ ಯಾವುದೇ ಬದಲಾವಣೆ ಮಾಡಬಾರದೆಂದು ಸೂಚನೆ
ಕ್ಷೇತ್ರದ ಧಾರ್ಮಿಕ ವಿಧಿ-ವಿಧಾನಗಳು, ಸಂಪ್ರದಾಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಲಿದೆ ಎಂದರು. ಚರ ಮತ್ತು ಸ್ಥಿರ ಆಸ್ತಿ ಗಳಲ್ಲಿ ವೇಗವಾಗಿ ಬದಲಾವಣೆ ತರಲಾಗು ತಿದೆ. ಪ್ರಾಧಿಕಾರ ರಚನೆಗೆ ಮಧ್ಯಂತರ ತಡೆ ನೀಡುವುದರ ಜೊತೆಗೆ ದೇವಾಲಯದ ಸಂಪ್ರದಾಯಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಮತ್ತು ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಬದಲಾವಣೆ ಮಾಡಬಾರದು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಎನ್. ದೇವದಾಸ್ ವಾದಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾ ಧೀಶರು ವಿಚಾರಣೆಯನ್ನು 5.258 ಮುಂದೂಡಿದರು. ಅಲ್ಲಿವರೆಗೆ ದೇಗುಲದೆ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದ ಲಾವಣೆಗಳನ್ನು ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದರು.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…