Andolana originals

ʼಚಾಮುಂಡಿ ಬೆಟ್ಟ ದೇಗುಲದ ಆಸ್ತಿ; ಇರಲಿ ಯಥಾಸ್ಥಿತಿʼ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿ ಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶ್ರೀ ಚಾಮುಂಡೇಶರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿಂಧುತ್ವ ಪ್ರಶ್ನಿಸಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ‌ ಅವರಿದ್ದ ಏಕ ಸದಸ್ಯ ಪೀಠ ಮೇಲಿನಂತೆ ಸೂಚನೆ ನೀಡಿತು. ಮಂಗಳವಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗ ಬೇಕಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದರು.

ಪ್ರಮೋದಾದೇವಿ ಪರ ವಾದ ಮಂಡಿಸಿದ ವಕೀಲರು, ಚಾಮುಂಡೇಶ್ವರಿ ಕ್ಷೇತ್ರ ಮೈಸೂರು ರಾಜಮನೆತನದ ಖಾಸಗಿ ಆಸ್ತಿ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಪ್ರಾಧಿಕಾರ ರಚನೆಯಿಂದ ದೇವಾಲಯದ ಆಸ್ತಿ, ವಜ್ರ ವೈಡೂರ್ಯ ಸರ್ಕಾರದ ಸುಪರ್ದಿಗೆ ಹೋಗಲಿದೆ.

• ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ಸಲ್ಲಿಸಿದ್ದ
ತಕರಾರು ಅರ್ಜಿ ವಿಚಾರಣೆ
• ದೇವಸ್ಥಾನಕ್ಕೆ ಸಂಬಂಧಿಸಿದ ಚರ-ಸ್ಥಿರ ಆಸ್ತಿಗಳಲ್ಲಿ ಸದ್ಯ ಯಾವುದೇ ಬದಲಾವಣೆ ಮಾಡಬಾರದೆಂದು ಸೂಚನೆ

 

ಕ್ಷೇತ್ರದ ಧಾರ್ಮಿಕ ವಿಧಿ-ವಿಧಾನಗಳು, ಸಂಪ್ರದಾಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಲಿದೆ ಎಂದರು. ಚರ ಮತ್ತು ಸ್ಥಿರ ಆಸ್ತಿ ಗಳಲ್ಲಿ ವೇಗವಾಗಿ ಬದಲಾವಣೆ ತರಲಾಗು ತಿದೆ. ಪ್ರಾಧಿಕಾರ ರಚನೆಗೆ ಮಧ್ಯಂತರ ತಡೆ ನೀಡುವುದರ ಜೊತೆಗೆ ದೇವಾಲಯದ ಸಂಪ್ರದಾಯಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಮತ್ತು ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಬದಲಾವಣೆ ಮಾಡಬಾರದು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಎನ್. ದೇವದಾಸ್ ವಾದಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾ ಧೀಶರು ವಿಚಾರಣೆಯನ್ನು 5.258 ಮುಂದೂಡಿದರು. ಅಲ್ಲಿವರೆಗೆ ದೇಗುಲದೆ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದ ಲಾವಣೆಗಳನ್ನು ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದರು.

 

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago