ಬೆಂಗಳೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿ ಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಶ್ರೀ ಚಾಮುಂಡೇಶರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿಂಧುತ್ವ ಪ್ರಶ್ನಿಸಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ ಅವರಿದ್ದ ಏಕ ಸದಸ್ಯ ಪೀಠ ಮೇಲಿನಂತೆ ಸೂಚನೆ ನೀಡಿತು. ಮಂಗಳವಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗ ಬೇಕಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದರು.
ಪ್ರಮೋದಾದೇವಿ ಪರ ವಾದ ಮಂಡಿಸಿದ ವಕೀಲರು, ಚಾಮುಂಡೇಶ್ವರಿ ಕ್ಷೇತ್ರ ಮೈಸೂರು ರಾಜಮನೆತನದ ಖಾಸಗಿ ಆಸ್ತಿ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಪ್ರಾಧಿಕಾರ ರಚನೆಯಿಂದ ದೇವಾಲಯದ ಆಸ್ತಿ, ವಜ್ರ ವೈಡೂರ್ಯ ಸರ್ಕಾರದ ಸುಪರ್ದಿಗೆ ಹೋಗಲಿದೆ.
• ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ಸಲ್ಲಿಸಿದ್ದ
ತಕರಾರು ಅರ್ಜಿ ವಿಚಾರಣೆ
• ದೇವಸ್ಥಾನಕ್ಕೆ ಸಂಬಂಧಿಸಿದ ಚರ-ಸ್ಥಿರ ಆಸ್ತಿಗಳಲ್ಲಿ ಸದ್ಯ ಯಾವುದೇ ಬದಲಾವಣೆ ಮಾಡಬಾರದೆಂದು ಸೂಚನೆ
ಕ್ಷೇತ್ರದ ಧಾರ್ಮಿಕ ವಿಧಿ-ವಿಧಾನಗಳು, ಸಂಪ್ರದಾಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಲಿದೆ ಎಂದರು. ಚರ ಮತ್ತು ಸ್ಥಿರ ಆಸ್ತಿ ಗಳಲ್ಲಿ ವೇಗವಾಗಿ ಬದಲಾವಣೆ ತರಲಾಗು ತಿದೆ. ಪ್ರಾಧಿಕಾರ ರಚನೆಗೆ ಮಧ್ಯಂತರ ತಡೆ ನೀಡುವುದರ ಜೊತೆಗೆ ದೇವಾಲಯದ ಸಂಪ್ರದಾಯಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಮತ್ತು ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಬದಲಾವಣೆ ಮಾಡಬಾರದು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಎನ್. ದೇವದಾಸ್ ವಾದಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾ ಧೀಶರು ವಿಚಾರಣೆಯನ್ನು 5.258 ಮುಂದೂಡಿದರು. ಅಲ್ಲಿವರೆಗೆ ದೇಗುಲದೆ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದ ಲಾವಣೆಗಳನ್ನು ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…