Andolana originals

ಪಾರ್ಕಿಂಗ್ ತಾಣವಾದ ಹೈವೇ ಸರ್ವಿಸ್ ರಸ್ತೆ!

ಎಂ.ಆರ್.ಚಕ್ರಪಾಣಿ

ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ 

ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ ತಂಗುದಾಣವಾಗಿ (ಪಾರ್ಕಿಂಗ್) ಮಾರ್ಪಟ್ಟಿದ್ದು, ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ನಗರದ ಎಳನೀರು ಮಾರುಕಟ್ಟೆ, ತಾಲ್ಲೂಕು ಕಚೇರಿ ಮುಂಭಾಗ, ನ್ಯಾಯಾಲಯದ ಮುಂಭಾಗ, ಶಿವಪುರದಿಂದ ಗೆಜ್ಜಲಗೆರೆಯವರೆಗೆ ಬಹುತೇಕ ಕಡೆಗಳಲ್ಲಿ ಕಾರು, ಬೈಕು, ಲಾರಿ, ಜೆಸಿಬಿ ಸೇರಿದಂತೆ ವಿವಿಧ ವಾಹನಗಳನ್ನು ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಲಾಗುತ್ತಿದೆ.

ಇದು ಸರ್ವಿಸ್ ರಸ್ತೆಯೋ? ಅಥವಾ ವಾಹನಗಳನ್ನು ನಿಲ್ಲಿಸಲು ಮಾಡಿರುವ ವ್ಯವಸ್ಥಿತವಾದ ಪಾರ್ಕಿಗ್ ತಾಣವೋ ಎಂಬ ಗೊಂದಲ ವಾಹನ ಸವಾರರು ಮತ್ತು ಸಾರ್ವಜನಿಕರನ್ನು ಕಾಡುತ್ತಿದೆ. ಪಟ್ಟಣದ ನ್ಯಾಯಾಲಯದ ಆವರಣದ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಸರತಿ ಸಾಲಿನಲ್ಲಿ ಕಾರು, ಬೈಕ್‌ಗಳನ್ನು ನಿಲ್ಲಿಸಲಾಗಿರುತ್ತದೆ. ಇದರಿಂದಲೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಇದರ ಜೊತೆಗೆ ಗ್ಯಾರೇಜ್ ಕೆಲಸ ಮಾಡುವವರು ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ರಿಪೇರಿ ಮಾಡುತ್ತಿರುತ್ತಾರೆ.

ಕೆಟ್ಟಿರುವ ವಾಹನಗಳನ್ನು ನಿಲ್ಲಿಸುವುದು ಹಾಗೂ ಇದರ ಜೊತೆಗೆ ಇತರ ಕೆಲಸಗಳನ್ನು ಮಾಡುತ್ತಿರುವುದು ಕಂಡು ಬರುತ್ತಿದೆ. ಟಿಬಿ ವೃತ್ತದಲ್ಲಿಯೂ ಇದೇ ಸಮಸ್ಯೆ ಇದೆ. ಏಷ್ಯಾ ಖಂಡದಲ್ಲೇ ಅತಿ ದೊಡ್ಡದಾದ ಎಳನೀರು ಮಾರುಕಟ್ಟೆ ಎಂಬ ಖ್ಯಾತಿ ಇರುವ ಮಾರುಕಟ್ಟೆಗೆ ಎಳನೀರು ತುಂಬಿಕೊಂಡು ಬರುವ ವಾಹನಗಳನ್ನು ವರ್ತಕರು ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿಕೊಂಡಿರುತ್ತಾರೆ. ಈ ಕಾರಣಕ್ಕಾಗಿ ಸರ್ವಿಸ್ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲು ಹರಸಾಹಸ ಪಡಬೇಕಾಗಿದೆ.

ಸದಾಕಾಲ ಇಲ್ಲಿ ನೆರಳು ಇರುವುದರಿಂದ ವಾಹನಗಳನ್ನು ನಿಲ್ಲಿಸುವ ಪರಿಪಾಠ ಹೆಚ್ಚಾಗಿದ್ದು, ಕೆಲ ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗುತ್ತದೆ. ಇಲ್ಲಿಗೆ ಒಬ್ಬ ಸಂಚಾರ ಪೊಲೀಸ್ ಪೇದೆಯನ್ನು ನೇಮಿಸದಿರುವುದು ವಿಪರ್ಯಾಸದ ಸಂಗತಿ.

ಅಧಿಕಾರಿಗಳ ಜಾಣಕುರುಡು: 

ವಾಹನ ನಿಲುಗಡೆಗೆ ನೀತಿ ನಿಯಮ ಪಾಲಿಸದ ಕಾರಣ ಸುಗಮ ಸಂಚಾರಕ್ಕೆ ತೊಂದರೆಯಾಗುವುದು ಸಹಜ. ಸಾರ್ವಜನಿಕರು ಸರ್ವಿಸ್ ರಸ್ತೆಯಲ್ಲಿ ಸಂಚರಿಸಲು ಕಷ್ಟವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಪೊಲೀಸರು ನಿತ್ಯ ನೋಡುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಏಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಪೊಲೀಸರು ಸರ್ವಿಸ್ ರಸ್ತೆಯಲ್ಲಿ ವಾಹನ ನಿಲ್ಲಿಸದಂತೆ ಕ್ರಮ ಕೈಗೊಂಡು, ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಿದೆ.

” ಮದ್ದೂರು ವ್ಯಾಪ್ತಿಯ ಬಹುತೇಕ ಕಡೆಗಳಲ್ಲಿರುವ ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸುಗಮ ಸಂಚಾ ರಕ್ಕೆ ತೊಂದರೆ ಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ವಾಹನ ಸವಾರರಿಗೆ ಅನುಕೂಲ ಕಲ್ಪಿಸಿ ಕೊಡಬೇಕು.”

-ಚೆನ್ನಪ್ಪ, ನಿವೃತ್ತ ಶಿಕ್ಷಕ

ಎಲ್ಲೆಂದರಲ್ಲಿ ನಿಲ್ಲುವ ಬಸ್‌ಗಳು!:  ಪಟ್ಟಣದ ಹೊಸಕೊಲ್ಲಿ ಸರ್ಕಲ್ ಬಳಿಯ ಸರ್ವಿಸ್ ರಸ್ತೆ, ಬಸ್ ನಿಲ್ದಾಣದ ಮುಂದಿರುವ ಸರ್ವಿಸ್ ರಸ್ತೆ ಮತ್ತು ಪ್ರವಾಸಿ ಮಂದಿರದ ಬಳಿ ಇರುವ ಸರ್ವಿಸ್ ರಸ್ತೆ ಬಳಿ, ತಾಲ್ಲೂಕು ಕಚೇರಿ, ನ್ಯಾಯಾಲಯದ ಮುಂಭಾಗ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಎಲ್ಲೆಂದರಲ್ಲಿ ನಿಲ್ಲಿಸಿ ಜನರನ್ನು ಹತ್ತಿಸಿಕೊಳ್ಳುವುದು, ಇಳಿಸುವುದು ಪರಿಪಾಠವಾಗಿದೆ. ಜನರು ಕೈ ತೋರಿದ ಕಡೆ ಏಕಾಏಕಿ ವಾಹನಗಳನ್ನು ನಿಲ್ಲಿಸುವುದರಿಂದ ಹಲವು ಬಾರಿ ಹಿಂದಿನಿಂದ ಬರುತ್ತಿರುವ ವಾಹನಗಳು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಖಾಸಗಿ ಬಸ್,ಆಟೋ,ಟೆಂಪೋಗಳವರ ಬೇಜವಾಬ್ದಾರಿಯೂ ಇದಕ್ಕೆ ಕಾರಣವಾಗಿದೆ. ಸಂಚಾರಿ ಪೊಲೀಸರು ಈ ಬಗ್ಗೆ ಕ್ರಮ ವಹಿಸಬೇಕಿದೆ.

 

 

ಆಂದೋಲನ ಡೆಸ್ಕ್

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

8 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

20 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

23 hours ago