ಎಂ.ಆರ್.ಚಕ್ರಪಾಣಿ
ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ
ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ ತಂಗುದಾಣವಾಗಿ (ಪಾರ್ಕಿಂಗ್) ಮಾರ್ಪಟ್ಟಿದ್ದು, ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ನಗರದ ಎಳನೀರು ಮಾರುಕಟ್ಟೆ, ತಾಲ್ಲೂಕು ಕಚೇರಿ ಮುಂಭಾಗ, ನ್ಯಾಯಾಲಯದ ಮುಂಭಾಗ, ಶಿವಪುರದಿಂದ ಗೆಜ್ಜಲಗೆರೆಯವರೆಗೆ ಬಹುತೇಕ ಕಡೆಗಳಲ್ಲಿ ಕಾರು, ಬೈಕು, ಲಾರಿ, ಜೆಸಿಬಿ ಸೇರಿದಂತೆ ವಿವಿಧ ವಾಹನಗಳನ್ನು ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಲಾಗುತ್ತಿದೆ.
ಇದು ಸರ್ವಿಸ್ ರಸ್ತೆಯೋ? ಅಥವಾ ವಾಹನಗಳನ್ನು ನಿಲ್ಲಿಸಲು ಮಾಡಿರುವ ವ್ಯವಸ್ಥಿತವಾದ ಪಾರ್ಕಿಗ್ ತಾಣವೋ ಎಂಬ ಗೊಂದಲ ವಾಹನ ಸವಾರರು ಮತ್ತು ಸಾರ್ವಜನಿಕರನ್ನು ಕಾಡುತ್ತಿದೆ. ಪಟ್ಟಣದ ನ್ಯಾಯಾಲಯದ ಆವರಣದ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಸರತಿ ಸಾಲಿನಲ್ಲಿ ಕಾರು, ಬೈಕ್ಗಳನ್ನು ನಿಲ್ಲಿಸಲಾಗಿರುತ್ತದೆ. ಇದರಿಂದಲೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಇದರ ಜೊತೆಗೆ ಗ್ಯಾರೇಜ್ ಕೆಲಸ ಮಾಡುವವರು ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ರಿಪೇರಿ ಮಾಡುತ್ತಿರುತ್ತಾರೆ.
ಕೆಟ್ಟಿರುವ ವಾಹನಗಳನ್ನು ನಿಲ್ಲಿಸುವುದು ಹಾಗೂ ಇದರ ಜೊತೆಗೆ ಇತರ ಕೆಲಸಗಳನ್ನು ಮಾಡುತ್ತಿರುವುದು ಕಂಡು ಬರುತ್ತಿದೆ. ಟಿಬಿ ವೃತ್ತದಲ್ಲಿಯೂ ಇದೇ ಸಮಸ್ಯೆ ಇದೆ. ಏಷ್ಯಾ ಖಂಡದಲ್ಲೇ ಅತಿ ದೊಡ್ಡದಾದ ಎಳನೀರು ಮಾರುಕಟ್ಟೆ ಎಂಬ ಖ್ಯಾತಿ ಇರುವ ಮಾರುಕಟ್ಟೆಗೆ ಎಳನೀರು ತುಂಬಿಕೊಂಡು ಬರುವ ವಾಹನಗಳನ್ನು ವರ್ತಕರು ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿಕೊಂಡಿರುತ್ತಾರೆ. ಈ ಕಾರಣಕ್ಕಾಗಿ ಸರ್ವಿಸ್ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲು ಹರಸಾಹಸ ಪಡಬೇಕಾಗಿದೆ.
ಸದಾಕಾಲ ಇಲ್ಲಿ ನೆರಳು ಇರುವುದರಿಂದ ವಾಹನಗಳನ್ನು ನಿಲ್ಲಿಸುವ ಪರಿಪಾಠ ಹೆಚ್ಚಾಗಿದ್ದು, ಕೆಲ ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗುತ್ತದೆ. ಇಲ್ಲಿಗೆ ಒಬ್ಬ ಸಂಚಾರ ಪೊಲೀಸ್ ಪೇದೆಯನ್ನು ನೇಮಿಸದಿರುವುದು ವಿಪರ್ಯಾಸದ ಸಂಗತಿ.
ಅಧಿಕಾರಿಗಳ ಜಾಣಕುರುಡು:
ವಾಹನ ನಿಲುಗಡೆಗೆ ನೀತಿ ನಿಯಮ ಪಾಲಿಸದ ಕಾರಣ ಸುಗಮ ಸಂಚಾರಕ್ಕೆ ತೊಂದರೆಯಾಗುವುದು ಸಹಜ. ಸಾರ್ವಜನಿಕರು ಸರ್ವಿಸ್ ರಸ್ತೆಯಲ್ಲಿ ಸಂಚರಿಸಲು ಕಷ್ಟವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಪೊಲೀಸರು ನಿತ್ಯ ನೋಡುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಏಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಪೊಲೀಸರು ಸರ್ವಿಸ್ ರಸ್ತೆಯಲ್ಲಿ ವಾಹನ ನಿಲ್ಲಿಸದಂತೆ ಕ್ರಮ ಕೈಗೊಂಡು, ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಿದೆ.
” ಮದ್ದೂರು ವ್ಯಾಪ್ತಿಯ ಬಹುತೇಕ ಕಡೆಗಳಲ್ಲಿರುವ ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸುಗಮ ಸಂಚಾ ರಕ್ಕೆ ತೊಂದರೆ ಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ವಾಹನ ಸವಾರರಿಗೆ ಅನುಕೂಲ ಕಲ್ಪಿಸಿ ಕೊಡಬೇಕು.”
-ಚೆನ್ನಪ್ಪ, ನಿವೃತ್ತ ಶಿಕ್ಷಕ
ಎಲ್ಲೆಂದರಲ್ಲಿ ನಿಲ್ಲುವ ಬಸ್ಗಳು!: ಪಟ್ಟಣದ ಹೊಸಕೊಲ್ಲಿ ಸರ್ಕಲ್ ಬಳಿಯ ಸರ್ವಿಸ್ ರಸ್ತೆ, ಬಸ್ ನಿಲ್ದಾಣದ ಮುಂದಿರುವ ಸರ್ವಿಸ್ ರಸ್ತೆ ಮತ್ತು ಪ್ರವಾಸಿ ಮಂದಿರದ ಬಳಿ ಇರುವ ಸರ್ವಿಸ್ ರಸ್ತೆ ಬಳಿ, ತಾಲ್ಲೂಕು ಕಚೇರಿ, ನ್ಯಾಯಾಲಯದ ಮುಂಭಾಗ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಎಲ್ಲೆಂದರಲ್ಲಿ ನಿಲ್ಲಿಸಿ ಜನರನ್ನು ಹತ್ತಿಸಿಕೊಳ್ಳುವುದು, ಇಳಿಸುವುದು ಪರಿಪಾಠವಾಗಿದೆ. ಜನರು ಕೈ ತೋರಿದ ಕಡೆ ಏಕಾಏಕಿ ವಾಹನಗಳನ್ನು ನಿಲ್ಲಿಸುವುದರಿಂದ ಹಲವು ಬಾರಿ ಹಿಂದಿನಿಂದ ಬರುತ್ತಿರುವ ವಾಹನಗಳು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಖಾಸಗಿ ಬಸ್,ಆಟೋ,ಟೆಂಪೋಗಳವರ ಬೇಜವಾಬ್ದಾರಿಯೂ ಇದಕ್ಕೆ ಕಾರಣವಾಗಿದೆ. ಸಂಚಾರಿ ಪೊಲೀಸರು ಈ ಬಗ್ಗೆ ಕ್ರಮ ವಹಿಸಬೇಕಿದೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…