ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೆ ಅಂಬಾವಿಲಾಸ ಅರಮನೆಯನ್ನು ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇದೀಗ ಅರಮನೆ ಮಂಡಳಿ ಟಿಕೆಟ್ ದರ ಏರಿಕೆಯ ಶಾಕ್ ನೀಡಿದೆ.
ಇದರಿಂದಾಗಿ ವಿಶ್ವ ವಿಖ್ಯಾತ ಮೈಸೂರು ಅರ ಮನೆಗೆ ದೇಶ- ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳಲಿದ್ದು, ಕುಟುಂಬ ಸಮೇತ ಅರಮನೆ ವೀಕ್ಷಣೆಯು ಈಗ ದುಬಾರಿಯಾಗಲಿದೆ. ವಯಸ್ಕರಿಗೆ ಇದ್ದ ಟಿಕೆಟ್ ದರವನ್ನು ೧೦೦ ರೂ. ನಿಂದ ೧೨೦ ರೂ. ಗೆ ಏರಿಕೆ ಮಾಡಲಾಗಿದೆ. ವಿದೇಶಿ ಪ್ರವಾಸಿಗರ ಟಿಕೆಟ್ ದರವನ್ನು ೩೦೦ ರೂ. ನಿಂದ ಒಂದು ಸಾವಿರ ರೂ. ಗಳಿಗೆ ಏರಿಸ ಲಾಗಿದೆ. ೧೦ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ೫೦ರೂ. ನಿಂದ ೭೦ ರೂ. ಗೆ ಹೆಚ್ಚಿಸಲಾಗಿದೆ.
ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರ ೫೦ ರೂ. ಹಾಗೂ ವಿದೇಶಿ ಪ್ರವಾಸಿಗರಿಗೆ ೧೦೦೦ ರೂ. ಅನುಮೋದಿತ ಪರಿಷ್ಕತ ಶುಲ್ಕವನ್ನು ನಿಗದಿ ಮಾಡಲಾಗಿದೆ, ಧ್ವನಿ ಮತ್ತು ಬೆಳಕು ವೀಕ್ಷಣೆಗೆ ೭೦ ರೂ. ನಿಗದಿಪಡಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿಎಸ್ ಸುಬ್ರಹ್ಮಣ್ಯ ತಿಳಿಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳಿಗೆ ಶುಲ್ಕವನ್ನು ಕೈಬಿಟ್ಟು ಪ್ರವಾಸಿಗರಿಗೆ ಉಚಿತಗೊಳಿಸಿ, ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…