Andolana originals

ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೆ ಅಂಬಾವಿಲಾಸ ಅರಮನೆಯನ್ನು ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇದೀಗ ಅರಮನೆ ಮಂಡಳಿ ಟಿಕೆಟ್ ದರ ಏರಿಕೆಯ ಶಾಕ್ ನೀಡಿದೆ.

ಇದರಿಂದಾಗಿ ವಿಶ್ವ ವಿಖ್ಯಾತ ಮೈಸೂರು ಅರ ಮನೆಗೆ ದೇಶ- ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳಲಿದ್ದು, ಕುಟುಂಬ ಸಮೇತ ಅರಮನೆ ವೀಕ್ಷಣೆಯು ಈಗ ದುಬಾರಿಯಾಗಲಿದೆ. ವಯಸ್ಕರಿಗೆ ಇದ್ದ ಟಿಕೆಟ್ ದರವನ್ನು ೧೦೦ ರೂ. ನಿಂದ ೧೨೦ ರೂ. ಗೆ ಏರಿಕೆ ಮಾಡಲಾಗಿದೆ. ವಿದೇಶಿ ಪ್ರವಾಸಿಗರ ಟಿಕೆಟ್ ದರವನ್ನು ೩೦೦ ರೂ. ನಿಂದ ಒಂದು ಸಾವಿರ ರೂ. ಗಳಿಗೆ ಏರಿಸ ಲಾಗಿದೆ. ೧೦ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ೫೦ರೂ. ನಿಂದ ೭೦ ರೂ. ಗೆ ಹೆಚ್ಚಿಸಲಾಗಿದೆ.

ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರ ೫೦ ರೂ. ಹಾಗೂ ವಿದೇಶಿ ಪ್ರವಾಸಿಗರಿಗೆ ೧೦೦೦ ರೂ. ಅನುಮೋದಿತ ಪರಿಷ್ಕತ ಶುಲ್ಕವನ್ನು ನಿಗದಿ ಮಾಡಲಾಗಿದೆ, ಧ್ವನಿ ಮತ್ತು ಬೆಳಕು ವೀಕ್ಷಣೆಗೆ ೭೦ ರೂ. ನಿಗದಿಪಡಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿಎಸ್‌ ಸುಬ್ರಹ್ಮಣ್ಯ ತಿಳಿಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳಿಗೆ ಶುಲ್ಕವನ್ನು ಕೈಬಿಟ್ಟು ಪ್ರವಾಸಿಗರಿಗೆ ಉಚಿತಗೊಳಿಸಿ, ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

andolana

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

8 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

8 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

8 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

9 hours ago