ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೆ ಅಂಬಾವಿಲಾಸ ಅರಮನೆಯನ್ನು ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇದೀಗ ಅರಮನೆ ಮಂಡಳಿ ಟಿಕೆಟ್ ದರ ಏರಿಕೆಯ ಶಾಕ್ ನೀಡಿದೆ.
ಇದರಿಂದಾಗಿ ವಿಶ್ವ ವಿಖ್ಯಾತ ಮೈಸೂರು ಅರ ಮನೆಗೆ ದೇಶ- ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳಲಿದ್ದು, ಕುಟುಂಬ ಸಮೇತ ಅರಮನೆ ವೀಕ್ಷಣೆಯು ಈಗ ದುಬಾರಿಯಾಗಲಿದೆ. ವಯಸ್ಕರಿಗೆ ಇದ್ದ ಟಿಕೆಟ್ ದರವನ್ನು ೧೦೦ ರೂ. ನಿಂದ ೧೨೦ ರೂ. ಗೆ ಏರಿಕೆ ಮಾಡಲಾಗಿದೆ. ವಿದೇಶಿ ಪ್ರವಾಸಿಗರ ಟಿಕೆಟ್ ದರವನ್ನು ೩೦೦ ರೂ. ನಿಂದ ಒಂದು ಸಾವಿರ ರೂ. ಗಳಿಗೆ ಏರಿಸ ಲಾಗಿದೆ. ೧೦ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ೫೦ರೂ. ನಿಂದ ೭೦ ರೂ. ಗೆ ಹೆಚ್ಚಿಸಲಾಗಿದೆ.
ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರ ೫೦ ರೂ. ಹಾಗೂ ವಿದೇಶಿ ಪ್ರವಾಸಿಗರಿಗೆ ೧೦೦೦ ರೂ. ಅನುಮೋದಿತ ಪರಿಷ್ಕತ ಶುಲ್ಕವನ್ನು ನಿಗದಿ ಮಾಡಲಾಗಿದೆ, ಧ್ವನಿ ಮತ್ತು ಬೆಳಕು ವೀಕ್ಷಣೆಗೆ ೭೦ ರೂ. ನಿಗದಿಪಡಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿಎಸ್ ಸುಬ್ರಹ್ಮಣ್ಯ ತಿಳಿಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳಿಗೆ ಶುಲ್ಕವನ್ನು ಕೈಬಿಟ್ಟು ಪ್ರವಾಸಿಗರಿಗೆ ಉಚಿತಗೊಳಿಸಿ, ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…