ಓದುಗರ ಪತ್ರ
ಮೈಸೂರು ಆಕಾಶವಾಣಿಯಲ್ಲಿ ಪ್ರಸಾರವಾಗುವ ಹಿಂದಿ ಪಾಠ ಕಾರ್ಯಕ್ರಮವನ್ನು ಪ್ರಸ್ತುತಪಡಿಸುವರು ಹಾಗೂ ನಿರೂಪಿಸುವವರು ಹಿಂದಿ ರಾಷ್ಟ್ರ ಭಾಷಾ ಕಾರ್ಯಕ್ರಮ ಎಂದು ಹೇಳುತ್ತಿದ್ದಾರೆ. ದೇಶದ ಜನರಿಗೆ ತಿಳಿದ ಹಾಗೆ ಹಿಂದಿ ಭಾರತದ ಸಂವಿಧಾನದಲ್ಲಿ ಮಾನ್ಯತೆ ಪಡೆದ ೨೨ ಭಾಷೆಗಳಲ್ಲಿ ಒಂದು ಅಧಿಕೃತ ಭಾಷೆಯಷ್ಟೆ. ಕನ್ನಡ ಭಾಷೆಯಷ್ಟು ಹಿಂದಿ ಪ್ರಾಚೀನ ಭಾಷೆಯಲ್ಲ. ಹಿಂದಿಯೇತರ ರಾಜ್ಯಗಳಲ್ಲಿ ಅದಕ್ಕೆ ಯಾವ ಮಾನ್ಯತೆಯೂ ಇಲ್ಲ.
ಹೀಗಿರುವಾಗ, ಹಿಂದಿ ರಾಷ್ಟ್ರ ಭಾಷೆ ಎಂದು ಹೇಳಿ ಜನರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಉದ್ದೇಶ ಪೂರ್ವಕವಾಗಿ ತಪ್ಪು ಮಾಹಿತಿ ನೀಡುತ್ತಿದ್ದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಮೈಸೂರು ಆಕಾಶವಾಣಿ ಕೇಂದ್ರದ ನಿರ್ದೇಶಕರು ಗಮನ ಹರಿಸಿ ಇನ್ನು ಮುಂದೆ ಹೀಗಾಗದಂತೆ ಕ್ರಮ ವಹಿಸಬೇಕಾಗಿದೆ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…