Andolana originals

ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಮುಖಂಡರು

ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.

ಮೈಸೂರಿನಲ್ಲಿ ಈದ್‌ಮಿಲಾದ್, ಗಣೇಶೋತ್ಸವ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಹಿಂದೂ-ಮುಸ್ಲಿಂ ಸಮುದಾಯ ದವರು ಭಾವೈಕ್ಯತೆ ಮೆರೆದು ಇತರರಿಗೂ ಮಾದರಿಯಾಗಿದ್ದಾರೆ. ನಗರದ ಸುಣ್ಣದಕೇರಿ ಬಡಾವಣೆಯಲ್ಲಿ ಶ್ರೀ ವಿನಾಯಕ ಯುವಕರ ಬಳಗ ವತಿಯಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಗಿದ್ದ ಸ್ಥಳಕ್ಕೆ ಆಗಮಿಸಿದ ಮುಸ್ಲಿಂ ಸಮುದಾಯದ ಮುಖಂಡರು ಈದ್‌ಮಿಲಾದ್ ಪ್ರಯುಕ್ತ ಶುಭಾಶಯ ವಿನಿಮಯ ಮಾಡಿ ಕೊಂಡರು. ಈದ್‌ಮಿಲಾದ್ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಬಾಂಧವರು ನೇರವಾಗಿ ಗಣೇಶ ಪ್ರತಿ ಷ್ಠಾಪನೆ ಸ್ಥಳಕ್ಕೆ ಆಗಮಿಸಿ ಶುಭಾಶಯ ಹೇಳಿದರು. ಶಾಲಾ ಮಕ್ಕಳಿಗೆ ಹೋಳಿಗೆ ಕೊಟ್ಟು ಪುಸ್ತಕಗಳನ್ನು ವಿತರಿಸಿದರು. ಹೊರಗಿನ ವಿಚಾರಕ್ಕೆ ಸ್ಪದ ಕೊಡದೆ ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಕೂಡಿ ಬಾಳೋಣ ಎನ್ನುವ ಶಪಥ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್‌ಬಾಬು, ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತವೆ, ಪ್ರತಿವರ್ಷವೂ ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳು ಸಮೀಪದಲ್ಲೇ ಬರುವುದರಿಂದ ಉಭಯ ಸಮಾಜದವರು ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿ ಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳಬೇಕು ಎಂದರು. ಹಬ್ಬಗಳು ಎಲ್ಲರನ್ನೂ ಒಂದು ಗೂಡಿಸುವಂತೆ ನಡೆಯುತ್ತದೆ. ಆದರೆ, ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಗೊಂದಲ ಮೂಡಿಸ ಬಾರದು. ದೇವನೊಬ್ಬ ನಾಮ ಹಲವು ಎನ್ನುವಂತೆ ನಾವೆಲ್ಲರೂ ಮನುಷ್ಯರು ಎಂಬುದನ್ನು ಅರಿಯಬೇಕು ಎಂದರು. ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಶ್ರೀ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಮಂಜುನಾಥ್, ಕಿಶೋರ್ ಕುಮಾರ್, ಜಿ. ರಾಘವೇಂದ್ರ, ಬ್ಯಾಂಕ್ ಸಿದ್ದರಾಜು, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷ ಹಿನಕಲ್ ಉದಯ್, ಕಿರಣ್, ಚಕ್ರಪಾಣಿ, ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷ, ಗುಲ್ಚನ್ ಪಾಷ, ಇರ್ಫಾನ್, ಸೈಯಾದ್, ಇಮ್ರಾನ್ ಪಾಷ, ಮಹಮ್ಮದ್, ಶಫಿಉಲ್ಲಾ ಖಾನ್ ಹಾಜರಿದ್ದರು.

 

andolana

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

5 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

5 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

5 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

7 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

8 hours ago