Andolana originals

ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಮುಖಂಡರು

ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.

ಮೈಸೂರಿನಲ್ಲಿ ಈದ್‌ಮಿಲಾದ್, ಗಣೇಶೋತ್ಸವ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಹಿಂದೂ-ಮುಸ್ಲಿಂ ಸಮುದಾಯ ದವರು ಭಾವೈಕ್ಯತೆ ಮೆರೆದು ಇತರರಿಗೂ ಮಾದರಿಯಾಗಿದ್ದಾರೆ. ನಗರದ ಸುಣ್ಣದಕೇರಿ ಬಡಾವಣೆಯಲ್ಲಿ ಶ್ರೀ ವಿನಾಯಕ ಯುವಕರ ಬಳಗ ವತಿಯಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಗಿದ್ದ ಸ್ಥಳಕ್ಕೆ ಆಗಮಿಸಿದ ಮುಸ್ಲಿಂ ಸಮುದಾಯದ ಮುಖಂಡರು ಈದ್‌ಮಿಲಾದ್ ಪ್ರಯುಕ್ತ ಶುಭಾಶಯ ವಿನಿಮಯ ಮಾಡಿ ಕೊಂಡರು. ಈದ್‌ಮಿಲಾದ್ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಬಾಂಧವರು ನೇರವಾಗಿ ಗಣೇಶ ಪ್ರತಿ ಷ್ಠಾಪನೆ ಸ್ಥಳಕ್ಕೆ ಆಗಮಿಸಿ ಶುಭಾಶಯ ಹೇಳಿದರು. ಶಾಲಾ ಮಕ್ಕಳಿಗೆ ಹೋಳಿಗೆ ಕೊಟ್ಟು ಪುಸ್ತಕಗಳನ್ನು ವಿತರಿಸಿದರು. ಹೊರಗಿನ ವಿಚಾರಕ್ಕೆ ಸ್ಪದ ಕೊಡದೆ ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಕೂಡಿ ಬಾಳೋಣ ಎನ್ನುವ ಶಪಥ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್‌ಬಾಬು, ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತವೆ, ಪ್ರತಿವರ್ಷವೂ ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳು ಸಮೀಪದಲ್ಲೇ ಬರುವುದರಿಂದ ಉಭಯ ಸಮಾಜದವರು ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿ ಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳಬೇಕು ಎಂದರು. ಹಬ್ಬಗಳು ಎಲ್ಲರನ್ನೂ ಒಂದು ಗೂಡಿಸುವಂತೆ ನಡೆಯುತ್ತದೆ. ಆದರೆ, ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಗೊಂದಲ ಮೂಡಿಸ ಬಾರದು. ದೇವನೊಬ್ಬ ನಾಮ ಹಲವು ಎನ್ನುವಂತೆ ನಾವೆಲ್ಲರೂ ಮನುಷ್ಯರು ಎಂಬುದನ್ನು ಅರಿಯಬೇಕು ಎಂದರು. ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಶ್ರೀ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಮಂಜುನಾಥ್, ಕಿಶೋರ್ ಕುಮಾರ್, ಜಿ. ರಾಘವೇಂದ್ರ, ಬ್ಯಾಂಕ್ ಸಿದ್ದರಾಜು, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷ ಹಿನಕಲ್ ಉದಯ್, ಕಿರಣ್, ಚಕ್ರಪಾಣಿ, ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷ, ಗುಲ್ಚನ್ ಪಾಷ, ಇರ್ಫಾನ್, ಸೈಯಾದ್, ಇಮ್ರಾನ್ ಪಾಷ, ಮಹಮ್ಮದ್, ಶಫಿಉಲ್ಲಾ ಖಾನ್ ಹಾಜರಿದ್ದರು.

 

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

41 mins ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

3 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

3 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

4 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

5 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

6 hours ago