Andolana originals

ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಮುಖಂಡರು

ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.

ಮೈಸೂರಿನಲ್ಲಿ ಈದ್‌ಮಿಲಾದ್, ಗಣೇಶೋತ್ಸವ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಹಿಂದೂ-ಮುಸ್ಲಿಂ ಸಮುದಾಯ ದವರು ಭಾವೈಕ್ಯತೆ ಮೆರೆದು ಇತರರಿಗೂ ಮಾದರಿಯಾಗಿದ್ದಾರೆ. ನಗರದ ಸುಣ್ಣದಕೇರಿ ಬಡಾವಣೆಯಲ್ಲಿ ಶ್ರೀ ವಿನಾಯಕ ಯುವಕರ ಬಳಗ ವತಿಯಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಗಿದ್ದ ಸ್ಥಳಕ್ಕೆ ಆಗಮಿಸಿದ ಮುಸ್ಲಿಂ ಸಮುದಾಯದ ಮುಖಂಡರು ಈದ್‌ಮಿಲಾದ್ ಪ್ರಯುಕ್ತ ಶುಭಾಶಯ ವಿನಿಮಯ ಮಾಡಿ ಕೊಂಡರು. ಈದ್‌ಮಿಲಾದ್ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಬಾಂಧವರು ನೇರವಾಗಿ ಗಣೇಶ ಪ್ರತಿ ಷ್ಠಾಪನೆ ಸ್ಥಳಕ್ಕೆ ಆಗಮಿಸಿ ಶುಭಾಶಯ ಹೇಳಿದರು. ಶಾಲಾ ಮಕ್ಕಳಿಗೆ ಹೋಳಿಗೆ ಕೊಟ್ಟು ಪುಸ್ತಕಗಳನ್ನು ವಿತರಿಸಿದರು. ಹೊರಗಿನ ವಿಚಾರಕ್ಕೆ ಸ್ಪದ ಕೊಡದೆ ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಕೂಡಿ ಬಾಳೋಣ ಎನ್ನುವ ಶಪಥ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್‌ಬಾಬು, ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತವೆ, ಪ್ರತಿವರ್ಷವೂ ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳು ಸಮೀಪದಲ್ಲೇ ಬರುವುದರಿಂದ ಉಭಯ ಸಮಾಜದವರು ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿ ಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳಬೇಕು ಎಂದರು. ಹಬ್ಬಗಳು ಎಲ್ಲರನ್ನೂ ಒಂದು ಗೂಡಿಸುವಂತೆ ನಡೆಯುತ್ತದೆ. ಆದರೆ, ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಗೊಂದಲ ಮೂಡಿಸ ಬಾರದು. ದೇವನೊಬ್ಬ ನಾಮ ಹಲವು ಎನ್ನುವಂತೆ ನಾವೆಲ್ಲರೂ ಮನುಷ್ಯರು ಎಂಬುದನ್ನು ಅರಿಯಬೇಕು ಎಂದರು. ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಶ್ರೀ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಮಂಜುನಾಥ್, ಕಿಶೋರ್ ಕುಮಾರ್, ಜಿ. ರಾಘವೇಂದ್ರ, ಬ್ಯಾಂಕ್ ಸಿದ್ದರಾಜು, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷ ಹಿನಕಲ್ ಉದಯ್, ಕಿರಣ್, ಚಕ್ರಪಾಣಿ, ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷ, ಗುಲ್ಚನ್ ಪಾಷ, ಇರ್ಫಾನ್, ಸೈಯಾದ್, ಇಮ್ರಾನ್ ಪಾಷ, ಮಹಮ್ಮದ್, ಶಫಿಉಲ್ಲಾ ಖಾನ್ ಹಾಜರಿದ್ದರು.

 

andolana

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

20 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

20 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

20 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

20 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

20 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

20 hours ago