Andolana originals

ಮಂಜಿನ ನಗರಿಯಲ್ಲಿ ಇಂದಿನಿಂದ ಹಾಕಿ ಹಬ್ಬ

ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಮುದ್ದಂಡ ಕುಟುಂಬ ಸಿದ್ಧತೆ,  25ನೇ ವರ್ಷದ ಕಪ್‌ಗಾಗಿ 366 ತಂಡಗಳ ಸೆಣಸಾಟ

-ನವೀನ್ ಡಿಸೋಜ

ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಹಬ್ಬದ ಸಂಭ್ರದಲ್ಲಿದ್ದು, 25ನೇ ವರ್ಷದ ಪಂದ್ಯಾವಳಿಗೆ 396ತಂಡಗಳು ನೋಂದಾಯಿಸಿಕೊಂಡಿವೆ. ಶುಕ್ರವಾರದಿಂದ ಮಡಿಕೇರಿಯಲ್ಲಿ ಮುದ್ದಂಡ ಕಪ್ ಹಾಕಿ ಪಂದ್ಯಾವಳಿ ಆರಂಭವಾಗಲಿದ್ದು, ಹಾಕಿ ಕ್ರೀಡಾ
ರಸದೌತಣವನ್ನು ಕಣ್ತುಂಬಿಕೊಳ್ಳಲು ಕ್ರೀಡಾ ಪ್ರೇಮಿಗಳು ಕಾತರರಾಗಿದ್ದಾರೆ.

ಮಡಿಕೇರಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಹಾಕಿ ಉತ್ಸವ ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 9.45 ಗಂಟೆಗೆ ನಗರದ
ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಕೊಡವ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ನಂತರ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಪಂದ್ಯಾಟ ವೀಕ್ಷಣೆಗೆ ಸುಸಜ್ಜಿತ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 25,000 ಮಂದಿ ಕುಳಿತು ಪಂದ್ಯಾಟ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 35 ಪುಡ್ ಸ್ಟಾಲ್‌ಗಳು ಇರಲಿದ್ದು, ಮೈದಾನದಲ್ಲೇ ಕ್ರೀಡಾ ಪ್ರೇಮಿಗಳಿಗೆ ಅಗತ್ಯ ತಿಂಡಿ ತಿನಿಸುಗಳು ದೊರೆಯಲಿದೆ.

ಪಂದ್ಯಾವಳಿ ವೀಕ್ಷಣೆಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಸಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸೂಕ್ತವಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಅವರ ಅನುದಾನದಲ್ಲಿ 1,500 ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ದಿಲೀಪ್ ನಾಚಪ್ಪ ಹಾಗೂ
ಯಲದಾಳು ಮನೋಜ್ ಬೋಪಯ್ಯ ಅವರ ಜಾಗದಲ್ಲಿ 1,000 ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ರಸ್ತೆ ಬದಿ ಹೊರತುಪಡಿಸಿ
ಸುಮಾರು 2,500 ವಾಹನಗಳಿಗೆ ಪಾರ್ಕಿಂಗ್  ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಳ್ಳಿ ಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಈಗಾಗಲೇ 40 ತಂಡಗಳು ನೋಂದಾಯಿಸಿ ಕೊಂಡಿವೆ. ನೋಂದಣಿಯ ಕೊನೆಯ ದಿನಾಂಕ ಏ.10 ಆಗಿರುವುದರಿಂದ ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳಲಿವೆ. ಮೂರನೇ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ.

ಸೆಮಿಫೈನಲ್ ಸಂದರ್ಭದಲ್ಲಿ ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ಲಾಲ್ ರಿಮ್  ಸಿಯಾಮಿ ಆಗಮಿಸಿ ಹಾಕಿ ಕ್ರೀಡೆಯ ಕುರಿತು ಮಾಹಿತಿ ನೀಡಲಿದ್ದಾರೆ. ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹಾಗೂ ಒಲಿಂಪಿಯನ್  ಮನ್‌ಪ್ರೀತ್‌ಸಿಂಗ್ ಕೂಡ ಪಂದ್ಯಾವಳಿಯ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಮಿಫೈನಲ್ ಪಂದ್ಯಾವಳಿಗೆ ಹಿರಿಯ ರಾಜಕಾರಣಿ ಅಜಯ್ ಮಕೆನ್ ಆಗಮಿಸುವ ಭರವಸೆ ನೀಡಿದ್ದಾರೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

ಯಾರ ಮುಡಿಗೆ ಮುದ್ದಂಡ ಕಪ್‌?

ಕೊಡವ ಕೌಟುಂಬಿಕ ಹಾಕಿ ಉತ್ಸವದಲ್ಲಿ ಪಳಂಗಂಡ 5, ಕೂತಂಡ 4, ಕಲಿಯಂಡ 3, ಕುಲ್ಲೇಟೀರ 3, ನೆಲ್ಲಮಕ್ಕಡ 3, ಚೇದಂಡ 3, ಅಂಜಪರವಂಡ 2, ಮಂಡೇಪಂಡ ಹಾಗೂ ಕುಪ್ಪಂಡ ತಂಡಗಳು ತಲಾ 1 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪಳಂಗಂಡ ತಂಡ ಹ್ಯಾಟ್ರಿಕ್ ಗೆಲುವು ಸಾಧಿಸಿಯೂ ಗಮನ ಸೆಳೆದಿದೆ. ಪಳಂಗಂಡ 3, ಕೂತಂಡ 3, ಕಲಿಯಂಡ 2, ಕುಲ್ಲೇಟೀರ 1, ನೆಲ್ಲಮಕ್ಕಡ 4, ಚೇದಂಡ 1, ಅಂಜಪರವಂಡ 3 ಬಾರಿ ರನ್ನರ್ ಅಫ್ ಆಗಿಯೂ ಗಮನ ಸೆಳೆದಿವೆ. ಹೀಗಾಗಿ ಈ ಬಾರಿ ಮುದ್ದಂಡ ಕಪ್ ಯಾವ ಕುಟುಂಬಕ್ಕೆ ಒಲಿಯಲಿದೆ ಎಂಬುದು ಕುತೂಹಲವಾಗಿದೆ.

ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಬೆಳ್ಳಿ ಹಬ್ಬದ ಪ್ರಯುಕ್ತ ವಿಭಿನ್ನ ಕಾರ್ಯಕ್ರಮಗಳನ್ನು
ಆಯೋಜಿಸಲಾಗಿದೆ. ಈ ಬಾರಿ ಕೊಡವ ಕುಟುಂಬಗಳ ದಾಖಲೆಯ 396 ತಂಡಗಳು ನೋಂದಾಯಿಸಿಕೊಂಡಿವೆ. ಪಂದ್ಯಾವಳಿಯ ಯಶಸ್ಸಿಗೆ ಸರ್ಕಾರದ ಸಂಪೂರ್ಣ ಸಹಕಾರವಿದೆ. ಜಿಲ್ಲೆಯ ಶಾಸಕದ್ವಯರು ಹಾಗೂ ಸಂಸದರು ಮೊದಲ ದಿನದಿಂದಲೂ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಎಲ್ಲರ ಸಹಕಾರವನ್ನು ಪಡೆಯಲಾಗಿದ್ದು, ಹಾಕಿ ಉತ್ಸವ ಯಶಸ್ವಿಯಾಗಿ ನಡೆಯಲಿದೆ.

-ಮುದ್ದಂಡ ರಶಿನ್ ಸುಬ್ಬಯ್ಯ, ಅಧ್ಯಕ್ಷರು, ಮುದ್ದಂಡ ಹಾಕಿ ಉತ್ಸವ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

10 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

12 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

20 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

27 mins ago