Andolana originals

ಹಾಕಿಯಲ್ಲಿ ಅದಿರಾ ಮಿಂಚು..!

• ಜಿ.ತಂಗಂ ಗೋಪಿನಾಥಂ

ಆ ಹುಡುಗಿಗೆ ಆಗಿನ್ನೂ 12 ವರ್ಷ ವಯಸ್ಸು. ಆಗಲೇ ಹಾಕಿ ಕ್ರೀಡೆಯಲ್ಲಿ ಸಾಧನೆ ಮಾಡುವ ಕನಸು ಕಂಡವಳು. ತಂದೆ ತಾಯಿ ಆಕೆಯ ಕನಸ್ಸಿಗೆ ಬೆಂಬಲವಾಗಿ ನಿಂತರೂ ನೆರೆ ಹೊರೆಯವರು, ಸಂಬಂಧಿಕರಿಂದ ಹಾಕಿ ಆಡಿ ಯಾರನ್ನು ಉದ್ಧಾರ ಅ ಎಂಬ ಮೂದಲಿಕೆಯ ಮಾತು ತಪ್ಪಲಿಲ್ಲ.

ಹಾಕಿಯನ್ನೇ ಉಸಿರಾಗಿಸಿಕೊಂಡವರು ಮೈಸೂರಿನ ಡಿವೈಇಎಸ್ ಕ್ರೀಡಾ ವಿದ್ಯಾರ್ಥಿ ನಿಲಯದ ಆಟಗಾರ್ತಿ ಎಸ್.ಅದಿರಾ ಕಿತ್ತು ತಿನ್ನುವ ಬಡತನವನ್ನೂ ಲೆಕ್ಕಿಸದೇ ಹಗಲಿರುಳು ಎನ್ನದೆ ಕಠಿಣ ಅಭ್ಯಾಸ ನಡೆಸಿ ತನ್ನ 20ನೇ ವಯಸ್ಸಿನಲ್ಲಿಯೇ ಸೀನಿಯರ್ ಮಹಿಳಾ ಹಾಕಿ ತಂಡಕ್ಕೆ ಆಯ್ಕೆಯಾದರು.

ಅದಿರಾ ಸೌಲಭ್ಯ, ಪ್ರೋತ್ಸಾಹಗಳ ನಡುವೆ ಕ್ರೀಡೆಯಲ್ಲಿ ತೊಡಗಿಕೊಂಡವರಲ್ಲ. ಬಡ ಮತ್ತು ಕೆಳ ಮಧ್ಯಮ ಕುಟುಂಬದಿಂದ ಬಂದ ಆಟಗಾರ್ತಿ, ಸಿಕ್ಕಸಣ್ಣ ಅವಕಾಶವನ್ನೇ ಬಳಸಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹಾದಿ ಹಿಡಿದಿದ್ದಾರೆ.

ಕೊಡಗು ಜಿಲ್ಲೆಯ ಕುಟ್ಟ ಗ್ರಾಮದ ಎಸ್.ಸುರೇಶ್ ಹಾಗೂ ಸುನಂದಾ ದಂಪತಿಯ ಪುತ್ರಿ ಅದಿರಾ, ಹಾಕಿ ಬಗೆಗಿನ ವ್ಯಾಮೋಹ ಅವರನ್ನು ರಾಷ್ಟ್ರೀಯ ಕ್ರೀಡಾಕೂಟಕ್ಕೂ ಕರೆದೊಯ್ದಿದೆ. ಕುಟ್ಟದ ಸೇಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪೊನ್ನಂಪೇಟೆಯ ಕೆಪಿಎಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ವ್ಯಾಸಂಗ ಮಾಡಿದ್ದಾರೆ. ಅದಿರಾ ಅವರಲ್ಲಿನ ಓಟದ ಕಲೆಯನ್ನು ನೋಡಿ ಅವರ ಶಿಕ್ಷಕಿ ಅನುಪಮಾ ಇವರಿಗೆ ಹಾಕಿ ಆಡಲು ಸಲಹೆ ನೀಡಿ ಪ್ರೋತ್ಸಾಹಿಸಿದರು. ಅಂದಿನಿಂದ ಇವರ ಹಾಕಿಯ ಬದುಕು ಆರಂಭವಾಯಿತು.

ವಿದ್ಯಾಭ್ಯಾಸದೊಂದಿಗೆ ಕ್ರೀಡೆಗೂ ಒತ್ತು ನೀಡುತ್ತಿದ್ದ ಅದಿರಾ ಪ್ರತಿಭಾವಂತ ವಿದ್ಯಾರ್ಥಿನಿಯೂ ಹೌದು. ಮೈಸೂರಿನ ಟೇರಿಷಿಯನ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿ, ಬಿಎಗೆ ಪ್ರವೇಶ ಪಡೆದರು. ಅಲ್ಲಿಯೂ ಹಾಕಿಗೆ ಉತ್ತಮ ಪ್ರೋತ್ಸಾಹ ಸಿಕ್ಕಿತು. ಅಂತಿಮ ಬಿಎ ವ್ಯಾಸಂಗ ಮಾಡುತ್ತಿರುವ ಅದಿರಾ ಹಲವಾರು ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.

ಕಠಿಣ ಅಭ್ಯಾಸ
ಅದಿರಾ ನಿತ್ಯವೂ ಪೊನ್ನಂಪೇಟೆಯ ಡಿವೈಇಎಸ್ ತರಬೇತುದಾರ ಡ್ಯಾನಿ ಹಿರಪ್ಪ, ಸುಬ್ಬಯ್ಯ, ಸಂಗಪ್ಪ ಹಾಗೂ ಮೈಸೂರಿನ ಟೇರಿಷಿಯನ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಅಂತೋಣಿ ಮೋಸೆಸ್ ಹಾಗೂ ಮೈಸೂರಿನ ಡಿವೈಇಎಸ್ ತರಬೇತುದಾರ ಆರ್.ಸುಂದರೇಶ್ ಅವರ ಮಾರ್ಗದರ್ಶನವನ್ನು ಸ್ಮರಿಸುತ್ತಾರೆ. ತರಬೇತುದಾರರು ನೀಡಿದ ಕಠಿಣ ಅಭ್ಯಾಸವೇ ತಾನು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲು ಕಾರಣ ಎನ್ನುವ ಅದಿರಾ ಅವರು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಮೈಸೂರಿನ ಡಿವೈಇಎಸ್ ತರಬೇತುದಾರ ಆರ್.ಸುಂದರೇಶ್ ಅವರ ಮಾರ್ಗದರ್ಶನದಲ್ಲಿ ನಿತ್ಯ ಬೆಳಿಗ್ಗೆ ಮೂರೂವರೆ ಗಂಟೆ ಹಾಗೂ ಸಂಜೆ ಮೂರೂವರೆ ಗಂಟೆಗಳ ಕಾಲ ಅಭ್ಯಾಸ ಮಾಡುತ್ತಿದ್ದಾರೆ.

ತಂದೆ-ತಾಯಿಯ ಪ್ರೋತ್ಸಾಹ: ಅದಿರಾ ತಂದೆ ಎಸ್.ಸುರೇಶ್ ಪೇಯಿಂಟ‌. ತಾಯಿ ಸುನಂದಾ ಕೂಲಿ ಕೆಲಸ ಮಾಡುತ್ತಾರೆ. ಪೋಷಕರು ತಮ್ಮ ಕಷ್ಟವನ್ನು ಎಂದಿಗೂ ಮಗಳ ಬಳಿ ಸುಳಿಯಲು ಬಿಟ್ಟಿಲ್ಲ. ತಮಗೆ ಕಷ್ಟವಾದರೂ ಮಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಸಾಧನೆಗೆ ಒಲಿದ ನೌಕರಿ: ಸದ್ಯ ಟೇರಿಷಿಯನ್ ಕಾಲೇಜಿನಲ್ಲಿ ಅಂತಿಮ ಬಿಎ ವ್ಯಾಸಂಗ ಮಾಡುತ್ತಿರುವ ಎಸ್.ಅದಿರಾ ಅವರು ಅವರ ಗುರಿಯಂತೆ ಕ್ರೀಡಾ ಕೋಟಾದಿಂದ ರೈಲ್ವೆ ಇಲಾಖೆಯಲ್ಲಿ ನೌಕರಿ ಗಿಟ್ಟಿಸಿಕೊಂಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಕ್ರೀಡಾ ಕೋಟಾದಿಂದ ಭಾರತದಾದ್ಯಂತ 3 ಹುದ್ದೆಗಳು ಖಾಲಿ ಇದ್ದವು. ಅದರಿಂದ ಕರ್ನಾಟಕದಿಂದ ಅದಿರಾ ಆಯ್ಕೆಯಾಗಿದ್ದಾರೆ.

ಗೆದ್ದ ಪದಕಗಳು
• ಪೊನ್ನಂಪೇಟೆಯಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹಾಕಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ.
• 2022ರಲ್ಲಿ ಬೆಂಗಳೂರಿನಲ್ಲಿ ನಡೆದ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ
• 2022ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ 12ನೇ ಹಾಕಿ ಸೀನಿಯರ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ
• 2023ರಲ್ಲಿ ತಮಿಳುನಾಡಿನಲ್ಲಿ ನಡೆದ ಸದರನ್‌ ಯೂನಿವರ್ಸಿಟಿ ಕ್ರೀಡಾಕೂಟದಲ್ಲಿ ಚಿನ್ನದ ಪದಕ.

ನಾನು ಹಾಕಿ ಆಡಲು ನನ್ನ ತಂದೆ, ತಾಯಿ ಮತ್ತು ತರಬೇತುದಾರರೇ ಕಾರಣ. ಇದುವರೆಗೆ ಹಲವಾರು ಹಾಕಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕ ಗಳಿಸಿರುವುದು ಮತ್ತು ರೈಲ್ವೆ ಇಲಾಖೆಯಲ್ಲಿ ನಾಕು ದೊರೆತಿರುವುದು ಖುಷಿ ಆಗಿದೆ. ಮುಂದೆ ಭಾರತ ತಂಡದ ಪರವಾಗಿ ಆಡುವ ಗುರಿ ಇದೆ. ಅದಕ್ಕಾಗಿ ನಿತ್ಯ ಅಭ್ಯಾಸ ಮಾಡುತ್ತಿದ್ದೇನೆ. ಹೆಣ್ಣು ಮಕ್ಕಳು ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು.
-ಎಸ್.ಅದಿರಾ, ಹಾಕಿ ಪಟು.

ಆಂದೋಲನ ಡೆಸ್ಕ್

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

1 hour ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

1 hour ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

2 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

2 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

3 hours ago