Andolana originals

ಹೊಂಗನೂರು: ಸಮರ್ಪಕ ರಸ್ತೆ, ಕುಡಿಯುವ ನೀರಿಲ್ಲದೆ ಸಾರ್ವಜನಿಕರ ಪರದಾಟ

ಯಳಂದೂರು: ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಕೆಲ ಬಡಾವಣೆಗಳಿಗೆ ಸರಿಯಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ರಸ್ತೆಗಳೆಲ್ಲಾ ಹಳ್ಳಕೊಳ್ಳಗಳಿಂದ ತುಂಬಿವೆ. ಈಚೆಗೆ ಬಿದ್ದ ಮಳೆಯಿಂದ ಉಪ್ಪಾರ, ನಾಯಕ, ಮುಸ್ಲಿಂ ಬಡಾವಣೆಗೆ ತೆರಳುವುದು ಕಷ್ಟವಾಗಿದೆ. ಚರಂಡಿಯಲ್ಲಿ ಹೂಳು ತೆಗೆದಿಲ್ಲದ ಕಾರಣ ಮಳೆ ಬಂದರೆ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದ್ದು ಸಾರ್ವಜನಿಕರು ಪರದಾಡುವಂತಾಗಿದೆ.

ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ದೊಡ್ಡ ಗ್ರಾಮ ಪಂಚಾಯಿತಿಗಳಲ್ಲಿ ಹೊಂಗನೂರು ಕೂಡ ಒಂದಾಗಿದೆ. ಈ ಗ್ರಾಮದ ೫ನೇ ವಾರ್ಡಿನ ಉಪ್ಪಾರ ಬಡಾವಣೆಗೆ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಇಲ್ಲಿ ೨೫೦ಕ್ಕೂ ಹೆಚ್ಚು ಕುಟುಂಬಗಳಿದ್ದು, ಕೇವಲ ಒಂದು ಕೊಳವೆ ಬಾವಿ ಇದೆ. ಆದರೆ ಇಲ್ಲಿ ನೀರು ಸರಿಯಾಗಿ ಬರುತ್ತಿಲ್ಲ. ಗ್ರಾಮದ ೩ನೇ ವಾರ್ಡಿನಲ್ಲಿ ಮುಸ್ಲಿಂ, ಕುರುಬ ಸಮುದಾಯದವರಿದ್ದಾರೆ. ಇಲ್ಲೂ ಕೂಡ ನೀರಿನ ಸಮಸ್ಯೆ ಇದೆ. ಇಲ್ಲಿನ ಮುಖ್ಯರಸ್ತೆಗೆ ಮಣ್ಣನ್ನು ಸುರಿಯಲಾಗಿದೆ. ಈ ರಸ್ತೆ ಹಳ್ಳ-ಕೊಳ್ಳಗಳಿಂದ ಕೂಡಿದೆ.

ಇದನ್ನು ಓದಿ: ಅಪರಾಧ ಕೃತ್ಯ ತಡೆಗಟ್ಟಲಿ; ಸಾಂಸ್ಕೃತಿಕ ನಗರಿಯಲ್ಲಿ ನೆಮ್ಮದಿ ನೆಲೆಸಲಿ

ಮಳೆ ಬಿದ್ದರೆ ಇಡೀ ರಸ್ತೆ ಕೆಸರುಮಯವಾಗುತ್ತದೆ. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಸಂಚರಿಸು ವುದಕ್ಕೆ ತೊಂದರೆಯಾಗಿದೆ. ಅನೇಕರು ಜಾರಿ ಬಿದ್ದು ಗಾಯಗೊಂಡಿರುವ ಘಟನೆಯೂ ನಡೆದಿದೆ. ರಸ್ತೆಯಲ್ಲಿ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಲು ಇಲ್ಲಿನ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದೆ. ಇಲ್ಲಿಗೆ ಜೆಜೆಎಂನಲ್ಲಿ ನಲ್ಲಿಗಳನ್ನು ಅಳವಡಿಸಲಾಗಿದ್ದರೂ ಇದಕ್ಕೆ ಸಂಪರ್ಕ ನೀಡಿಲ್ಲ. ಇಲ್ಲಿರುವ ಅನೇಕ ಕುಟುಂಬಗಳು ಕೂಲಿಯನ್ನೇ ನಂಬಿ ಬದುಕುತ್ತಿವೆ. ಆದರೆ ನಲ್ಲಿಯಲ್ಲಿ ಬರುವ ಅಲ್ಪ ಪ್ರಮಾಣದ ನೀರನ್ನು ಸಂಗ್ರಹಿಸಲು ಕೂಲಿ ಮಾಡುವ ಮಹಿಳೆಯರು ಮನೆಯಲ್ಲೇ ಇರಬೇಕಾದ ಸ್ಥಿತಿ ಇದೆ. ಇಲ್ಲವಾದಲ್ಲಿ ಸೈಕಲ್‌ಗಳಿಗೆ ಬಿಂದಿಗೆ ಕಟ್ಟಿಕೊಂಡು ದೂರದಿಂದ ನೀರು ತರುವ ಸ್ಥಿತಿ ಇದೆ.

ಗ್ರಾಮದ ತುಂಬೆಲ್ಲಾ ಅನೈರ್ಮಲ್ಯ ತಾಂಡವವಾಡುತ್ತಿದೆ. ಇಲ್ಲಿನ ರಸ್ತೆ ಬದಿಗಳಲ್ಲಿ ಕಸ ರಾಶಿರಾಶಿಯಾಗಿ ಬಿದ್ದಿದೆ. ಕಸವನ್ನು ಸಂಗ್ರಹಿಸಲು ಇರುವ ವಾಹನ ಕೆಟ್ಟು ನಿಂತಿದೆ. ಇಲ್ಲಿನ ಕಸ ವಿಲೇವಾರಿಯಾಗುವುದೇ ಇಲ್ಲ. ಚರಂಡಿಯಲ್ಲಿ ಹೂಳು ತುಂಬಿದ್ದು, ಇದನ್ನು ನಿಯಮಿತವಾಗಿ ಸ್ವಚ್ಛಗೊಳಿಸದಿರುವುದ ರಿಂದ ಮಳೆ ಬಂದರೆ ಕಲುಷಿತ ನೀರೆಲ್ಲಾ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿ ರಾಡಿಯಾಗುತ್ತದೆ. ಕೆಲ ಬೀದಿಗಳಿಗೆ ಇನ್ನೂ ಕೂಡ ಚರಂಡಿ ನಿರ್ಮಿಸದೆ ಸಾರ್ವಜನಿಕರು ಪರಿಪಾಟಲು ಪಡುವಂತಾಗಿದೆ. ಸಂಬಂಧಪಟ್ಟ ಪಂಚಾಯಿತಿಯವರು ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

” ನಮ್ಮ ಗ್ರಾಮದ ಉಪ್ಪಾರ, ಮುಸ್ಲಿಂ ಹಾಗೂ ಕುರುಬ ಸಮುದಾಯದವರ ಬೀದಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ, ರಸ್ತೆ ನಿರ್ಮಾಣ ಮಾಡಿಲ್ಲ. ಪಂಚಾಯಿತಿಯಲ್ಲಿ ಪೌರ ಕಾರ್ಮಿಕರೇ ಇಲ್ಲ. ಸಂಬಂಧಪಟ್ಟ ಪಿಡಿಒ, ಇಒಗೆ ಹಲವು ಬಾರಿ ಮನವಿ ಮಾಡಿದ್ದರೂ ಅವರು ಸ್ಪಂದಿಸುತ್ತಿಲ್ಲ. ಉನ್ನತ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು.”

-ಚಾಮದಾಸಯ್ಯ, ಗ್ರಾಪಂ ಸದಸ್ಯ, ಹೊಂಗನೂರು

ಆಂದೋಲನ ಡೆಸ್ಕ್

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 days ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 days ago