ಅನುಚೇತನ್ ಕೆ.ಎಂ.
ಹಾಪ್ಕಾಮ್ಸ್ ಸರ್ಕಾರಕ್ಕೆ ಸಲ್ಲಿಸಿರುವ ಮನವಿಯ ಪ್ರಮುಖ ಅಂಶಗಳು:
ನೂತನ ಮಳಿಗೆ ನಿರ್ಮಾಣಕ್ಕೆ ಅನುದಾನ ನೀಡಬೇಕು
ನವೀನ ಮಾದರಿಯ ಆಕರ್ಷಕ ಮಳಿಗೆ ನಿರ್ಮಾಣ ಮಾಡಬೇಕು
ಖಾಯಂ ನೌಕರರ ನೇಮಕಾತಿ ಮಾಡಬೇಕು
ಮೈಸೂರು: ಹಣ್ಣು, ತರಕಾರಿ ಬೆಳೆಯುವ ರೈತರು, ಖರೀದಿಸುವ ಗ್ರಾಹಕರ ಹಿತಚಿಂತನೆಯೊಂದಿಗೆ ತಾಜಾ ತರಕಾರಿಗಳು, ವಿವಿಧ ಹಣ್ಣುಗಳ ವಹಿವಾಟು ನಡೆಸುತ್ತಿರುವ ಜಿಲ್ಲಾ ಹಾಪ್ಕಾಮ್ಸ್ಗೆ ನಗರದ ಹೊರ ವಲಯಕ್ಕೂ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವ ಉತ್ಸಾಹ ಬಂದಿದೆ.
ನಗರದ ಹಲವು ಪ್ರಮುಖ ಜಾಗಗಳಲ್ಲಿ ಜಿಲ್ಲಾ ತೋಟಗಾರಿಕೆ ಸಂಘ(ಜಿಲ್ಲಾ ಹಾಪ್ಕಾಮ್ಸ್)ವು ಮೈಸೂರು ಜಿಲ್ಲೆ ಹಾಗೂ ನಗರ ಸೇರಿದಂತೆ ತಾಜಾ ಹಣ್ಣು ಮತ್ತು ತರಕಾರಿ ಮಾರಾಟದ ೩೬ ಮಳಿಗೆಗಳನ್ನು ತೆರೆದಿದ್ದು, ಉತ್ತಮ ರೀತಿಯಲ್ಲಿ ಮಾರಾಟ ಕಾರ್ಯ ನಡೆಸುತ್ತಿದೆ. ಹಾಗಾಗಿ ತೋಟಗಾರಿಕೆ ಇಲಾಖೆಯು ಹಾಪ್ಕಾಮ್ಸ್ ಮಳಿಗೆಗಳನ್ನು ನಗರದ ಹೊರವಲಯಕ್ಕೂ, ವಿಸ್ತರಿಸುವ ಚಿಂತನೆ ನಡೆಸುತ್ತಿದೆ.
ಹಾಪ್ಕಾಮ್ಸ್ ಕಾರ್ಯವೈಖರಿ ಹೇಗೆ?: ವಿಶೇಷವಾಗಿ ಮಾರಾಟ ಮಳಿಗೆಗಳಲ್ಲಿ ರೈತರಿಂದಲೇ ನೇರವಾಗಿ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಪ್ರತಿದಿನ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಸರ್ಕಾರದ ಅನುದಾನವಿಲ್ಲದಿದ್ದರೂ ಹಾಪ್ಕಾಮ್ಸ್ ಲಾಭದಾಯಕವಾಗಿ ಮುನ್ನಡೆಯುತ್ತಿದೆ. ರೈತರಿಗೆ ಮಾರುಕಟ್ಟೆಯ ದರಕ್ಕಿಂತ ೨ ರೂ. ಹೆಚ್ಚು ನೀಡಿ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಲಾಗುತ್ತದೆ. ೪ರಿಂದ ೫ ರೂ. ಲಾಭಾಂಶದಲ್ಲಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತದೆ.
ಇದರಿಂದ ಗ್ರಾಹಕರಿಗೆ ಹೆಚ್ಚಿನ ಹಣ ಉಳಿತಾಯ ವಾಗುತ್ತದೆ. ಅಲ್ಲದೆ, ರೈತರಿಗೆ ಮಾರುಕಟ್ಟೆಗಿಂತ ಹೆಚ್ಚು ಲಾಭವೂ ದೊರೆಯುವಂತಾಗುತ್ತದೆ.
ನಗರದ ಸರಸ್ವತಿಪುರಂ, ಕುವೆಂಪುನಗರ, ಗೋಕುಲಂ, ಸಿದ್ದಾರ್ಥನಗರ, ಯಾದವಗಿರಿ, ನಗರ ಬಸ್ ನಿಲ್ದಾಣದ ಹತ್ತಿರ, ತಾಲ್ಲೂಕುಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ೩೬ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ನಗರದ ರಿಂಗ್ ರಸ್ತೆಯ ಒಳಭಾಗಕ್ಕೆ ಮಾತ್ರ ಸೀಮಿತವಾಗಿದ್ದ ಮಳಿಗೆಗಳನ್ನು ಮುಂದಿನ ದಿನಗಳಲ್ಲಿ ರಿಂಗ್ ರಸ್ತೆಯ ಹೊರ ವಲಯದಲ್ಲಿ ಹಾಗೂ ನಗರದ ಉಳಿದ ಪ್ರಮುಖ ಬಡಾವಣೆಗಳಲ್ಲಿ ತೆರೆಯಲು ಜಿಲ್ಲಾ ತೋಟಗಾರಿಕೆ ಇಲಾಖೆ ಯೋಜನೆ ರೂಪಿಸಿ ವಿಸ್ತರಣೆಯ ಸಿದ್ಧತೆ ನಡೆಸುತ್ತಿದೆ. ಸರ್ಕಾರ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಿದೆ.
ಆನ್ಲೈನ್ ಹಾಗೂ ಖಾಸಗಿ ಮಾರಾಟಗಾರರ ಸ್ಪರ್ಧೆಯ ನಡುವೆಯೂ ಪದಾರ್ಥಗಳ ಗುಣ ಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಹಾಪ್ಕಾಮ್ಸ್ ಯಶಸ್ವಿಯಾಗಿದೆ. ಅಲ್ಲದೆ ಆದಾಯಗಳಿಕೆಯಲ್ಲೂ ಮುಂಚೂಣಿಯಲ್ಲಿದೆ. ಪ್ರತಿವರ್ಷವು ೧೨ರಿಂದ ೧೬ ಕೋಟಿ ರೂ. ವಹಿವಾಟು ನಡೆಯಲಿದೆ. ಪ್ರತಿ ತಿಂಗಳು ೧ರಿಂದ ೧.೫ ಕೋಟಿ ರೂ. ಆದಾಯ ಗಳಿಕೆ ಇದೆ. ಒಟ್ಟು ಮಾರಾಟ ಮಳಿಗೆಗಳಲ್ಲಿ ೯೭ ಮಂದಿ ನೌಕರರಿದ್ದು, ಕೆಲವರು ನಿವೃತ್ತಿ ಹೊಂದಿದ್ದಾರೆ. ಸದ್ಯಕ್ಕೆ ಹೊರಗುತ್ತಿಗೆ ನೌಕರರನ್ನು ನೇಮಕ ಮಾಡಿ ಕೊಳ್ಳಲಾಗಿದ್ದು, ಕೆಲವರು ಏಕಾಏಕಿ ಕೆಲಸ ಬಿಡುತ್ತಿದ್ದಾರೆ. ಹಾಗಾಗಿ ಖಾಯಂ ನೌಕರರನ್ನು ನೇಮಕ ಮಾಡಿ ಕೊಂಡರೆ ಹಾಪ್ಕಾಮ್ಸ್ ವ್ಯವಹಾರ ವಿಸ್ತರಣೆಗೆ ಅನು ಕೂಲವಾಗುತ್ತದೆ ಎಂಬುದು ನೌಕರರೊಬ್ಬರ ಮಾತು.
” ಗ್ರಾಹಕರು ಹಾಗೂ ರೈತರ ಹಿತದೃಷ್ಟಿಯಿಂದ ಹಣ್ಣು, ತರಕಾರಿ ಮಾರಾಟ ಮಾಡುತ್ತಿದ್ದು, ಕೋವಿಡ್ ಬಳಿಕವೂ ಮಳಿಗೆಗಳನ್ನು ಹೊಸದಾಗಿ ತೆರೆಯಲಾಗಿತ್ತು. ಬೇಡಿಕೆ ಹೆಚ್ಚಿರುವ ಕಾರಣ ಮಳಿಗೆಗಳನ್ನು ವಿಸ್ತರಿಸುವ ಕೆಲಸ ಪ್ರಾರಂಭಿಸಲಿದ್ದೇವೆ. ಇದರಿಂದ ಇಲಾಖೆಗೆ ಹೆಚ್ಚಿನ ಲಾಭ ದೊರೆಯಲಿದೆ.”
-ಇಂಧೂದರ, ವ್ಯಪಸ್ಥಾಪಕ ನಿರ್ದೇಶಕರು, ಮೈಸೂರು ಜಿಲ್ಲಾ ಹಾಪ್ಕಾಮ್
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…