Andolana originals

ಮಹದೇಶ್ವರ ಬೆಟ್ಟದಲ್ಲಿ ಕುದುರೆ ವಾಹನ ಜಂಬೂಸವಾರಿ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಪ್ರಯುಕ್ತ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ವೇತ ವರ್ಣದ ಕುದುರೆ ವಾಹನ ಜಂಬೂಸವಾರಿ ವಿಜೃಂಭಣೆಯಿಂದ ನೆರವೇರಿತು.

ವಿಜಯ ದಶಮಿ ಅಂಗವಾಗಿ ಮಾದಪ್ಪನ ದೇಗುಲದ ಪಶ್ಚಿಮ ದಿಕ್ಕಿನ ಕಂಠಶಾಲೆಯ ಆವರಣದಲ್ಲಿ ತೂಗುಯ್ಯಾಲೆ ಯನ್ನು ನಿರ್ಮಿಸಿ, ರಾತ್ರಿ ಶಿವ, ಪಾರ್ವತಿ ಉತ್ಸವಮೂರ್ತಿಗಳನ್ನು ಕೂರಿಸಿ ಶರನ್ನವರಾತ್ರಿ ಉಯ್ಯಾಲೋತ್ಸವಕ್ಕೆ ಚಾಲನೆ ನೀಡಲಾಗಿತ್ತು.

ಬೇಡಗಂಪಣ ಸಂಪ್ರದಾಯದಂತೆ ೯ ದಿನಗಳ ಕಾಲ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿಬೇಡಗಂಪಣ ಅರ್ಚಕರಿಂದ ಪಡಿಸೇವೆ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಕ್ಷೇತ್ರದಲ್ಲಿ ಸಂಪ್ರದಾಯದಂತೆ ರಾತ್ರಿ ಬಿಳಿ ಕುದುರೆ ಉತ್ಸವದ ಜೊತೆಗೆ ದೊಡ್ಡ ಸತ್ತಿಗೆ ಆವೇಶದಿಂದ ಕುದುರೆ ವಾಹನ ಹಿಮ್ಮೆಟ್ಟಿಸುವುದು, ಸಾಂಪ್ರದಾಯಿಕವಾಗಿ ಹಾಗೂ ನಾಡ ಕುಂಬಳಕಾಯಿ ಬಲಿ ಪೂಜೆ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

ಮೈಸೂರು ಸಂಸ್ಥಾನದ ಜಯಚಾಮರಾಜ ಒಡೆಯರ್ ಅವರು ದಸರಾ ಅಂಗವಾಗಿ ಹಿಂದೆ ಮ.ಬೆಟ್ಟದ ದೇಗುಲಕ್ಕೆ ನೀಡಿದ್ದ ವಜ್ರ, ರತ್ನಖಚಿತ ಆಭರಣಗಳನ್ನು ಆಯುಧಪೂಜೆಯಂದು ಶಿವ-ಪಾರ್ವತಿಯ ಮೂರ್ತಿಗಳಿಗೆ ತೊಡಿಸಿ, ಸಿಂಗರಿಸಿ ಉಯ್ಯಾಲೆ ಉತ್ಸವವನ್ನು ನೆರವೇರಿಸಲಾಯಿತು. ಬಳಿಕ ತೂಗುಯ್ಯಾಲೆಯ ತೊಟ್ಟಿಲಲ್ಲಿ ಮೂರ್ತಿಯನ್ನು ಕೂರಿಸಿ ವಿಶೇಷ ಪೂಜೆ ಸಲ್ಲಿಸುವುದು ವಿಜಯದಶಮಿ ವಿಶೇಷ.

ಇದನ್ನೂ ಓದಿ :- ಮುಳ್ಳಯ್ಯನಗಿರಿಯ ಮೋಹಕತೆ 

ಜಂಬೂಸವಾರಿ: ಮಾದಪ್ಪನ ದೇಗುಲದಲ್ಲಿ ವಿಜಯ ದಶಮಿಯಂದು ರಾತ್ರಿ ಪೂಜೆಯ ಬಳಿಕ ಬಿಳಿ ಕುದುರೆ ವಾಹನೋತ್ಸವ ನೆರವೇರಿಸುವುದರ ಮೂಲಕ ಜಂಬೂ ಸವಾರಿಯನ್ನು ನಡೆಸಲಾಯಿತು. ಶ್ವೇತ ವರ್ಣದ ೧ಕುದುರೆಯ ಮೇಲೆ ಮಹದೇಶ್ವರ ಸ್ವಾಮಿಯ ಪಟ್ಟದ ಕತ್ತಿಯನ್ನು ಬೇಡಗಂಪಣ ಅರ್ಚಕರು ಹಿಡಿಯುತ್ತಾರೆ. ಇದು ದುಷ್ಟ ಶಕ್ತಿಯನ್ನು ಸಂಹಾರ ಮಾಡುವ ಪ್ರತೀಕವಾಗಿದೆ ಎಂಬುದು ಧಾರ್ಮಿಕ ನಂಬಿಕೆ.  ರಾತ್ರಿ ಬಿಳಿ ಕುದುರೆ ವಾಹನ ಉತ್ಸವದ ಮೂಲಕ ಶರನ್ನವರಾತ್ರಿಗೆ ತೆರೆ ಎಳೆಯಲಾಯಿತು.

ಅದ್ಧೂರಿ ತೆಪ್ಪೋತ್ಸವ: ೬ ವರ್ಷಗಳ ಹಿಂದೆ ಕಲ್ಯಾಣಿಯ ಪುನಶ್ಚೇತನ ಕಾರ್ಯ ಕೈಗೊಳ್ಳಲಾಗಿತ್ತು. ಈಗ ಕಾಮಗಾರಿ ಸಂಪೂರ್ಣ ಮುಗಿದಿರುವ ಹಿನ್ನೆಲೆಯಲ್ಲಿ ೬ ವರ್ಷಗಳ ನಂತರ ತೆಪ್ಪೋತ್ಸವ ನಡೆಸಲಾಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ವಿವಿಧ ಸೇವೆಗಳನ್ನು ಸಲ್ಲಿಸಿದರು. ದೇವಾಲಯವನ್ನು ವಿವಿಧ ವಿದ್ಯುತ್ ದೀಪಗಳಿಂದ ಅಲಂಕರಿಸ ಲಾಗಿತ್ತು.೧ ದೇವಾಲಯದ ಮುಂಭಾಗದ ರಸ್ತೆಗಳು ಜಗಜಗಿಸುತ್ತಿದ್ದವು. ಪ್ರಾಧಿಕಾರದ ವತಿಯಿಂದ ದಾಸೋಹ ಭವನದಲ್ಲಿ ಭಕ್ತರಿಗೆ ಬೆಳಗಿನ ತಿಂಡಿ, ಊಟದ ವ್ಯವಸ್ಥೆ, ಕುಡಿಯುವ ನೀರು, ನೆರಳಿನ ವ್ಯವಸ್ಥೆ ಮಾಡಲಾಗಿತು

” ದೊಡ್ಡ ಕಲ್ಯಾಣಿ ಪುನಶ್ಚೇತನವಾದ ನಂತರ ನಡೆದ ವಿಜಯದಶಮಿ ಜಾತ್ರಾ ಮಹೋತ್ಸವದಲ್ಲಿ ಆರು ವರ್ಷಗಳ ನಂತರ ತೆಪ್ಪೋತ್ಸವ ಯಶಸ್ವಿಯಾಗಿ ನೆರವೇರಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್, ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಹಾಗೂ ಶಾಸಕ ಎಂ.ಆರ್.ಮಂಜುನಾಥ್‌ರವರ ನೇತೃತ್ವದಲ್ಲಿ ಜಾತ್ರೆ ಯಶಸ್ವಿಯಾಗಿ ನೆರವೇರಿದೆ.”

ಎ.ಇ.ರಘು, ಕಾರ್ಯದರ್ಶಿಗಳು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

35 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

41 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

50 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

10 hours ago