Andolana originals

ಮಹದೇಶ್ವರ ಬೆಟ್ಟದಲ್ಲಿ ಕುದುರೆ ವಾಹನ ಜಂಬೂಸವಾರಿ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಪ್ರಯುಕ್ತ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ವೇತ ವರ್ಣದ ಕುದುರೆ ವಾಹನ ಜಂಬೂಸವಾರಿ ವಿಜೃಂಭಣೆಯಿಂದ ನೆರವೇರಿತು.

ವಿಜಯ ದಶಮಿ ಅಂಗವಾಗಿ ಮಾದಪ್ಪನ ದೇಗುಲದ ಪಶ್ಚಿಮ ದಿಕ್ಕಿನ ಕಂಠಶಾಲೆಯ ಆವರಣದಲ್ಲಿ ತೂಗುಯ್ಯಾಲೆ ಯನ್ನು ನಿರ್ಮಿಸಿ, ರಾತ್ರಿ ಶಿವ, ಪಾರ್ವತಿ ಉತ್ಸವಮೂರ್ತಿಗಳನ್ನು ಕೂರಿಸಿ ಶರನ್ನವರಾತ್ರಿ ಉಯ್ಯಾಲೋತ್ಸವಕ್ಕೆ ಚಾಲನೆ ನೀಡಲಾಗಿತ್ತು.

ಬೇಡಗಂಪಣ ಸಂಪ್ರದಾಯದಂತೆ ೯ ದಿನಗಳ ಕಾಲ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿಬೇಡಗಂಪಣ ಅರ್ಚಕರಿಂದ ಪಡಿಸೇವೆ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಕ್ಷೇತ್ರದಲ್ಲಿ ಸಂಪ್ರದಾಯದಂತೆ ರಾತ್ರಿ ಬಿಳಿ ಕುದುರೆ ಉತ್ಸವದ ಜೊತೆಗೆ ದೊಡ್ಡ ಸತ್ತಿಗೆ ಆವೇಶದಿಂದ ಕುದುರೆ ವಾಹನ ಹಿಮ್ಮೆಟ್ಟಿಸುವುದು, ಸಾಂಪ್ರದಾಯಿಕವಾಗಿ ಹಾಗೂ ನಾಡ ಕುಂಬಳಕಾಯಿ ಬಲಿ ಪೂಜೆ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

ಮೈಸೂರು ಸಂಸ್ಥಾನದ ಜಯಚಾಮರಾಜ ಒಡೆಯರ್ ಅವರು ದಸರಾ ಅಂಗವಾಗಿ ಹಿಂದೆ ಮ.ಬೆಟ್ಟದ ದೇಗುಲಕ್ಕೆ ನೀಡಿದ್ದ ವಜ್ರ, ರತ್ನಖಚಿತ ಆಭರಣಗಳನ್ನು ಆಯುಧಪೂಜೆಯಂದು ಶಿವ-ಪಾರ್ವತಿಯ ಮೂರ್ತಿಗಳಿಗೆ ತೊಡಿಸಿ, ಸಿಂಗರಿಸಿ ಉಯ್ಯಾಲೆ ಉತ್ಸವವನ್ನು ನೆರವೇರಿಸಲಾಯಿತು. ಬಳಿಕ ತೂಗುಯ್ಯಾಲೆಯ ತೊಟ್ಟಿಲಲ್ಲಿ ಮೂರ್ತಿಯನ್ನು ಕೂರಿಸಿ ವಿಶೇಷ ಪೂಜೆ ಸಲ್ಲಿಸುವುದು ವಿಜಯದಶಮಿ ವಿಶೇಷ.

ಇದನ್ನೂ ಓದಿ :- ಮುಳ್ಳಯ್ಯನಗಿರಿಯ ಮೋಹಕತೆ 

ಜಂಬೂಸವಾರಿ: ಮಾದಪ್ಪನ ದೇಗುಲದಲ್ಲಿ ವಿಜಯ ದಶಮಿಯಂದು ರಾತ್ರಿ ಪೂಜೆಯ ಬಳಿಕ ಬಿಳಿ ಕುದುರೆ ವಾಹನೋತ್ಸವ ನೆರವೇರಿಸುವುದರ ಮೂಲಕ ಜಂಬೂ ಸವಾರಿಯನ್ನು ನಡೆಸಲಾಯಿತು. ಶ್ವೇತ ವರ್ಣದ ೧ಕುದುರೆಯ ಮೇಲೆ ಮಹದೇಶ್ವರ ಸ್ವಾಮಿಯ ಪಟ್ಟದ ಕತ್ತಿಯನ್ನು ಬೇಡಗಂಪಣ ಅರ್ಚಕರು ಹಿಡಿಯುತ್ತಾರೆ. ಇದು ದುಷ್ಟ ಶಕ್ತಿಯನ್ನು ಸಂಹಾರ ಮಾಡುವ ಪ್ರತೀಕವಾಗಿದೆ ಎಂಬುದು ಧಾರ್ಮಿಕ ನಂಬಿಕೆ.  ರಾತ್ರಿ ಬಿಳಿ ಕುದುರೆ ವಾಹನ ಉತ್ಸವದ ಮೂಲಕ ಶರನ್ನವರಾತ್ರಿಗೆ ತೆರೆ ಎಳೆಯಲಾಯಿತು.

ಅದ್ಧೂರಿ ತೆಪ್ಪೋತ್ಸವ: ೬ ವರ್ಷಗಳ ಹಿಂದೆ ಕಲ್ಯಾಣಿಯ ಪುನಶ್ಚೇತನ ಕಾರ್ಯ ಕೈಗೊಳ್ಳಲಾಗಿತ್ತು. ಈಗ ಕಾಮಗಾರಿ ಸಂಪೂರ್ಣ ಮುಗಿದಿರುವ ಹಿನ್ನೆಲೆಯಲ್ಲಿ ೬ ವರ್ಷಗಳ ನಂತರ ತೆಪ್ಪೋತ್ಸವ ನಡೆಸಲಾಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ವಿವಿಧ ಸೇವೆಗಳನ್ನು ಸಲ್ಲಿಸಿದರು. ದೇವಾಲಯವನ್ನು ವಿವಿಧ ವಿದ್ಯುತ್ ದೀಪಗಳಿಂದ ಅಲಂಕರಿಸ ಲಾಗಿತ್ತು.೧ ದೇವಾಲಯದ ಮುಂಭಾಗದ ರಸ್ತೆಗಳು ಜಗಜಗಿಸುತ್ತಿದ್ದವು. ಪ್ರಾಧಿಕಾರದ ವತಿಯಿಂದ ದಾಸೋಹ ಭವನದಲ್ಲಿ ಭಕ್ತರಿಗೆ ಬೆಳಗಿನ ತಿಂಡಿ, ಊಟದ ವ್ಯವಸ್ಥೆ, ಕುಡಿಯುವ ನೀರು, ನೆರಳಿನ ವ್ಯವಸ್ಥೆ ಮಾಡಲಾಗಿತು

” ದೊಡ್ಡ ಕಲ್ಯಾಣಿ ಪುನಶ್ಚೇತನವಾದ ನಂತರ ನಡೆದ ವಿಜಯದಶಮಿ ಜಾತ್ರಾ ಮಹೋತ್ಸವದಲ್ಲಿ ಆರು ವರ್ಷಗಳ ನಂತರ ತೆಪ್ಪೋತ್ಸವ ಯಶಸ್ವಿಯಾಗಿ ನೆರವೇರಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್, ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಹಾಗೂ ಶಾಸಕ ಎಂ.ಆರ್.ಮಂಜುನಾಥ್‌ರವರ ನೇತೃತ್ವದಲ್ಲಿ ಜಾತ್ರೆ ಯಶಸ್ವಿಯಾಗಿ ನೆರವೇರಿದೆ.”

ಎ.ಇ.ರಘು, ಕಾರ್ಯದರ್ಶಿಗಳು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

53 mins ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

1 hour ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago