ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಾನಸ ಗಂಗೋತ್ರಿ ಕ್ಯಾಂಪಸ್ನ ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕರೊಬ್ಬರು ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸ ಗಂಗೋತ್ರಿ ಕ್ಯಾಂಪಸ್ ಹಾಸ್ಟೆಲ್ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಿ. ರಾಚಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಸಾವಿಗೆ ಯಾರೂ ಕಾರಣರಲ್ಲ. ಸಾವಿನ ಸಂಬಂಧ ಯಾರನ್ನೂ ದೂಷಿಸಬೇಡಿ. ಜೀವನ ಸಾಕು ಎಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಐದಾರು ವರ್ಷಗಳಿಂದ ಮಾನಸ ಗಂಗೋತ್ರಿ ಬ್ಲಾಕ್-೨ ಹಾಸ್ಟೆಲ್ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಾಚಪ್ಪ, ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಗ್ರಾಮದವರಾಗಿದ್ದಾರೆ.
ನನ್ನ ಸಾವಿಗೆ ನಾನೇ ಕಾರಣ ಬೇರೆ ಯಾರೂ ಕಾರಣರಲ್ಲ. ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ , ನೋವಾಗಿದ್ದರೆ ದಯವಿಟ್ಟು ಕ್ಷಮೆ ಇರಲಿ. ನಾನು ಯಾವುದೇ ಇತರೆ ವಿಚಾರಕ್ಕಾಗಿ ಅಥವಾ ವೈಯಕ್ತಿಕ ವಿಚಾರಕ್ಕೆ ತಲೆ ಕೆಡಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ಜೀವನ ಸಾಕು ಅಂತ ನಿರ್ಧಾರ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರನ್ನೂ ಹೊಣೆ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದವರು ನನ್ನನ್ನು ಕ್ಷಮಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಸ್ಥಳಕ್ಕೆ ಜಯಲಕ್ಷ್ಮೀಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…