Andolana originals

ನಂಜನಗೂಡು: ಹುಳು ಹಿಡಿಯುತ್ತಿರುವ ಬಿಸಿಯೂಟದ ಅಕ್ಕಿ

ಶ್ರೀಧರ್ ಆರ್.ಭಟ್ಟ

ಚಿಕ್ಕಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ

ಹುಳು ಹಿಡಿದ ಅಕ್ಕಿಯನ್ನೇ ಬಳಸುತ್ತಿದ್ದಾರೆ ಎಂಬ ಆರೋಪ

ಪೋಷಕರ ಆಕ್ರೋಶಕೆ ಮುಖ್ಯ ಶಿಕ್ಷಕರ ತಗಾದೆ

ನಾವು ಅಕ್ಕಿ-ಬೇಳೆ ಖರೀದಿದಾರರಲ್ಲ ಎಂದ ಮುಖ್ಯ ಶಿಕ್ಷಕರು

 

ನಂಜನಗೂಡು: ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಸರಬರಾಜು ಮಾಡಿದ ಅಕ್ಕಿ ಹುಳು ಹಿಡಿಯಲಾರಂಭಿಸಿದ್ದು, ಹುಳು ಹಿಡಿದ ಅಕ್ಕಿಯಲ್ಲಿ ಮಾಡಿದ ಅನ್ನವನ್ನೇ ಮಕ್ಕಳಿಗೆ ಉಣಬಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಶನಿವಾರ ಬೆಳಿಗ್ಗೆ ತಯಾರಿಸಿದ ಉಪಾಹಾರದಲ್ಲಿ ಹುಳುಗಳನ್ನು ಕಂಡ ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಆಕ್ರೋಶ ವ್ಯಕ್ತಪಡಿಸಿ, ತಮ್ಮ ಪೋಷಕರನ್ನು ಕರೆ ತಂದು ತೋರಿಸಿದ್ದಾರೆ.

ನಂತರ ಪೋಷಕರು ಮುಖ್ಯಶಿಕ್ಷಕರಲ್ಲಿ ಹುಳು ಹಿಡಿದ ಆಹಾರನ್ನೇಕೆ ಮಕ್ಕಳಿಗೆ ತಿನ್ನಿಸುತ್ತಿದ್ದೀರಿ? ಎಂದು ಪ್ರಶ್ನಿಸಿದಾಗ, ಮುಖ್ಯಶಿಕ್ಷಕರು ಹಾಗೂ ಪೋಷಕರ ಮಧ್ಯೆ ವಾಗ್ವಾದ ನಡೆದಿದೆ.

ನಮಗೆ ನೀಡಿದ ದವಸ-ಧಾನ್ಯಗಳಿಂದ ನಾವು ಮಕ್ಕಳಿಗೆ ಆಹಾರ ಸಿದ್ಧಪಡಿಸಿ ನೀಡುತ್ತೇವೆ. ನಾವು ಅಕ್ಕಿ, ಬೇಳೆ ಖರೀದಿದಾರರಲ್ಲ ಎಂದು ಮುಖ್ಯಶಿಕ್ಷಕರು ವಾದಿಸಿದರು. ಆಗ ಪೋಷಕರು ನಿಮ್ಮ ಮಕ್ಕಳಿಗಾದರೆ ಹುಳು ಹಿಡಿದ ಅಕ್ಕಿಯ ಆಹಾರವನ್ನೇ ಬಡಿಸುತ್ತೀರಾ ಎಂದು ಪ್ರಶ್ನಿಸಿದಾಗ ಮುಖ್ಯಶಿಕ್ಷಕರು ಉತ್ತರಿಸಲಾಗದೆ ತಗಾದೆ ತೆಗೆದರು ಎಂಬುದು ಪೋಷಕರ ಆರೋಪವಾಗಿದೆ.

ಹುಳು ಹಿಡಿದ ಆಹಾರ ಪದಾರ್ಥಗಳ ಕುರಿತು ಮಾಹಿತಿ ನೀಡಲು ಕ್ಷೇತ್ರ ಶಿಕ್ಷಣಾಽಕಾರಿಗಳಿಗೆ ಕರೆ ಮಾಡಿದರೆ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು ಎಂದು ದೂರಿದ ಚಿಕ್ಕಹೊಮ್ಮ ಗ್ರಾಮದ ಪೋಷಕರು, ನಾವು ಇನ್ಯಾರಿಗೆ ದೂರು ನೀಡಬೇಕು ಎಂದು ಅಲವತ್ತುಕೊಂಡರು.

ತಾಲ್ಲೂಕಿನಾದ್ಯಂತ ಅನೇಕ ಶಾಲೆಗಳಲ್ಲಿ ಈಗ ಲಭ್ಯವಿರುವ ಅಕ್ಕಿ, ಗೋಧಿ, ಬೇಳೆಗಳು ಹುಳು ಹಿಡಿಯಲಾರಂಭಿಸಿದ್ದು, ಇದು ಆಗಲೇ ಮೇಲಧಿಕಾರಿಗಳ ಗಮನಕ್ಕೆ ಬಂದಿದ್ದರೂ ಆಹಾರ ಸರಬರಾಜು ಮಾಡುವವರೊಡನೆ ಶಾಮೀಲಾಗಿರುವುದರಿಂದ ನಾವೇನೂ ಮಾಡಲಾಗುತ್ತಿಲ್ಲ ಎಂದು ಮತ್ತೊಂದು ಶಾಲೆಯ ಮುಖ್ಯೋಪಾಧ್ಯಾಯರು ಪತ್ರಿಕೆಯೊಂದಿಗೆ ತಮ್ಮ ದುಗುಡವನ್ನು ಹಂಚಿಕೊಂಡರು.

ಶಾಲೆಗಳಿಗೆ ಈ ಬಾರಿ ಮಾರ್ಚ್ ತಿಂಗಳ ಕೊನೆಯಲ್ಲಿ ೩ ತಿಂಗಳಿಗಾಗುವಷ್ಟು ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿದ್ದು, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬೇಸಿಗೆ ರಜೆ ಇದ್ದುದರಿಂದ ಮತ್ತು ಮಳೆ ಬಂದದ್ದರಿಂದ ದವಸ-ಧಾನ್ಯಗಳು ಹುಳು ಹಿಡಿದಿವೆ ಎನ್ನುವ ತಾಲ್ಲೂಕಿನ ಅನೇಕ ಶಾಲೆಗಳ ಮುಖ್ಯೋಪಾಧ್ಯಾಯರು, ಈ ಬಗ್ಗೆ ಪೋಷಕರಷ್ಟೆ ಧ್ವನಿ ಎತ್ತಬೇಕು ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

” ಹುಳು ಹಿಡಿದ ಪದಾರ್ಥಗಳಿಂದ ಸಿದ್ಧಪಡಿಸಿದ ಆಹಾರವನ್ನು ಮಕ್ಕಳಿಗೆ ನೀಡುತ್ತಿರುವುದು ನಿಮ್ಮಿಂದಾಗಿ ನನ್ನ ಗಮನಕ್ಕೆ ಬಂದಿದೆ. ಅವುಗಳನ್ನು ವಾಪಸ್ ಮಾಡುವಂತೆ ಆಯಾ ಶಾಲೆಯ ಮುಖ್ಯ ಶಿಕ್ಷಕರಿಗೆ ಆದೇಶಿಸುತ್ತೇನೆ.”

-ಜವರೇಗೌಡ, ಡಿಡಿಪಿಐ

ಆಂದೋಲನ ಡೆಸ್ಕ್

Recent Posts

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

26 mins ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

3 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

3 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

3 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

3 hours ago