Andolana originals

ನಂಜನಗೂಡು: ಹುಳು ಹಿಡಿಯುತ್ತಿರುವ ಬಿಸಿಯೂಟದ ಅಕ್ಕಿ

ಶ್ರೀಧರ್ ಆರ್.ಭಟ್ಟ

ಚಿಕ್ಕಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ

ಹುಳು ಹಿಡಿದ ಅಕ್ಕಿಯನ್ನೇ ಬಳಸುತ್ತಿದ್ದಾರೆ ಎಂಬ ಆರೋಪ

ಪೋಷಕರ ಆಕ್ರೋಶಕೆ ಮುಖ್ಯ ಶಿಕ್ಷಕರ ತಗಾದೆ

ನಾವು ಅಕ್ಕಿ-ಬೇಳೆ ಖರೀದಿದಾರರಲ್ಲ ಎಂದ ಮುಖ್ಯ ಶಿಕ್ಷಕರು

 

ನಂಜನಗೂಡು: ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಸರಬರಾಜು ಮಾಡಿದ ಅಕ್ಕಿ ಹುಳು ಹಿಡಿಯಲಾರಂಭಿಸಿದ್ದು, ಹುಳು ಹಿಡಿದ ಅಕ್ಕಿಯಲ್ಲಿ ಮಾಡಿದ ಅನ್ನವನ್ನೇ ಮಕ್ಕಳಿಗೆ ಉಣಬಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಶನಿವಾರ ಬೆಳಿಗ್ಗೆ ತಯಾರಿಸಿದ ಉಪಾಹಾರದಲ್ಲಿ ಹುಳುಗಳನ್ನು ಕಂಡ ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಆಕ್ರೋಶ ವ್ಯಕ್ತಪಡಿಸಿ, ತಮ್ಮ ಪೋಷಕರನ್ನು ಕರೆ ತಂದು ತೋರಿಸಿದ್ದಾರೆ.

ನಂತರ ಪೋಷಕರು ಮುಖ್ಯಶಿಕ್ಷಕರಲ್ಲಿ ಹುಳು ಹಿಡಿದ ಆಹಾರನ್ನೇಕೆ ಮಕ್ಕಳಿಗೆ ತಿನ್ನಿಸುತ್ತಿದ್ದೀರಿ? ಎಂದು ಪ್ರಶ್ನಿಸಿದಾಗ, ಮುಖ್ಯಶಿಕ್ಷಕರು ಹಾಗೂ ಪೋಷಕರ ಮಧ್ಯೆ ವಾಗ್ವಾದ ನಡೆದಿದೆ.

ನಮಗೆ ನೀಡಿದ ದವಸ-ಧಾನ್ಯಗಳಿಂದ ನಾವು ಮಕ್ಕಳಿಗೆ ಆಹಾರ ಸಿದ್ಧಪಡಿಸಿ ನೀಡುತ್ತೇವೆ. ನಾವು ಅಕ್ಕಿ, ಬೇಳೆ ಖರೀದಿದಾರರಲ್ಲ ಎಂದು ಮುಖ್ಯಶಿಕ್ಷಕರು ವಾದಿಸಿದರು. ಆಗ ಪೋಷಕರು ನಿಮ್ಮ ಮಕ್ಕಳಿಗಾದರೆ ಹುಳು ಹಿಡಿದ ಅಕ್ಕಿಯ ಆಹಾರವನ್ನೇ ಬಡಿಸುತ್ತೀರಾ ಎಂದು ಪ್ರಶ್ನಿಸಿದಾಗ ಮುಖ್ಯಶಿಕ್ಷಕರು ಉತ್ತರಿಸಲಾಗದೆ ತಗಾದೆ ತೆಗೆದರು ಎಂಬುದು ಪೋಷಕರ ಆರೋಪವಾಗಿದೆ.

ಹುಳು ಹಿಡಿದ ಆಹಾರ ಪದಾರ್ಥಗಳ ಕುರಿತು ಮಾಹಿತಿ ನೀಡಲು ಕ್ಷೇತ್ರ ಶಿಕ್ಷಣಾಽಕಾರಿಗಳಿಗೆ ಕರೆ ಮಾಡಿದರೆ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು ಎಂದು ದೂರಿದ ಚಿಕ್ಕಹೊಮ್ಮ ಗ್ರಾಮದ ಪೋಷಕರು, ನಾವು ಇನ್ಯಾರಿಗೆ ದೂರು ನೀಡಬೇಕು ಎಂದು ಅಲವತ್ತುಕೊಂಡರು.

ತಾಲ್ಲೂಕಿನಾದ್ಯಂತ ಅನೇಕ ಶಾಲೆಗಳಲ್ಲಿ ಈಗ ಲಭ್ಯವಿರುವ ಅಕ್ಕಿ, ಗೋಧಿ, ಬೇಳೆಗಳು ಹುಳು ಹಿಡಿಯಲಾರಂಭಿಸಿದ್ದು, ಇದು ಆಗಲೇ ಮೇಲಧಿಕಾರಿಗಳ ಗಮನಕ್ಕೆ ಬಂದಿದ್ದರೂ ಆಹಾರ ಸರಬರಾಜು ಮಾಡುವವರೊಡನೆ ಶಾಮೀಲಾಗಿರುವುದರಿಂದ ನಾವೇನೂ ಮಾಡಲಾಗುತ್ತಿಲ್ಲ ಎಂದು ಮತ್ತೊಂದು ಶಾಲೆಯ ಮುಖ್ಯೋಪಾಧ್ಯಾಯರು ಪತ್ರಿಕೆಯೊಂದಿಗೆ ತಮ್ಮ ದುಗುಡವನ್ನು ಹಂಚಿಕೊಂಡರು.

ಶಾಲೆಗಳಿಗೆ ಈ ಬಾರಿ ಮಾರ್ಚ್ ತಿಂಗಳ ಕೊನೆಯಲ್ಲಿ ೩ ತಿಂಗಳಿಗಾಗುವಷ್ಟು ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿದ್ದು, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬೇಸಿಗೆ ರಜೆ ಇದ್ದುದರಿಂದ ಮತ್ತು ಮಳೆ ಬಂದದ್ದರಿಂದ ದವಸ-ಧಾನ್ಯಗಳು ಹುಳು ಹಿಡಿದಿವೆ ಎನ್ನುವ ತಾಲ್ಲೂಕಿನ ಅನೇಕ ಶಾಲೆಗಳ ಮುಖ್ಯೋಪಾಧ್ಯಾಯರು, ಈ ಬಗ್ಗೆ ಪೋಷಕರಷ್ಟೆ ಧ್ವನಿ ಎತ್ತಬೇಕು ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

” ಹುಳು ಹಿಡಿದ ಪದಾರ್ಥಗಳಿಂದ ಸಿದ್ಧಪಡಿಸಿದ ಆಹಾರವನ್ನು ಮಕ್ಕಳಿಗೆ ನೀಡುತ್ತಿರುವುದು ನಿಮ್ಮಿಂದಾಗಿ ನನ್ನ ಗಮನಕ್ಕೆ ಬಂದಿದೆ. ಅವುಗಳನ್ನು ವಾಪಸ್ ಮಾಡುವಂತೆ ಆಯಾ ಶಾಲೆಯ ಮುಖ್ಯ ಶಿಕ್ಷಕರಿಗೆ ಆದೇಶಿಸುತ್ತೇನೆ.”

-ಜವರೇಗೌಡ, ಡಿಡಿಪಿಐ

ಆಂದೋಲನ ಡೆಸ್ಕ್

Recent Posts

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

44 seconds ago

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

16 mins ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

34 mins ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

54 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

2 hours ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

2 hours ago