Andolana originals

ನಂಜನಗೂಡು: ಹುಳು ಹಿಡಿಯುತ್ತಿರುವ ಬಿಸಿಯೂಟದ ಅಕ್ಕಿ

ಶ್ರೀಧರ್ ಆರ್.ಭಟ್ಟ

ಚಿಕ್ಕಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ

ಹುಳು ಹಿಡಿದ ಅಕ್ಕಿಯನ್ನೇ ಬಳಸುತ್ತಿದ್ದಾರೆ ಎಂಬ ಆರೋಪ

ಪೋಷಕರ ಆಕ್ರೋಶಕೆ ಮುಖ್ಯ ಶಿಕ್ಷಕರ ತಗಾದೆ

ನಾವು ಅಕ್ಕಿ-ಬೇಳೆ ಖರೀದಿದಾರರಲ್ಲ ಎಂದ ಮುಖ್ಯ ಶಿಕ್ಷಕರು

 

ನಂಜನಗೂಡು: ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಸರಬರಾಜು ಮಾಡಿದ ಅಕ್ಕಿ ಹುಳು ಹಿಡಿಯಲಾರಂಭಿಸಿದ್ದು, ಹುಳು ಹಿಡಿದ ಅಕ್ಕಿಯಲ್ಲಿ ಮಾಡಿದ ಅನ್ನವನ್ನೇ ಮಕ್ಕಳಿಗೆ ಉಣಬಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಶನಿವಾರ ಬೆಳಿಗ್ಗೆ ತಯಾರಿಸಿದ ಉಪಾಹಾರದಲ್ಲಿ ಹುಳುಗಳನ್ನು ಕಂಡ ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಆಕ್ರೋಶ ವ್ಯಕ್ತಪಡಿಸಿ, ತಮ್ಮ ಪೋಷಕರನ್ನು ಕರೆ ತಂದು ತೋರಿಸಿದ್ದಾರೆ.

ನಂತರ ಪೋಷಕರು ಮುಖ್ಯಶಿಕ್ಷಕರಲ್ಲಿ ಹುಳು ಹಿಡಿದ ಆಹಾರನ್ನೇಕೆ ಮಕ್ಕಳಿಗೆ ತಿನ್ನಿಸುತ್ತಿದ್ದೀರಿ? ಎಂದು ಪ್ರಶ್ನಿಸಿದಾಗ, ಮುಖ್ಯಶಿಕ್ಷಕರು ಹಾಗೂ ಪೋಷಕರ ಮಧ್ಯೆ ವಾಗ್ವಾದ ನಡೆದಿದೆ.

ನಮಗೆ ನೀಡಿದ ದವಸ-ಧಾನ್ಯಗಳಿಂದ ನಾವು ಮಕ್ಕಳಿಗೆ ಆಹಾರ ಸಿದ್ಧಪಡಿಸಿ ನೀಡುತ್ತೇವೆ. ನಾವು ಅಕ್ಕಿ, ಬೇಳೆ ಖರೀದಿದಾರರಲ್ಲ ಎಂದು ಮುಖ್ಯಶಿಕ್ಷಕರು ವಾದಿಸಿದರು. ಆಗ ಪೋಷಕರು ನಿಮ್ಮ ಮಕ್ಕಳಿಗಾದರೆ ಹುಳು ಹಿಡಿದ ಅಕ್ಕಿಯ ಆಹಾರವನ್ನೇ ಬಡಿಸುತ್ತೀರಾ ಎಂದು ಪ್ರಶ್ನಿಸಿದಾಗ ಮುಖ್ಯಶಿಕ್ಷಕರು ಉತ್ತರಿಸಲಾಗದೆ ತಗಾದೆ ತೆಗೆದರು ಎಂಬುದು ಪೋಷಕರ ಆರೋಪವಾಗಿದೆ.

ಹುಳು ಹಿಡಿದ ಆಹಾರ ಪದಾರ್ಥಗಳ ಕುರಿತು ಮಾಹಿತಿ ನೀಡಲು ಕ್ಷೇತ್ರ ಶಿಕ್ಷಣಾಽಕಾರಿಗಳಿಗೆ ಕರೆ ಮಾಡಿದರೆ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು ಎಂದು ದೂರಿದ ಚಿಕ್ಕಹೊಮ್ಮ ಗ್ರಾಮದ ಪೋಷಕರು, ನಾವು ಇನ್ಯಾರಿಗೆ ದೂರು ನೀಡಬೇಕು ಎಂದು ಅಲವತ್ತುಕೊಂಡರು.

ತಾಲ್ಲೂಕಿನಾದ್ಯಂತ ಅನೇಕ ಶಾಲೆಗಳಲ್ಲಿ ಈಗ ಲಭ್ಯವಿರುವ ಅಕ್ಕಿ, ಗೋಧಿ, ಬೇಳೆಗಳು ಹುಳು ಹಿಡಿಯಲಾರಂಭಿಸಿದ್ದು, ಇದು ಆಗಲೇ ಮೇಲಧಿಕಾರಿಗಳ ಗಮನಕ್ಕೆ ಬಂದಿದ್ದರೂ ಆಹಾರ ಸರಬರಾಜು ಮಾಡುವವರೊಡನೆ ಶಾಮೀಲಾಗಿರುವುದರಿಂದ ನಾವೇನೂ ಮಾಡಲಾಗುತ್ತಿಲ್ಲ ಎಂದು ಮತ್ತೊಂದು ಶಾಲೆಯ ಮುಖ್ಯೋಪಾಧ್ಯಾಯರು ಪತ್ರಿಕೆಯೊಂದಿಗೆ ತಮ್ಮ ದುಗುಡವನ್ನು ಹಂಚಿಕೊಂಡರು.

ಶಾಲೆಗಳಿಗೆ ಈ ಬಾರಿ ಮಾರ್ಚ್ ತಿಂಗಳ ಕೊನೆಯಲ್ಲಿ ೩ ತಿಂಗಳಿಗಾಗುವಷ್ಟು ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿದ್ದು, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬೇಸಿಗೆ ರಜೆ ಇದ್ದುದರಿಂದ ಮತ್ತು ಮಳೆ ಬಂದದ್ದರಿಂದ ದವಸ-ಧಾನ್ಯಗಳು ಹುಳು ಹಿಡಿದಿವೆ ಎನ್ನುವ ತಾಲ್ಲೂಕಿನ ಅನೇಕ ಶಾಲೆಗಳ ಮುಖ್ಯೋಪಾಧ್ಯಾಯರು, ಈ ಬಗ್ಗೆ ಪೋಷಕರಷ್ಟೆ ಧ್ವನಿ ಎತ್ತಬೇಕು ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

” ಹುಳು ಹಿಡಿದ ಪದಾರ್ಥಗಳಿಂದ ಸಿದ್ಧಪಡಿಸಿದ ಆಹಾರವನ್ನು ಮಕ್ಕಳಿಗೆ ನೀಡುತ್ತಿರುವುದು ನಿಮ್ಮಿಂದಾಗಿ ನನ್ನ ಗಮನಕ್ಕೆ ಬಂದಿದೆ. ಅವುಗಳನ್ನು ವಾಪಸ್ ಮಾಡುವಂತೆ ಆಯಾ ಶಾಲೆಯ ಮುಖ್ಯ ಶಿಕ್ಷಕರಿಗೆ ಆದೇಶಿಸುತ್ತೇನೆ.”

-ಜವರೇಗೌಡ, ಡಿಡಿಪಿಐ

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

50 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago