Andolana originals

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ

ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ

ಮಡಿಕೇರಿ: ನಮ್ಮ ಗಣತಿ, ನಮ್ಮ ಅಭಿವೃದ್ಧಿ ೨೦೨೭ರ ಜನಗಣತಿಯ ಮೊದಲ ಹಂತವು ಈಗಾಗಲೇ ಆರಂಭ ವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಗಣತಿ ಕಾರ್ಯ ಚುರುಕು ಗೊಂಡಿದೆ. ಜಿಲ್ಲೆಯಲ್ಲಿ ಸುಮಾರು ೧,೭೪,೧೧೪ ಕುಟುಂಬಗಳನ್ನು ಗಣತಿ ಕಾರ್ಯಕ್ಕೆ ಗುರುತಿಸಲಾಗಿದ್ದು, ಎಲ್ಲಾ ಕುಟುಂಬಗಳ ಮಾಹಿತಿ ಸಂಗ್ರಹಕ್ಕೆ ಪ್ರಯತ್ನಿಸಲಾಗುತ್ತಿದೆ. ಏ.೧ರಿಂದ ಏ.೧೫ರವರೆಗೆ ಆನ್‌ಲೈನ್ ಮೂಲಕ  ಯಂ ಗಣತಿ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಜಿಲ್ಲೆಯಲ್ಲಿ ೭,೩೭೯ ಕುಟುಂಬಗಳು ಸ್ವಯಂ ಮಾಹಿತಿ ನೀಡಿವೆ. ಇನ್ನು ಉಳಿದ ಕುಟುಂಬಗಳ ಮಾಹಿತಿ ಸಂಗ್ರಹಕ್ಕೆ ಗಣತಿದಾರರು ಮನೆಗೆ ಭೇಟಿ ನೀಡಲಿದ್ದು, ಮೇ ೧೫ರವರೆಗೆ ಗಣತಿ ಕಾರ್ಯ ಕೈಗೊಳ್ಳಲಿದ್ದಾರೆ.

ಗಣತಿದಾರರು ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಲಿದ್ದು, ಸಾರ್ವಜನಿಕರು ಅಗತ್ಯ ಮಾಹಿತಿ ನೀಡಬೇಕಾಗುತ್ತದೆ. ಕಟ್ಟಡ ಸಂಖ್ಯೆ, ನೆಲ, ಗೋಡೆ ಮತ್ತು ಮೇಲ್ಚಾವಣಿ ನಿರ್ಮಾಣಕ್ಕೆ ಬಳಸಿದ ವಸ್ತುಗಳು, ಮನೆಯ ಬಳಕೆ, ಮನೆಯ ಸ್ಥಿತಿ ಮೊದಲಾದ ಮಾಹಿತಿಯನ್ನು ನೀಡಬೇಕಾಗುತ್ತದೆ. ಜೊತೆಗೆ ಕುಟುಂಬದ ಮೂಲಭೂತ ಮಾಹಿತಿಯನ್ನೂ ನೀಡಬೇಕಾಗಿದ್ದು, ಕುಟುಂಬ ಸದಸ್ಯರ ಸಂಖ್ಯೆ, ಕುಟುಂಬದ ಮುಖ್ಯಸ್ಥರ ಹೆಸರು, ಲಿಂಗ ಮತ್ತು ಜಾತಿ, ಮನೆಯ ಮಾಲೀಕತ್ವದ ಸ್ಥಿತಿ, ಕೊಠಡಿಗಳ ಸಂಖ್ಯೆ, ಮನೆಯಲ್ಲಿ ವಾಸಿಸುವ ವಿವಾಹಿತ ದಂಪತಿಗಳ ಸಂಖ್ಯೆಯ ಮಾಹಿತಿಯನ್ನು ಒದಗಿಸಬೇಕಾಗುತ್ತದೆ.

ಸೌಲಭ್ಯಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಮೂಲ ಮತ್ತು ಕುಡಿಯುವ ನೀರಿನ ಲಭ್ಯತೆ, ಬೆಳಕಿನ ಮುಖ್ಯ ಮೂಲ, ಶೌಚಾಲಯದ ಸೌಲಭ್ಯ ಹಾಗೂ ಶೌಚಾಲಯದ ಪ್ರಕಾರ, ಮಲಿನ ನೀರಿನ ಹರಿವು ವ್ಯವಸ್ಥೆ, ಸ್ನಾನಗೃಹ ಸೌಲಭ್ಯ, ಅಡುಗೆಮನೆ ಮತ್ತು ಸಂಪರ್ಕ, ಜೊತೆಗೆ ಅಡುಗೆಗೆ ಬಳಸುವ ಮುಖ್ಯ ಇಂಧನದ ಬಗೆಗಿನ ಮಾಹಿತಿಯನ್ನು ಗಣತಿದಾರರು ಸಂಗ್ರಹಿಸಲಿದ್ದಾರೆ. ಆಸ್ತಿಗಳಿಗೆ ಸಂಬಂಧಿಸಿದಂತೆ ರೇಡಿಯೋ, ಟ್ರಾನ್ಸಿಸ್ಟರ್‌ಗಳು, ಟೆಲಿವಿಷನ್, ಇಂಟರ್‌ನೆಟ್ ಸೌಲಭ್ಯ, ಕಂಪ್ಯೂಟರ್, ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್, ಟೆಲಿಫೋನ್, ದ್ವಿಚಕ್ರ, ನಾಲ್ಕು ಚಕ್ರ ವಾಹನಗಳ ಮಾಹಿತಿ ಯನ್ನೂ ನೀಡಬೇಕು. ಇದರೊಂದಿಗೆ ಬಳಸುವ ಮುಖ್ಯ ಧಾನ್ಯ ಹಾಗೂ ಜನಗಣತಿ ಸಂವಹನಕ್ಕಾಗಿ ಮೊಬೈಲ್ ಸಂಖ್ಯೆಯನ್ನೂ ನೀಡಬೇಕಿದೆ.

೯೯೯ ಗಣತಿದಾರರ ನೇಮಕ..!: ಮನೆ ಮನೆ ಗಣತಿ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ೯೯೯ ಗಣತಿದಾರರನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ ೧೮೭, ಮಡಿಕೇರಿ ನಗರಕ್ಕೆ ೬೧, ಸೋಮವಾರಪೇಟೆ ತಾಲ್ಲೂಕಿಗೆ ೧೮೬, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ೧೨, ವಿರಾಜಪೇಟೆ ತಾಲ್ಲೂಕಿಗೆ ೧೩೩, ವಿರಾಜಪೇಟೆ ಪುರಸಭೆ ವ್ಯಾಪ್ತಿಗೆ ೩೬, ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧೬೧, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ೧೯, ಕುಶಾಲನಗರ ತಾಲ್ಲೂಕಿಗೆ ೧೫೮, ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ೪೬, ಒಟ್ಟು ೯೯೯ ಗಣತಿದಾರರನ್ನು ನಿಯೋಜಿಸಲಾಗಿದೆ. ಜೊತೆಗೆ ೧೭೨ ಮಂದಿ ಗಣತಿ ಮೇಲ್ವಿಚಾರಕರಾಗಿ ಕರ್ತವ್ಯ  ನಿರ್ವಹಿಸಲಿದ್ದಾರೆ. ಹಾಗೆಯೇ ಶೇ.೧೦ ರಷ್ಟು ಗಣತಿದಾರರನ್ನು ಕಾಯ್ದಿರಿಸಲಾಗಿದೆ.

” ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಗಣತಿ ಕಾರ್ಯವೂ ಒಂದಾಗಿದ್ದು, ಸಾರ್ವಜನಿಕರು ಗಣತಿಯಲ್ಲಿ ಪಾಲ್ಗೊಂಡು ಮಾಹಿತಿ ನೀಡಬೇಕು. ಜನಗಣತಿಯು ದೇಶದ ಶಕ್ತಿ ಎಂಬುದನ್ನು ಮರೆಯಬಾರದು. ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಮೇ ೧೫ರವರೆಗೆ ಗಣತಿದಾರರು ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು, ಅಗತ್ಯ ಮಾಹಿತಿ ನೀಡಬೇಕು.”

-ಎಸ್.ಜೆ. ಸೋಮಶೇಖರ್, ಕೊಡಗು ಜಿಲ್ಲಾಧಿಕಾರಿ

 

 

 

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

8 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

9 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

9 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

10 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

10 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

10 hours ago