Andolana originals

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ

ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ

ಮಡಿಕೇರಿ: ನಮ್ಮ ಗಣತಿ, ನಮ್ಮ ಅಭಿವೃದ್ಧಿ ೨೦೨೭ರ ಜನಗಣತಿಯ ಮೊದಲ ಹಂತವು ಈಗಾಗಲೇ ಆರಂಭ ವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಗಣತಿ ಕಾರ್ಯ ಚುರುಕು ಗೊಂಡಿದೆ. ಜಿಲ್ಲೆಯಲ್ಲಿ ಸುಮಾರು ೧,೭೪,೧೧೪ ಕುಟುಂಬಗಳನ್ನು ಗಣತಿ ಕಾರ್ಯಕ್ಕೆ ಗುರುತಿಸಲಾಗಿದ್ದು, ಎಲ್ಲಾ ಕುಟುಂಬಗಳ ಮಾಹಿತಿ ಸಂಗ್ರಹಕ್ಕೆ ಪ್ರಯತ್ನಿಸಲಾಗುತ್ತಿದೆ. ಏ.೧ರಿಂದ ಏ.೧೫ರವರೆಗೆ ಆನ್‌ಲೈನ್ ಮೂಲಕ  ಯಂ ಗಣತಿ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಜಿಲ್ಲೆಯಲ್ಲಿ ೭,೩೭೯ ಕುಟುಂಬಗಳು ಸ್ವಯಂ ಮಾಹಿತಿ ನೀಡಿವೆ. ಇನ್ನು ಉಳಿದ ಕುಟುಂಬಗಳ ಮಾಹಿತಿ ಸಂಗ್ರಹಕ್ಕೆ ಗಣತಿದಾರರು ಮನೆಗೆ ಭೇಟಿ ನೀಡಲಿದ್ದು, ಮೇ ೧೫ರವರೆಗೆ ಗಣತಿ ಕಾರ್ಯ ಕೈಗೊಳ್ಳಲಿದ್ದಾರೆ.

ಗಣತಿದಾರರು ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಲಿದ್ದು, ಸಾರ್ವಜನಿಕರು ಅಗತ್ಯ ಮಾಹಿತಿ ನೀಡಬೇಕಾಗುತ್ತದೆ. ಕಟ್ಟಡ ಸಂಖ್ಯೆ, ನೆಲ, ಗೋಡೆ ಮತ್ತು ಮೇಲ್ಚಾವಣಿ ನಿರ್ಮಾಣಕ್ಕೆ ಬಳಸಿದ ವಸ್ತುಗಳು, ಮನೆಯ ಬಳಕೆ, ಮನೆಯ ಸ್ಥಿತಿ ಮೊದಲಾದ ಮಾಹಿತಿಯನ್ನು ನೀಡಬೇಕಾಗುತ್ತದೆ. ಜೊತೆಗೆ ಕುಟುಂಬದ ಮೂಲಭೂತ ಮಾಹಿತಿಯನ್ನೂ ನೀಡಬೇಕಾಗಿದ್ದು, ಕುಟುಂಬ ಸದಸ್ಯರ ಸಂಖ್ಯೆ, ಕುಟುಂಬದ ಮುಖ್ಯಸ್ಥರ ಹೆಸರು, ಲಿಂಗ ಮತ್ತು ಜಾತಿ, ಮನೆಯ ಮಾಲೀಕತ್ವದ ಸ್ಥಿತಿ, ಕೊಠಡಿಗಳ ಸಂಖ್ಯೆ, ಮನೆಯಲ್ಲಿ ವಾಸಿಸುವ ವಿವಾಹಿತ ದಂಪತಿಗಳ ಸಂಖ್ಯೆಯ ಮಾಹಿತಿಯನ್ನು ಒದಗಿಸಬೇಕಾಗುತ್ತದೆ.

ಸೌಲಭ್ಯಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಮೂಲ ಮತ್ತು ಕುಡಿಯುವ ನೀರಿನ ಲಭ್ಯತೆ, ಬೆಳಕಿನ ಮುಖ್ಯ ಮೂಲ, ಶೌಚಾಲಯದ ಸೌಲಭ್ಯ ಹಾಗೂ ಶೌಚಾಲಯದ ಪ್ರಕಾರ, ಮಲಿನ ನೀರಿನ ಹರಿವು ವ್ಯವಸ್ಥೆ, ಸ್ನಾನಗೃಹ ಸೌಲಭ್ಯ, ಅಡುಗೆಮನೆ ಮತ್ತು ಸಂಪರ್ಕ, ಜೊತೆಗೆ ಅಡುಗೆಗೆ ಬಳಸುವ ಮುಖ್ಯ ಇಂಧನದ ಬಗೆಗಿನ ಮಾಹಿತಿಯನ್ನು ಗಣತಿದಾರರು ಸಂಗ್ರಹಿಸಲಿದ್ದಾರೆ. ಆಸ್ತಿಗಳಿಗೆ ಸಂಬಂಧಿಸಿದಂತೆ ರೇಡಿಯೋ, ಟ್ರಾನ್ಸಿಸ್ಟರ್‌ಗಳು, ಟೆಲಿವಿಷನ್, ಇಂಟರ್‌ನೆಟ್ ಸೌಲಭ್ಯ, ಕಂಪ್ಯೂಟರ್, ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್, ಟೆಲಿಫೋನ್, ದ್ವಿಚಕ್ರ, ನಾಲ್ಕು ಚಕ್ರ ವಾಹನಗಳ ಮಾಹಿತಿ ಯನ್ನೂ ನೀಡಬೇಕು. ಇದರೊಂದಿಗೆ ಬಳಸುವ ಮುಖ್ಯ ಧಾನ್ಯ ಹಾಗೂ ಜನಗಣತಿ ಸಂವಹನಕ್ಕಾಗಿ ಮೊಬೈಲ್ ಸಂಖ್ಯೆಯನ್ನೂ ನೀಡಬೇಕಿದೆ.

೯೯೯ ಗಣತಿದಾರರ ನೇಮಕ..!: ಮನೆ ಮನೆ ಗಣತಿ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ೯೯೯ ಗಣತಿದಾರರನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ ೧೮೭, ಮಡಿಕೇರಿ ನಗರಕ್ಕೆ ೬೧, ಸೋಮವಾರಪೇಟೆ ತಾಲ್ಲೂಕಿಗೆ ೧೮೬, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ೧೨, ವಿರಾಜಪೇಟೆ ತಾಲ್ಲೂಕಿಗೆ ೧೩೩, ವಿರಾಜಪೇಟೆ ಪುರಸಭೆ ವ್ಯಾಪ್ತಿಗೆ ೩೬, ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧೬೧, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ೧೯, ಕುಶಾಲನಗರ ತಾಲ್ಲೂಕಿಗೆ ೧೫೮, ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ೪೬, ಒಟ್ಟು ೯೯೯ ಗಣತಿದಾರರನ್ನು ನಿಯೋಜಿಸಲಾಗಿದೆ. ಜೊತೆಗೆ ೧೭೨ ಮಂದಿ ಗಣತಿ ಮೇಲ್ವಿಚಾರಕರಾಗಿ ಕರ್ತವ್ಯ  ನಿರ್ವಹಿಸಲಿದ್ದಾರೆ. ಹಾಗೆಯೇ ಶೇ.೧೦ ರಷ್ಟು ಗಣತಿದಾರರನ್ನು ಕಾಯ್ದಿರಿಸಲಾಗಿದೆ.

” ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಗಣತಿ ಕಾರ್ಯವೂ ಒಂದಾಗಿದ್ದು, ಸಾರ್ವಜನಿಕರು ಗಣತಿಯಲ್ಲಿ ಪಾಲ್ಗೊಂಡು ಮಾಹಿತಿ ನೀಡಬೇಕು. ಜನಗಣತಿಯು ದೇಶದ ಶಕ್ತಿ ಎಂಬುದನ್ನು ಮರೆಯಬಾರದು. ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಮೇ ೧೫ರವರೆಗೆ ಗಣತಿದಾರರು ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು, ಅಗತ್ಯ ಮಾಹಿತಿ ನೀಡಬೇಕು.”

-ಎಸ್.ಜೆ. ಸೋಮಶೇಖರ್, ಕೊಡಗು ಜಿಲ್ಲಾಧಿಕಾರಿ

 

 

 

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago