Andolana originals

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ

ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಎಚ್‌ಪಿವಿ ಲಸಿಕಾ ಕಾರ್ಯಕ್ರಮಕ್ಕೆ ನಿರೀಕ್ಷಿತ ಸ್ಪಂದನೆ ದೊರಕಿಲ್ಲ. ಸುಳ್ಳು ಸುದ್ದಿ ಹರಡುವಿಕೆ ಮತ್ತು ಜನ ಜಾಗೃತಿಯ ಕೊರತೆಯಿಂದಾಗಿ ಅಲ್ಪ ಹಿನ್ನಡೆ ಯಾಗಿದೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಈ ಲಸಿಕೆ ಪರಿಣಾಮಕಾರಿಯಾಗಿದ್ದು, ೧೪ ರಿಂದ ೧೫ ವರ್ಷದೊಳಗಿನ ಬಾಲಕಿಯರು ಈ ಲಸಿಕೆಯ ಪ್ರಯೋಜನ ಪಡೆದುಕೊಳ್ಳ ಬೇಕೆಂದು ಆರೋಗ್ಯ ಇಲಾಖೆ ಅಽಕಾರಿಗಳು ಮನವಿ ಮಾಡಿದ್ದಾರೆ.

ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ನಿರೋಧಕ ಎಚ್‌ಪಿವಿ ಲಸಿಕೆ ನೀಡುವ ಅಭಿಯಾನವನ್ನು ಮಾ.೧೦ರಿಂದ ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೫,೨೭೬ ಮಂದಿ ೧೪ರಿಂದ ೧೫ ವರ್ಷದೊಳಗಿನ ಬಾಲಕಿಯರಿಗೆ ಈ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಆದರೆ ಕೆಲವೆಡೆ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಈ ಮಹತ್ವದ ಅಭಿಯಾನ ನಿಧಾನಗತಿಯಲ್ಲಿ ಸಾಗಿದ್ದು, ಈವರೆಗೆ ಅಂದಾಜು ೬೦೦ ಮಂದಿಗೆ ಮಾತ್ರ ಲಸಿಕೆಗಳನ್ನು ನೀಡಲಾಗಿದೆ.

ಎಚ್‌ಪಿವಿ ಲಸಿಕೆ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಪ್ರಮುಖ ಸಮಸ್ಯೆಯಾಗಿದ್ದು, ಲಸಿಕೆ ತೆಗೆದುಕೊಂಡರೆ ಬಂಜೆತನ ಬರುತ್ತದೆ ಎಂಬ ವದಂತಿಗಳು ಪೋಷಕರಲ್ಲಿ ಭಯ ಹುಟ್ಟಿಸುತ್ತಿವೆ. ಆದರೆ, ವೈಜ್ಞಾನಿಕ ಅಧ್ಯಯನಗಳು ಸ್ಪಷ್ಟವಾಗಿ ಹೇಳುವಂತೆ ಈ ಲಸಿಕೆ ಬಂಜೆತನಕ್ಕೆ ಕಾರಣವಾಗುವುದಿಲ್ಲ.

ಲಕ್ಷಾಂತರ ಜನರ ಮೇಲೆ ನಡೆಸಿದ ಅಧ್ಯಯನಗಳಲ್ಲಿ ಲಸಿಕೆ ಮತ್ತು ಸಂತಾನೋತ್ಪತ್ತಿ ನಡುವೆ ಯಾವುದೇ ಸಂಬಂಧ ಇಲ್ಲ. ಡಬ್ಲ್ಯು ಎಚ್‌ಒ ಸೇರಿದಂತೆ ಆರೋಗ್ಯ ಸಂಸ್ಥೆಗಳು ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿವೆ. ಎಚ್‌ಪಿವಿ ವೈರಸ್‌ನಿಂದ ಉಂಟಾಗುವ ಗರ್ಭಾಶಯ ಕ್ಯಾನ್ಸರ್ ಚಿಕಿತ್ಸೆ ಸ್ವತಃ ಸಂತಾನೋ ತ್ಪತ್ತಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಈಗಲೇ ಲಸಿಕೆ ತೆಗೆದುಕೊಳ್ಳುವುದು ಭವಿಷ್ಯದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಮತ್ತು ಸಂತಾನೋತ್ಪತ್ತಿಗೆ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.

ಹೀಗಿದ್ದೂ ಪೋಷಕರು , ಹೆಣ್ಣು ಮ್ಕಳಿಗೆ ಲಸಿಕೆ ಹಾಕಿಸಲು ಹಿಂದೇಟು ಹಾಕುತ್ತಿದ್ದಾರೆ. ಇದೀಗ ಶಾಲಾ ಪರೀಕ್ಷೆಗಳ ಸಮಯವಾಗಿರುವುದರಿಂದ, ವಿದ್ಯಾರ್ಥಿನಿಯರು ಹಾಗೂ ಪೋಷಕರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ. ಅಲ್ಲದೇ ಲಸಿಕೆಯಿಂದ ಜ್ವರದಂತಹ ಅಡ್ಡಪರಿಣಾಮಗಳಾಗಿ ಪರೀಕ್ಷೆಗೆ ಗೈರು ಹಾಜರಿಯಾಗಬೇಕಾಗುತ್ತದೆ, ಇದು ಪರೀಕ್ಷಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ಅಧ್ಯಾಪಕರೇ ಈಗ ಬೇಡ ಎಂಬ ಅಭಿಪ್ರಾಯ ಹೊಂದಿದ್ದಾರೆ ಎನ್ನಲಾಗಿದೆ. ಇದೂ ಕೂಡ ಅಭಿಯಾನ ಮಂದಗತಿಯಲ್ಲಿ ಸಾಗಲು ಕಾರಣವಾಗಿದೆ.

ಖಾಸಗಿ ದುಬಾರಿ ಲಸಿಕೆ..!:  ಸದ್ಯ ೧೪ ರಿಂದ ೧೫ ವರ್ಷದೊಳಗಿನ ಬಾಲಕಿಯರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದ್ದು, ೧೫ ವರ್ಷ ಮೇಲ್ಪಟ್ಟವರು ಖಾಸಗಿ ಸಂಸ್ಥೆಗಳಿಂದ ದುಬಾರಿ ಬೆಲೆ ನೀಡಿ ಲಸಿಕೆ ಹಾಕಿಸಿಕೊಳ್ಳಬೇಕಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಗೆ ಒಂದು ಡೋಸ್‌ಗೆ ೪ ಸಾವಿರ ರೂ.ಗಳಂತೆ ೨ ಡೋಸ್ ನೀಡಲಾಗುತ್ತಿದೆ. ಆದರೆ, ಆರೋಗ್ಯ ಇಲಾಖೆ ಪರಿಣಾಮಕಾರಿಯಾದ ಒಂದು ಡೋಸ್ ಅನ್ನು ಉಚಿತವಾಗಿ ನೀಡುತ್ತಿದೆ.

” ಜಿಲ್ಲೆಯಲ್ಲಿ ಲಸಿಕೆ ದಾಸ್ತಾನು ಸಾಕಷ್ಟಿದೆ. ಎಚ್‌ಪಿವಿ ಲಸಿಕೆಯ ಕುರಿತು ಅಪಪ್ರಚಾರ ನಡೆಸುತ್ತಿರುವುದರ ಹಿಂದೆ ಖಾಸಗಿ ಲಾಬಿ ಇರುವ ಸಾಧ್ಯತೆಯೂ ಇದೆ. ಆರಂಭದ ದಿನಗಳಾಗಿರುವುದರಿಂದ ಅಭಿಯಾನ ಕೊಂಚ ನಿಧಾನಗತಿಯಲ್ಲಿ ಸಾಗಿದೆ. ಕೋವಿಡ್ ಲಸಿಕೆಯಂತೆ ಮುಂದಿನ ದಿನಗಳಲ್ಲಿ ಸ್ವಯಂಪ್ರೇರಿತರಾಗಿ, ಜನರು ಮುಂದೆ ಬಂದು ಲಸಿಕೆ ಪಡೆಯುವ ಸಾಧ್ಯತೆ ಇದೆ. ಈ ಸಂಬಂಧ ಅರಿವು ಮೂಡಿಸಲಾಗುತ್ತಿದೆ.”

-ಡಾ.ಮಧುಸೂದನ್, ಆರ್‌ಸಿಎಚ್  ಅಧಿಕಾರಿ

ಏನಿದು ಎಚ್‌ಪಿವಿ ಲಸಿಕೆ?: 

೨೦೦ ಬಗೆಯ ಜನನಾಂಗದ ಸೋಂಕು ಉಂಟುಮಾಡುವ ೨೦ ಬಗೆಯ ಎಚ್‌ಪಿವಿ ವೈರಸ್‌ಗಳು ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗುತ್ತವೆ. ಈ ಪೈಕಿ ಎಚ್‌ಪಿವಿ ೧೬ ಮತ್ತು ೧೮ ಎಂಬ ವೈರಸ್ ಶೇ.೮೦ರಷ್ಟು ಕ್ಯಾನ್ಸರ್ ಕಾರಕವಾಗಿದ್ದು, ಇದರ ತಡೆಗೆ ಈ ಲಸಿಕೆ ಸಹಕಾರಿ. ಈ ಲಸಿಕೆ ನೀಡುವ ಕುರಿತು ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ವೈದ್ಯರ ಸಮ್ಮುಖದಲ್ಲಷ್ಟೇ ಲಸಿಕೆ ನೀಡಲಾಗುತ್ತಿದೆ. ಅಮೆರಿಕದ ಮಾರ್ಕ್ ಎಂಬ ಸಂಸ್ಥೆ ತಯಾರಿಸಿದ ಗಾರ್ಡಸಿಲ್ -೪ ಎಂಬ ಲಸಿಕೆಯನ್ನು ಆರೋಗ್ಯ ಇಲಾಖೆಯಿಂದ ಉಚಿತವಾಗಿ ನೀಡಲಾಗುತ್ತಿದೆ

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

10 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

11 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

12 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

12 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

13 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

13 hours ago