Andolana originals

ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಟೊಮೊಟೋ

ಮೈಸೂರು: ಮುಂಗಾರು ಮಳೆ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಟೊಮೊಟೋ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅರಮನೆ ನಗರಿ ಮೈಸೂರಿನಲ್ಲಿ ಟೊಮೊಟೋ ಹಣ್ಣಿನ ಮಾರಾಟ ದರ ದಿಢೀರ್ ಏರಿಕೆ ಕಂಡು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

ಮೂರ‍್ನಾಲ್ಕು ದಿನಗಳ ಹಿಂದೆ ಕೆ.ಜಿ.ಗೆ 30 ರೂ.ನಂತೆ ಮಾರಾಟವಾಗುತ್ತಿದ್ದ ಟೊಮೊಟೋ ಬೆಲೆ ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 80 ರೂ. ಹಾಗೂ ಹಾಪ್‌ಕಾಮ್ಸ್‌ನಲ್ಲಿ 60 ರೂ.ಗೆ ತಲುಪಿದ್ದು, ಗ್ರಾಹಕರು ಟೊಮೊಟೋ ಖರೀದಿಗೆ ಹಿಂದು ಮುಂದು ನೋಡುವಂತಾಗಿದೆ. ವರ್ಷದ ಹಿಂದೆ ಇದೇ ರೀತಿ ಬೆಲೆ ಏರಿಕೆಯಾಗಿ ಸುಮಾರು ಎರಡು ತಿಂಗಳುಗಳ ಕಾಲ ಕೆ.ಜಿ.ಗೆ 200 ರೂ.ವರೆಗೂ ಮಾರಾಟವಾಗಿತ್ತು.

ಈಗ ಆ ಮಟ್ಟದ ಬೆಲೆ ಏರಿಕೆ ಕಾಣದೇ ಇದ್ದರೂ ಕೆ.ಜಿ.ಗೆ 100 ರೂ. ತಲುಪಬಹುದು ಎಂದು ಮಾರಾಟಗಾರರು ಹೇಳುತ್ತಾರೆ. ಈ ಬಾರಿ ಸುರಿದ ಮಳೆಯಿಂದಾಗಿ ಮೊಟೋ ಬೆಳೆಗೆ ರೋಗ ತಗುಲಿ ಫಸಲು ಸಾಕಷ್ಟು ಹಾನಿಯಾಗಿರುವುದರಿಂದ ಮಾರುಕಟ್ಟೆಗೆ ಬೇಡಿಕೆಯಷ್ಟು ಟೊಮೊಟೋ ಪೂರೈಕೆಯಾಗುತ್ತಿಲ್ಲ. ಇದೇ ದಿಢೀರ್ ಬೆಲೆ ಏರಿಕೆಗೆ ಕಾರಣವಾಗಿದೆ. ಟೊಮೊಟೋ ದರದಲ್ಲಿ ಏರಿಕೆ ಕಾಣುತ್ತಿರುವುದು ರೈತರಲ್ಲಿ ಖುಷಿ ತಂದರೆ, ಗ್ರಾಹಕರು, ಹೋಟೆಲ್ ಮಾಲೀಕರನ್ನು ಕಂಗೆಡಿಸಿದೆ. ಬಡ-ಮಧ್ಯಮ ವರ್ಗದ ಜನರು ಟೊಮೊಟೋ ಕೊಳ್ಳಲು ಹಿಂದೇಟು ಹಾಕುವಂತಾಗಿದೆ. ಕಡಿಮೆ ಬಜೆಟ್ ನಲ್ಲಿ ಜೀವನ ಸಾಗಿಸುವಂತಹ ಕೆಲವು ಕುಟುಂಬಗಳು, ಟೊಮೊಟೋ ಬದಲಿಗೆ ಹುಣಿಸೇಹಣ್ಣು ಹಾಕಿ ಅಡುಗೆ ತಯಾರಿಸುವ ಸನ್ನಿವೇಶ ನಿರ್ಮಾಣವಾಗುತ್ತಿದೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಸರಗೂರು| ಕಾಡಾನೆ ದಾಳಿ: ದೇವಸ್ಥಾನದ ಕಾವಲುಗಾರ ಸಾವು

ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…

1 hour ago

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

4 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

4 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

4 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

4 hours ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

4 hours ago