ಮೈಸೂರು: ಮುಂಗಾರು ಮಳೆ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಟೊಮೊಟೋ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅರಮನೆ ನಗರಿ ಮೈಸೂರಿನಲ್ಲಿ ಟೊಮೊಟೋ ಹಣ್ಣಿನ ಮಾರಾಟ ದರ ದಿಢೀರ್ ಏರಿಕೆ ಕಂಡು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.
ಮೂರ್ನಾಲ್ಕು ದಿನಗಳ ಹಿಂದೆ ಕೆ.ಜಿ.ಗೆ 30 ರೂ.ನಂತೆ ಮಾರಾಟವಾಗುತ್ತಿದ್ದ ಟೊಮೊಟೋ ಬೆಲೆ ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 80 ರೂ. ಹಾಗೂ ಹಾಪ್ಕಾಮ್ಸ್ನಲ್ಲಿ 60 ರೂ.ಗೆ ತಲುಪಿದ್ದು, ಗ್ರಾಹಕರು ಟೊಮೊಟೋ ಖರೀದಿಗೆ ಹಿಂದು ಮುಂದು ನೋಡುವಂತಾಗಿದೆ. ವರ್ಷದ ಹಿಂದೆ ಇದೇ ರೀತಿ ಬೆಲೆ ಏರಿಕೆಯಾಗಿ ಸುಮಾರು ಎರಡು ತಿಂಗಳುಗಳ ಕಾಲ ಕೆ.ಜಿ.ಗೆ 200 ರೂ.ವರೆಗೂ ಮಾರಾಟವಾಗಿತ್ತು.
ಈಗ ಆ ಮಟ್ಟದ ಬೆಲೆ ಏರಿಕೆ ಕಾಣದೇ ಇದ್ದರೂ ಕೆ.ಜಿ.ಗೆ 100 ರೂ. ತಲುಪಬಹುದು ಎಂದು ಮಾರಾಟಗಾರರು ಹೇಳುತ್ತಾರೆ. ಈ ಬಾರಿ ಸುರಿದ ಮಳೆಯಿಂದಾಗಿ ಮೊಟೋ ಬೆಳೆಗೆ ರೋಗ ತಗುಲಿ ಫಸಲು ಸಾಕಷ್ಟು ಹಾನಿಯಾಗಿರುವುದರಿಂದ ಮಾರುಕಟ್ಟೆಗೆ ಬೇಡಿಕೆಯಷ್ಟು ಟೊಮೊಟೋ ಪೂರೈಕೆಯಾಗುತ್ತಿಲ್ಲ. ಇದೇ ದಿಢೀರ್ ಬೆಲೆ ಏರಿಕೆಗೆ ಕಾರಣವಾಗಿದೆ. ಟೊಮೊಟೋ ದರದಲ್ಲಿ ಏರಿಕೆ ಕಾಣುತ್ತಿರುವುದು ರೈತರಲ್ಲಿ ಖುಷಿ ತಂದರೆ, ಗ್ರಾಹಕರು, ಹೋಟೆಲ್ ಮಾಲೀಕರನ್ನು ಕಂಗೆಡಿಸಿದೆ. ಬಡ-ಮಧ್ಯಮ ವರ್ಗದ ಜನರು ಟೊಮೊಟೋ ಕೊಳ್ಳಲು ಹಿಂದೇಟು ಹಾಕುವಂತಾಗಿದೆ. ಕಡಿಮೆ ಬಜೆಟ್ ನಲ್ಲಿ ಜೀವನ ಸಾಗಿಸುವಂತಹ ಕೆಲವು ಕುಟುಂಬಗಳು, ಟೊಮೊಟೋ ಬದಲಿಗೆ ಹುಣಿಸೇಹಣ್ಣು ಹಾಕಿ ಅಡುಗೆ ತಯಾರಿಸುವ ಸನ್ನಿವೇಶ ನಿರ್ಮಾಣವಾಗುತ್ತಿದೆ.
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…