Andolana originals

ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಟೊಮೊಟೋ

ಮೈಸೂರು: ಮುಂಗಾರು ಮಳೆ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಟೊಮೊಟೋ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅರಮನೆ ನಗರಿ ಮೈಸೂರಿನಲ್ಲಿ ಟೊಮೊಟೋ ಹಣ್ಣಿನ ಮಾರಾಟ ದರ ದಿಢೀರ್ ಏರಿಕೆ ಕಂಡು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

ಮೂರ‍್ನಾಲ್ಕು ದಿನಗಳ ಹಿಂದೆ ಕೆ.ಜಿ.ಗೆ 30 ರೂ.ನಂತೆ ಮಾರಾಟವಾಗುತ್ತಿದ್ದ ಟೊಮೊಟೋ ಬೆಲೆ ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 80 ರೂ. ಹಾಗೂ ಹಾಪ್‌ಕಾಮ್ಸ್‌ನಲ್ಲಿ 60 ರೂ.ಗೆ ತಲುಪಿದ್ದು, ಗ್ರಾಹಕರು ಟೊಮೊಟೋ ಖರೀದಿಗೆ ಹಿಂದು ಮುಂದು ನೋಡುವಂತಾಗಿದೆ. ವರ್ಷದ ಹಿಂದೆ ಇದೇ ರೀತಿ ಬೆಲೆ ಏರಿಕೆಯಾಗಿ ಸುಮಾರು ಎರಡು ತಿಂಗಳುಗಳ ಕಾಲ ಕೆ.ಜಿ.ಗೆ 200 ರೂ.ವರೆಗೂ ಮಾರಾಟವಾಗಿತ್ತು.

ಈಗ ಆ ಮಟ್ಟದ ಬೆಲೆ ಏರಿಕೆ ಕಾಣದೇ ಇದ್ದರೂ ಕೆ.ಜಿ.ಗೆ 100 ರೂ. ತಲುಪಬಹುದು ಎಂದು ಮಾರಾಟಗಾರರು ಹೇಳುತ್ತಾರೆ. ಈ ಬಾರಿ ಸುರಿದ ಮಳೆಯಿಂದಾಗಿ ಮೊಟೋ ಬೆಳೆಗೆ ರೋಗ ತಗುಲಿ ಫಸಲು ಸಾಕಷ್ಟು ಹಾನಿಯಾಗಿರುವುದರಿಂದ ಮಾರುಕಟ್ಟೆಗೆ ಬೇಡಿಕೆಯಷ್ಟು ಟೊಮೊಟೋ ಪೂರೈಕೆಯಾಗುತ್ತಿಲ್ಲ. ಇದೇ ದಿಢೀರ್ ಬೆಲೆ ಏರಿಕೆಗೆ ಕಾರಣವಾಗಿದೆ. ಟೊಮೊಟೋ ದರದಲ್ಲಿ ಏರಿಕೆ ಕಾಣುತ್ತಿರುವುದು ರೈತರಲ್ಲಿ ಖುಷಿ ತಂದರೆ, ಗ್ರಾಹಕರು, ಹೋಟೆಲ್ ಮಾಲೀಕರನ್ನು ಕಂಗೆಡಿಸಿದೆ. ಬಡ-ಮಧ್ಯಮ ವರ್ಗದ ಜನರು ಟೊಮೊಟೋ ಕೊಳ್ಳಲು ಹಿಂದೇಟು ಹಾಕುವಂತಾಗಿದೆ. ಕಡಿಮೆ ಬಜೆಟ್ ನಲ್ಲಿ ಜೀವನ ಸಾಗಿಸುವಂತಹ ಕೆಲವು ಕುಟುಂಬಗಳು, ಟೊಮೊಟೋ ಬದಲಿಗೆ ಹುಣಿಸೇಹಣ್ಣು ಹಾಕಿ ಅಡುಗೆ ತಯಾರಿಸುವ ಸನ್ನಿವೇಶ ನಿರ್ಮಾಣವಾಗುತ್ತಿದೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

2 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

2 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

3 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

12 hours ago