Andolana originals

ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಟೊಮೊಟೋ

ಮೈಸೂರು: ಮುಂಗಾರು ಮಳೆ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಟೊಮೊಟೋ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅರಮನೆ ನಗರಿ ಮೈಸೂರಿನಲ್ಲಿ ಟೊಮೊಟೋ ಹಣ್ಣಿನ ಮಾರಾಟ ದರ ದಿಢೀರ್ ಏರಿಕೆ ಕಂಡು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

ಮೂರ‍್ನಾಲ್ಕು ದಿನಗಳ ಹಿಂದೆ ಕೆ.ಜಿ.ಗೆ 30 ರೂ.ನಂತೆ ಮಾರಾಟವಾಗುತ್ತಿದ್ದ ಟೊಮೊಟೋ ಬೆಲೆ ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 80 ರೂ. ಹಾಗೂ ಹಾಪ್‌ಕಾಮ್ಸ್‌ನಲ್ಲಿ 60 ರೂ.ಗೆ ತಲುಪಿದ್ದು, ಗ್ರಾಹಕರು ಟೊಮೊಟೋ ಖರೀದಿಗೆ ಹಿಂದು ಮುಂದು ನೋಡುವಂತಾಗಿದೆ. ವರ್ಷದ ಹಿಂದೆ ಇದೇ ರೀತಿ ಬೆಲೆ ಏರಿಕೆಯಾಗಿ ಸುಮಾರು ಎರಡು ತಿಂಗಳುಗಳ ಕಾಲ ಕೆ.ಜಿ.ಗೆ 200 ರೂ.ವರೆಗೂ ಮಾರಾಟವಾಗಿತ್ತು.

ಈಗ ಆ ಮಟ್ಟದ ಬೆಲೆ ಏರಿಕೆ ಕಾಣದೇ ಇದ್ದರೂ ಕೆ.ಜಿ.ಗೆ 100 ರೂ. ತಲುಪಬಹುದು ಎಂದು ಮಾರಾಟಗಾರರು ಹೇಳುತ್ತಾರೆ. ಈ ಬಾರಿ ಸುರಿದ ಮಳೆಯಿಂದಾಗಿ ಮೊಟೋ ಬೆಳೆಗೆ ರೋಗ ತಗುಲಿ ಫಸಲು ಸಾಕಷ್ಟು ಹಾನಿಯಾಗಿರುವುದರಿಂದ ಮಾರುಕಟ್ಟೆಗೆ ಬೇಡಿಕೆಯಷ್ಟು ಟೊಮೊಟೋ ಪೂರೈಕೆಯಾಗುತ್ತಿಲ್ಲ. ಇದೇ ದಿಢೀರ್ ಬೆಲೆ ಏರಿಕೆಗೆ ಕಾರಣವಾಗಿದೆ. ಟೊಮೊಟೋ ದರದಲ್ಲಿ ಏರಿಕೆ ಕಾಣುತ್ತಿರುವುದು ರೈತರಲ್ಲಿ ಖುಷಿ ತಂದರೆ, ಗ್ರಾಹಕರು, ಹೋಟೆಲ್ ಮಾಲೀಕರನ್ನು ಕಂಗೆಡಿಸಿದೆ. ಬಡ-ಮಧ್ಯಮ ವರ್ಗದ ಜನರು ಟೊಮೊಟೋ ಕೊಳ್ಳಲು ಹಿಂದೇಟು ಹಾಕುವಂತಾಗಿದೆ. ಕಡಿಮೆ ಬಜೆಟ್ ನಲ್ಲಿ ಜೀವನ ಸಾಗಿಸುವಂತಹ ಕೆಲವು ಕುಟುಂಬಗಳು, ಟೊಮೊಟೋ ಬದಲಿಗೆ ಹುಣಿಸೇಹಣ್ಣು ಹಾಕಿ ಅಡುಗೆ ತಯಾರಿಸುವ ಸನ್ನಿವೇಶ ನಿರ್ಮಾಣವಾಗುತ್ತಿದೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago