ಮೈಸೂರು: ಮುಂಗಾರು ಮಳೆ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಟೊಮೊಟೋ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅರಮನೆ ನಗರಿ ಮೈಸೂರಿನಲ್ಲಿ ಟೊಮೊಟೋ ಹಣ್ಣಿನ ಮಾರಾಟ ದರ ದಿಢೀರ್ ಏರಿಕೆ ಕಂಡು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.
ಮೂರ್ನಾಲ್ಕು ದಿನಗಳ ಹಿಂದೆ ಕೆ.ಜಿ.ಗೆ 30 ರೂ.ನಂತೆ ಮಾರಾಟವಾಗುತ್ತಿದ್ದ ಟೊಮೊಟೋ ಬೆಲೆ ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 80 ರೂ. ಹಾಗೂ ಹಾಪ್ಕಾಮ್ಸ್ನಲ್ಲಿ 60 ರೂ.ಗೆ ತಲುಪಿದ್ದು, ಗ್ರಾಹಕರು ಟೊಮೊಟೋ ಖರೀದಿಗೆ ಹಿಂದು ಮುಂದು ನೋಡುವಂತಾಗಿದೆ. ವರ್ಷದ ಹಿಂದೆ ಇದೇ ರೀತಿ ಬೆಲೆ ಏರಿಕೆಯಾಗಿ ಸುಮಾರು ಎರಡು ತಿಂಗಳುಗಳ ಕಾಲ ಕೆ.ಜಿ.ಗೆ 200 ರೂ.ವರೆಗೂ ಮಾರಾಟವಾಗಿತ್ತು.
ಈಗ ಆ ಮಟ್ಟದ ಬೆಲೆ ಏರಿಕೆ ಕಾಣದೇ ಇದ್ದರೂ ಕೆ.ಜಿ.ಗೆ 100 ರೂ. ತಲುಪಬಹುದು ಎಂದು ಮಾರಾಟಗಾರರು ಹೇಳುತ್ತಾರೆ. ಈ ಬಾರಿ ಸುರಿದ ಮಳೆಯಿಂದಾಗಿ ಮೊಟೋ ಬೆಳೆಗೆ ರೋಗ ತಗುಲಿ ಫಸಲು ಸಾಕಷ್ಟು ಹಾನಿಯಾಗಿರುವುದರಿಂದ ಮಾರುಕಟ್ಟೆಗೆ ಬೇಡಿಕೆಯಷ್ಟು ಟೊಮೊಟೋ ಪೂರೈಕೆಯಾಗುತ್ತಿಲ್ಲ. ಇದೇ ದಿಢೀರ್ ಬೆಲೆ ಏರಿಕೆಗೆ ಕಾರಣವಾಗಿದೆ. ಟೊಮೊಟೋ ದರದಲ್ಲಿ ಏರಿಕೆ ಕಾಣುತ್ತಿರುವುದು ರೈತರಲ್ಲಿ ಖುಷಿ ತಂದರೆ, ಗ್ರಾಹಕರು, ಹೋಟೆಲ್ ಮಾಲೀಕರನ್ನು ಕಂಗೆಡಿಸಿದೆ. ಬಡ-ಮಧ್ಯಮ ವರ್ಗದ ಜನರು ಟೊಮೊಟೋ ಕೊಳ್ಳಲು ಹಿಂದೇಟು ಹಾಕುವಂತಾಗಿದೆ. ಕಡಿಮೆ ಬಜೆಟ್ ನಲ್ಲಿ ಜೀವನ ಸಾಗಿಸುವಂತಹ ಕೆಲವು ಕುಟುಂಬಗಳು, ಟೊಮೊಟೋ ಬದಲಿಗೆ ಹುಣಿಸೇಹಣ್ಣು ಹಾಕಿ ಅಡುಗೆ ತಯಾರಿಸುವ ಸನ್ನಿವೇಶ ನಿರ್ಮಾಣವಾಗುತ್ತಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…