Andolana originals

ಹುಣಸೂರು ಮಾದಕ ವಸ್ತು ಪ್ರಕರಣ ; ಮುಂಬೈಗೆ ತೆರಳಿದ ಪೊಲೀಸರ ತಂಡ

ಹುಣಸೂರು ; ತೋಟದ ಮನೆಯಲ್ಲಿ ಮಾದಕ ವಸ್ತು ವಶ ಪ್ರಕರಣ

ಮೈಸೂರು : ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೋಟ್ಯಂತರ ರೂ.ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಒಂದು ತಂಡ ಬುಧವಾರ ಮುಂಬೈಗೆ ತೆರಳಿದೆ.

ಹುಣಸೂರಿನ ರತ್ನಪುರಿ ಬಳಿಯ ದಾಸನ ಪುರ ತೋಟದ ಮನೆಯ ಮೇಲೆ ದಾಳಿ ನಡೆಸಿದ್ದ ಜಿಲ್ಲಾ ಪೊಲಿಸರ ತಂಡ ಅಲ್ಲಿದ್ದ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಲ್ಲದೆ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ವಶಕ್ಕೆ ಪಡೆಯಲಾಗಿದ್ದ ಮಾದಕ ವಸ್ತುಗಳನ್ನು ಜಿಲ್ಲಾ ಪೊಲೀಸರು ನ್ಯಾಯಾಲಯಕ್ಕೆ ತೆರಳಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅವುಗಳನ್ನು ಎಫ್ಎಸ್‌ಎಲ್ ವಿಭಾಗಕ್ಕೆ ರವಾನಿಸಿದ್ದರು.

ನಂತರ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಹಾಗೂ ಅವರುಗಳ ಸಿಮ್ ಕಾರ್ಡ್‌ಗಳ ಪರಿಶೀಲನೆ ನಡೆಸಿದ ವೇಳೆ ಆರೋಪಿಗಳ ಸಂಪರ್ಕದಲ್ಲಿ ಇದ್ದ ಇಬ್ಬರು ಮುಂಬೈನಲ್ಲಿ ನೆಲೆಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿದೆ. ಹೀಗಾಗಿ ಎಸ್‌ಪಿ ಅವರ ಸೂಚನೆ ಮೇರೆಗೆ ಐದು ಮಂದಿ ಪೊಲೀಸ್ ಅಧಿಕಾರಿಗಳ ತಂಡ ಬುಧವಾರ ಮುಂಬೈಗೆ ತೆರಳಿದೆ. ಈ ವೇಳೆ ಅವರ ವಿಳಾಸವನ್ನೂ ಪಡೆದಿರುವ ಪೊಲೀಸರು, ಅಲ್ಲಿನ ಪೊಲೀಸ್ ನೆರವಿನೊಂದಿಗೆ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

5 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

6 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

6 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

11 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

14 hours ago