Andolana originals

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ

ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ. ಈ ಸಮಯದಲ್ಲಿ ಆ ದೇಶ ನನಗೆ ಅಪಾರ ಪ್ರೀತಿ ಮತ್ತು ಅವಕಾಶಗಳನ್ನು ನೀಡಿದೆ. ಅಲ್ಲಿನ ರಾಜಕೀಯ, ಧಾರ್ಮಿಕತೆ, ವ್ಯಾಪಾರ, ಆರ್ಥಿ ಕತೆ, ಇತಿಹಾಸ, ವಿದೇಶಾಂಗ ನೀತಿ, ನ್ಯಾಯಾಂಗ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ನಾನು ನನ್ನ ಅಮೆರಿಕನ್ ಮಿತ್ರರೊಂದಿಗೆ ಕಟು ಟೀಕೆಯ ಮಾತುಗಳಾಡಿದ್ದೇನೆ. ಚರ್ಚಿಸಿದ್ದೇನೆ.

ಬರೆದಿದೆ ನೆ  ಸಹ. ಆದರೆ, ಇವು, ಒಮ್ಮೆಯೂ ನನಗೆ ಭಯ-ಆತಂಕದ ಅನುಭವ ನೀಡಿಲ್ಲ. ೨೦೦೧ ರ ಸೆಪ್ಟೆಂಬರ್ ೧೧ ರ ಘಟನೆ ನನ್ನ ಜೀವನದ ಅತ್ಯಂತ ಭಯಾನಕ ಕ್ಷಣ. ಆ ದಿನ ಅಲ್ ಕೈದಾ ದುರುಳರ ದಾಳಿಗೆ ವರ್ಲ್ಡ್ ಟ್ರೇಡ್ ಸೆಂಟರ್ ಕುಸಿಯುವಾಗ ಅಕ್ಷರಶಃ ನಾನು ಅದರ ಕೆಳಗೆ ಸಿಲುಕಿದ್ದೆ. ನಂತರದಲ್ಲಿ ನನ್ನಲ್ಲಿ ಒಂದು ಆತಂಕವಿತ್ತು- ಈ ದೇಶ ನಮ್ಮಂತಹ ವಿದೇಶಿಯರನ್ನು ಹೇಗೆ ನೋಡಬಹುದು ಅಂತ. ಆದರೆ ಅಂದಿನ ಅಧ್ಯಕ್ಷ ಜಾರ್ಜ್ ಬುಷ್ ಅವರು, ಆ ದಿನ ಮುಸ್ಲಿಂ ಮತ್ತು ಅರಬ್ ಅಮೆರಿಕನ್ನರ ಪಕ್ಕದಲ್ಲಿ ನಿಂತು, ಭಯೋತ್ಪಾದನೆಗೂ ಸಾಮಾನ್ಯ ಜನರಿಗೂ ಸಂಬಂಧವಿಲ್ಲ ಎಂದು ಹೇಳಿ ದೇಶವನ್ನು ಒಂದಾಗಿಟ್ಟರು.

ಹೊರಗಿನಿಂದ ಬಂದವರು ಎಸಗಿದ ದಾಳಿಯಲ್ಲಿ ಮೂರು ಸಾವಿರ ಅಮೆರಿಕನ್ನರು ಹತರಾಗಿದ್ದರೂ ಬಹುಮಟ್ಟಿಗೆ ಇಡೀ ದೇಶ ಅದಕ್ಕೆ ಶಾಂತಿಯಿಂದಲೇ ಪ್ರತಿಕ್ರಿಯಿಸಿತು. ನನ್ನ ಆತಂಕ ಹೆಚ್ಚು ದಿನ ಉಳಿಯಲಿಲ್ಲ. ವೈಯಕ್ತಿಕವಾಗಿ ನನಗೆ ಯಾವುದೇ ಜನಾಂಗೀಯ ನಿಂದನೆಯ ಅನುಭವ ಆಗಿಲ್ಲ. ಆದರೆ,  ಇಂದು ಪರಿಸ್ಥಿತಿ ಬದಲಾಗಿದೆ. ಟ್ರಂಪ್ ಅಂತಹ ನಾಯಕರಿಂದಾಗಿ, ದ್ವೇಷ ಸಾಮಾನ್ಯವಾಗುವುದನ್ನು ಕಂಡಾಗ, ಅಮೆರಿಕದಲ್ಲೇ ನೆಲೆ ಕಂಡು ಕೊಂಡಿರುವ ನನ್ನ ಇಬ್ಬರು ಮಕ್ಕಳಂತಹವರ ಭವಿಷ್ಯದ ಬಗ್ಗೆ ಖಂಡಿತ ಆತಂಕ ಮೂಡುತ್ತದೆ.  ಹಿಟ್ಲರ್ ಕಾಲದ ಜರ್ಮನ್ ಸಮಾಜದ ಬಗೆ  ಮಾರ್ಟಿನ್ ನಿಮ್ಮೊಲ್ಲರ್ ಹೇಳಿದ ಮಾತುಗಳನ್ನು ನೆನಪಿಸುತ್ತವೆ:

” ‘ಅವರು ಬೇರೆಯವರಿಗೆಂದು ಬಂದಾಗ ನಾನು ಸುಮ್ಮನಿದ್ದೆ,  ಕೊನೆಗೆ, ಅವರು ನನಗೆಂದು ಬಂದಾಗ ನನ್ನ ಪರ ನಿಲ್ಲಲು ಯಾರೂ ಇರಲಿಲ್ಲ’. ಅಂತಹ ಪರಿಸ್ಥಿತಿ ನಮಗೆ ಬರಬಾರದು ಅಷ್ಟೇ.”

-ಶೇಷಾದ್ರಿ ಗಂಜೂರು,  ಮಾಧ್ಯಮ ತಜ್ಞರು

 

 

ಆಂದೋಲನ ಡೆಸ್ಕ್

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

3 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

3 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

3 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

3 hours ago