Andolana originals

ನನ್ನ ಓದು ಆರಂಭವಾಗಿದ್ದೇ ʼಆಂದೋಲನʼದಿಂದ: ದರ್ಶನ್‌

ನಂಜನಗೂಡು: ನನ್ನ ಓದು ಆರಂಭವಾಗಿದ್ದೇ ‘ಆಂದೋಲನ’ ಪತ್ರಿಕೆಯಿಂದ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು. ತಾಲ್ಲೂಕು ಆಡಳಿತ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ‘ಆಂದೋಲನ’ದ ೫೨ನೇ ವರ್ಷದ ವಿಶೇಷ ಸಂಚಿಕೆಯನ್ನು ಲೋಕಾರ್ಪ ಣೆಗೊಳಿಸಿ ಅವರು ಮಾತನಾಡಿದರು. ನಾನು ಚಿಕ್ಕವನಾಗಿದ್ದಾಗ ಮನೆಗೆ ಬರುತ್ತಿದ್ದ ‘ಆಂದೋಲನ’ದ ಅಕ್ಷರ ಗಳನ್ನು ಓದಿಯೇ ಕನ್ನಡ ಕಲಿತಿದ್ದು. ಕೋಟಿಯವರು ಕಟ್ಟಿ ಬೆಳೆಸಿದ ಈ ಸಮಾಜಮುಖಿ ಸಂಸ್ಥೆಯನ್ನು ಇಂದು ಅವರ ಮಕ್ಕಳು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಪತ್ರಿಕೆ ಶತನೋತ್ಸವ ಕಾಣುವಂತಾಗಲಿ ಎಂದರು. ಹೋರಾಟಗಾರ ಚುಂಚನಹಳ್ಳಿ ಮಲ್ಲೇಶ ಮಾತನಾಡಿ, ೭೦ – ೮೦ರ ದಶಕದಲ್ಲಿ ‘ಆಂದೋಲನ’ ರೈತ, ದಲಿತ ಚಳವಳಿಗಳ ಹೋರಾಟಗಾರರ ಬೆನ್ನೆಲು ಬಾಗಿ ಕೆಲಸ ಮಾಡಿತ್ತು ಎಂದು ಸ್ಮರಿಸಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ತಹಸಿಲ್ದಾರ್ ಶಿವಕುಮಾರ್ ಕ್ಯಾಸನೂರು, ತಾಪಂ ಇಒ ಜೆರಾಲ್ಡ್ ರಾಜೇಶ್, ಮಲ್ಲಳ್ಳಿ ನಾರಾಯಣ, ಚುಂಚನ ಹಳ್ಳಿ ಮಲ್ಲೇಶ, ಕಾರ್ಯ ಬಸವಣ್ಣ, ವಿಜಯಕುಮಾರ್, ಸ್ವಾಮಿ, ಬೊಕ್ಕಹಳ್ಳಿ ಲಿಂಗಯ್ಯ, ದೇವರಾಜು, ಮಹದೇವಯ್ಯ, ರಾಜೇಶ, ಸಿ. ಎಂ. ಶಂಕರ್, ದೇವನೂರು ಶಿವಪ್ಪದೇವರು, ವಿಜಯ ಕುಮಾರ್, ದೊರೆಸ್ವಾಮಿ ನಾಯಕ, ಹಗಿನವಾಳು ಬಸವಣ್ಣ ಹಾಜರಿದ್ದರು.

andolana

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

6 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

6 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

6 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

11 hours ago