Andolana originals

ಗ್ರಾಮ ಸಹಾಯಕರಿಗಿನ್ನು ಇಡುಗಂಟು ಭಾಗ್ಯ!

ಗಿರೀಶ್ ಹುಣಸೂರು

ಮೈಸೂರು: ಮಿತ ವೇತನದ ಹೆಸರಿನಲ್ಲಿ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಮೃತರಾದಲ್ಲಿ, ನಿವೃತ್ತಿ ಹೊಂದಿದಲ್ಲಿ ಗರಿಷ್ಟ ೫ ಲಕ್ಷ ರೂ. ವರೆಗೆ ಒಂದು ಬಾರಿಯ ಇಡುಗಂಟು ಸೌಲಭ್ಯವನ್ನು ರಾಜ್ಯಸರ್ಕಾರ ಕಲ್ಪಿಸಿದೆ.

ಕರ್ನಾಟಕ ಗ್ರಾಮ ಕಚೇರಿಗಳ ರದ್ದತಿ ಕಾಯ್ದೆ -೧೯೬೧, ೧೯೬೩ರ -.೧ರಿಂದ ಜಾರಿಗೆ ಬಂದಿದ್ದು, ಈ ಅಧಿನಿಯಮದ ಅನ್ವಯ ಕಂದಾಯ ಇಲಾಖೆಯಲ್ಲಿ ವಂಶಪಾರಂಪರ್ಯವಾಗಿ ಮುಂದುವರಿಯುತ್ತಿದ್ದ ಶ್ಯಾನುಭೋಗರು, ಪಟೇಲರು ಇನ್ನು ಮುಂತಾದ ಎಲ್ಲ ಕೆಳಹಂತದ ಗ್ರಾಮ ಅಧಿಕಾರಿ ಹುದ್ದೆಗಳನ್ನು ರದ್ದುಪಡಿಸಿ, ಆಡಳಿತಾತ್ಮಕ ಅನುಕೂಲಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಹಾಯ ಮಾಡಲು ಗ್ರಾಮ ಸಹಾಯಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಸೃಜಿಸಲಾಗಿದೆ.

ಕಂದಾಯ ಇಲಾಖೆಯಲ್ಲಿ ೮,೯೪೧ ಗ್ರಾಮ ಸಹಾಯಕರ ಹುದ್ದೆಗಳನ್ನು ಸ್ಟಿಪೆಂಡಿಯರಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ೧೦,೪೫೦ ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತವೇತನದ ಆಧಾರದ ಮೇಲೆ ಖಾಯಂ ಆಗಿ ಮುಂದುವರಿಸಿ ಆದೇಶಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿ ಸುತ್ತಿರುವ ೯,೯೦೩ ಗ್ರಾಮ ಸಹಾಯಕರ ಮಾಸಿಕ ಮಿತ ವೇತನವನ್ನು ೨೦೨೪ರ ಏ.೧ರಿಂದ ಅನ್ವಯವಾಗುವಂತೆ ೧೩ ಸಾವಿರ ರೂ.ಗಳಿಂದ ೧೫ ಸಾವಿರ ರೂ.ಗಳಿಗೆ ಹೆಚ್ಚಿಸ ಲಾಗಿತ್ತು.

ಕರ್ನಾಟಕ ರಾಜ್ಯ ಸರ್ಕಾರ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಗ್ರಾಮ ಸಹಾಯಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಹಾಗೂ ಸೇವಾ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಅವರನ್ನು ಗ್ರೂಪ್-ಡಿ ನೌಕರರು ಎಂದು ಪರಿಗಣಿಸಿ ೨೭ ಸಾವಿರ ರೂ. ವೇತನ ನಿಗದಿಪಡಿಸಬೇಕು. ಅಲ್ಲದೆ ಮರಣ, ನಿವೃತ್ತಿ ಹೊಂದಿದ ಗ್ರಾಮ ಸಹಾಯಕರಿಗೆ ೧೦ ಲಕ್ಷ ರೂ.ಗಳ ಇಡುಗಂಟು ನೀಡಬೇಕು ಎಂಬ ಬೇಡಿಕೆಗಳನ್ನಿಟ್ಟು ಹೋರಾಟ ನಡೆಸಿತ್ತು.

ಗ್ರಾಮ ಸಹಾಯಕರು ೬೫ ವರ್ಷ ವಯಸ್ಸಿನವರೆಗೆ ಸೇವೆಯಲ್ಲಿ ಮುಂದುವರಿಯಲು ಅವಕಾಶವಿದ್ದು, ಪ್ರಸ್ತುತ ಇವರಿಗೆ ಮಾಸಿಕ ೧೫ ಸಾವಿರ ರೂ. ಮಿತವೇತನವನ್ನು ಪಾವತಿಸಲಾಗುತ್ತಿದ್ದು, ವೇತನ ಹೊರತುಪಡಿಸಿ ಇನ್ಯಾವುದೇ ಸೇವಾ ಸೌಲಭ್ಯಗಳು ಇರುವುದಿಲ್ಲ. ಇವರು ಖಾಯಂ ಸರ್ಕಾರಿ ನೌಕರರಾಗದೇ ಇರುವುದರಿಂದ ತುಟ್ಟಿಭತ್ಯೆ, ವೇತನ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿ ಇವುಗಳಾವುವೂ ಲಭ್ಯವಾಗುತ್ತಿಲ್ಲ. ಗ್ರಾಮ ಸಹಾಯಕರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ಗೌರವಯುತ ನಿವೃತ್ತಿ ಜೀವನವನ್ನು ನಡೆಸಲು ಮತ್ತು ದೈನಂದಿನ ಅಗತ್ಯಗಳ ವೆಚ್ಚ, ಮಕ್ಕಳ ಶಿಕ್ಷಣ, ವೃದ್ಧ ಪೋಷಕರ ನಿರ್ವಹಣೆಗೆ ನಿವೃತ್ತಿ ನಂತರ, ಮೃತರಾದ ಸಂದರ್ಭದಲ್ಲಿ ಒಂದು ಬಾರಿಗೆ ೫ ಲಕ್ಷ ರೂ.ಗಳ ಇಡು ಗಂಟು ನೀಡಲು ೨೦೨೫ರ ಸೆ.೨೫ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಐದು ತಿಂಗಳ ಬಳಿಕ ೨೦೨೬ರ -.೬ರಂದು ಇಡುಗಂಟು ನೀಡಲು ಕೆಲ ಷರತ್ತುಗಳೊಂದಿಗೆ ಸರ್ಕಾರ ಆದೇಶ ಹೊರಡಿಸಿದ್ದು, ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಸೇವೆಯಲ್ಲಿರುವಾಗಲೇ ಮೃತರಾದಲ್ಲಿ, ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಗರಿಷ್ಟ ೫ ಲಕ್ಷ ರೂ.ಗಳವರೆಗೆ ಇಡುಗಂಟನ್ನು ಮಂಜೂರು ಮಾಡಿ ಆದೇಶಿಸಿದೆ.

” ೨೦೨೫ರ ಸೆ.೨೫ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಕರಣ ಸಂಖ್ಯೆ: ೮೨೭/೨೦೨೫ರಲ್ಲಿ ಕೈಗೊಳ್ಳಲಾದ ನಿರ್ಣಯದ ಅನ್ವಯ ಈ ಆದೇಶವನ್ನು ಹೊರಡಿಸಲಾಗಿದೆ. ಗ್ರಾಮ ಸಹಾಯಕರುಗಳು ನಿವೃತ್ತಿ ನಂತರ, ಮೃತರಾದ ಸಂದರ್ಭದಲ್ಲಿ ಒಂದು ಬಾರಿಗೆ ೫ ಲಕ್ಷ ರೂ.ಗಳ ಇಡುಗಂಟು ಸೌಲಭ್ಯ ದೊರೆಯಲಿದೆ.”

-ರಾಜೇಂದರ್ ಕುಮಾರ್ ಕಟಾರಿಯಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ.

ಷರತ್ತುಗಳು: 

ಅರ್ಹ ಪ್ರಕರಣಗಳಲ್ಲಿ ಒಂದು ವೇಳೆ ಗ್ರಾಮ ಸಹಾಯಕರು ಮರಣಹೊಂದಿದ್ದರೆ, ಅರ್ಹ ಅವಲಂಬಿತರಿಗೆ ಇಡುಗಂಟು ಮೊತ್ತವನ್ನು ಪಾವತಿಸಲಾಗುತ್ತದೆ. ಅವಲಂಬಿತರು ಇಡುಗಂಟನ್ನು ಪಡೆಯಲು ಸಲ್ಲಿಸಬೇಕಾ ಗಿರುವ ಅರ್ಜಿಯ ನಮೂನೆ, ಸೇವಾ ದೃಢೀಕರಣ ಪತ್ರ, ಮರಣ ಪ್ರಮಾಣ ಪತ್ರ ಹಾಗೂ ಇತರೆ ಸಂಬಂಽತ ದಾಖಲೆಗಳೊಂದಿಗೆ ಪ್ರಸ್ತಾವನೆ ಸ್ವೀಕೃತಿಗೆ ಅನುಸರಿಸಬೇಕಾಗಿರುವ ಕಾರ್ಯವಿಧಾನದ ಕುರಿತು ಒಂದು ಸಮಗ್ರವಾದ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದು ಹೇಳಲಾಗಿದೆ. ಅರ್ಹ ಪ್ರಸ್ತಾವನೆಗಳನ್ನು ಸಂಬಂಧಿತ ತಹಸಿಲ್ದಾರ್‌ಗಳು ಪಡೆದು ಪರಿಶೀಲಿಸಿ, ದೃಢೀಕರಿಸಿ, ಆಯಾ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರೆ ಜಿಲ್ಲಾಧಿಕಾರಿಗಳ ಹಂತದಲ್ಲಿ ಸ್ವೀಕೃತಗೊಂಡ ಪ್ರಸ್ತಾವನೆಗಳನ್ನು ಪರಿಶೀಲನೆಯ ನಂತರ ಅರ್ಹ ಪ್ರಸ್ತಾವನೆಗಳಿಗೆ ಇಡುಗಂಟು ನೀಡುವ ಸಂಬಂಧ ಮಂಜೂರಾತಿ ಆದೇಶವನ್ನು ಹೊರಡಿಸಲಾಗುತ್ತದೆ.

 

 

ಆಂದೋಲನ ಡೆಸ್ಕ್

Recent Posts

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

37 mins ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

38 mins ago

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…

1 hour ago

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

2 hours ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…

2 hours ago

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

3 hours ago