Andolana originals

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ ಕಾಳಪ್ಪ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದಲ್ಲಿ ಕಾಳಪ್ಪರವರ ಜಮೀನಿನಲ್ಲಿ ನಡೆದ ದೇಸಿ ಬೀಜ ತಳಿಗಳ ಕ್ಷೇತ್ರ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಮನೆಯಲ್ಲೂ ರೈತರು ದೇಸಿ ಬಿತ್ತನೆ ಬೀಜಗಳ ಸಂಗ್ರಹ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ತಲೆಮಾರಿಗೆ ತೊಂದರೆ ಎದುರಾಗಲಿದೆ. ಖಾಸಗಿ ಕಂಪೆನಿಗಳು ಬಿತ್ತನೆ ಬೀಜದ ಜೊತೆಗೆ ಔಷಧಿ, ರಸಗೊಬ್ಬರಗಳನ್ನು ನೀಡಿ ಹಣ ಮಾಡಿಕೊಂಡು ವಿಷಯುಕ್ತ ಆಹಾರವನ್ನು ಉತ್ಪಾದಿಸಲು ಪ್ರೋತ್ಸಾಹ ನೀಡುತ್ತಿವೆ. ಇದರಿಂದ ಇಂದು ಹಳ್ಳಿಗಳಲ್ಲಿ ಗೊಬ್ಬರ ಔಷಧಿ ಅಂಗಡಿಗಳ ಜೊತೆಜೊತೆಗೆ ಆಸ್ಪತ್ರೆಗಳು ತೆರೆಯಲಾರಂಭಿಸಿವೆ. ಆದ್ದರಿಂದ ಇದನ್ನು ಅರಿತುಕೊಂಡು ದೇಸಿ ಬೀಜಗಳ ಸಂರಕ್ಷಣೆ ಮಾಡುವುದರೊಂದಿಗೆ ಸಾವಯವ ಕೃಷಿ ಮೂಲಕ ವಿಷಮುಕ್ತ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯವಂತರಾಗಿ ಬದುಕಬೇಕು ಎಂದು ತಿಳಿಸಿದರು.

ಗೋಪಾಲ್ ಸಂಸ್ಥೆಯ ಸಂದೀಪ್ ಮಾತನಾಡಿ, ದೇಸಿ ಬೀಜಗಳನ್ನು ಸಂಗ್ರಹಿಸಿ ಮರುಬಳಕೆ ಮಾಡುವುದರ ಮೂಲಕ ರೋಗ ನಿರೋಧಕ ಸಸ್ಯಗಳನ್ನು ಅಭಿವೃದ್ಧಿಪಡಿಸಬಹುದು. ಬೀಜಗಳ ಸಂರಕ್ಷಣೆ ಮತ್ತು ವೈಜ್ಞಾನಿಕ ವಿಧಾನವನ್ನು ಅರಿತು ಬೀಜಗಳ ಸಂರಕ್ಷಣೆಗೆ ಮುಂದಾಗಬೇಕು. ಆಗ ಮಾತ್ರ ಉತ್ತಮ ಬಿತ್ತನೆ ಬೀಜಗಳು ಲಭ್ಯವಾಗುತ್ತವೆ ಎಂದು ತಿಳಿಸಿದರು.

ಕೆ.ಪಿ.ಆಶಾ ಕುಮಾರಿ ಮಾತನಾಡಿ, ತಂಬಾಕು ಬೆಳೆಯುತ್ತಿದ್ದ ಕಾಳಪ್ಪ, ತಮ್ಮ ಕಡಿಮೆ ಜಮೀನಿನಲ್ಲಿ ಸಾವಯವ ಕೃಷಿಗೆ ಮುಂದಾಗಿದ್ದು, ಇಂದು ರಾಜ್ಯಾದ್ಯಂತ ದೇಸಿ ಬೀಜಗಳನ್ನು ಸಂರಕ್ಷಿಸಿ ನಿರ್ವಹಣೆ ಮಾಡುತ್ತಿದ್ದಾರೆ. ಈ ಕೆಲಸ ಅವರಿಗೆ ಆರ್ಥಿಕ ಅಭಿವೃದ್ಧಿಯ ಜೊತೆಗೆ ಉತ್ತಮ ಹೆಸರನ್ನು ಕೂಡ ತಂದುಕೊಟ್ಟಿದೆ. ಅನ್ನ ಇಕ್ಕುವ ತಾಯಿಗೆ ರಾಸಾಯನಿಕ ವಿಷಯವನ್ನು ಹಾಕುವ ಪದ್ಧತಿಯನ್ನು ಕೈಬಿಟ್ಟು ಭೂಮಿಯ ಉತ್ಕ ಷ್ಟತೆಯನ್ನು ಕಾಪಾಡಿಕೊಂಡು ಬರಬೇಕು ಎಂದು ತಿಳಿಸಿದರು.

ಪರಿಸರ ಹೋರಾಟಗಾರ ಕೌಲನಹಳ್ಳಿ ಸೋಮಶೇಖರ್ ಮಾತನಾಡಿ, ಜನರು ಇಂದು ಕಾರ್ಪೊರೇಟ್ ಸೆಕ್ಟರ್‌ನಿಂದ ವ್ಯವಸಾಯದ ಕಡೆ ಹೆಚ್ಚು ಆಕರ್ಷಿತರಾಗುತ್ತಿದ್ದು, ಸೂಕ್ತ ಸಲಹೆ ಮತ್ತು ಮಾರ್ಗದರ್ಶನದ ಅಗತ್ಯತೆ ಎಲ್ಲರಿಗೂ ಇದೆ. ಮುಂದಿನ ದಿನಗಳಲ್ಲಿ ಆಹಾರ ಬೇಳೆಗಳ ಉತ್ಪಾದನೆಗೆ ಹೆಚ್ಚಿನ ಮಹತ್ವ ದೊರಕಲಿದೆ ಎಂದು ತಿಳಿಸಿದರು. ನಿವೃತ್ತ ಪ್ರಾಧ್ಯಾಪಕ ಲೋಕನಾಥ್, ದೇಶಿತಳಿ ಸಂರಕ್ಷಕ ಶಂಕರ್, ಹರ್ಷ, ರವಿ, ಕಾವ್ಯ, ಮತ್ತಿತರರು ಹಾಜರಿದ್ದರು.

ಸನ್ಮಾನ, ಮಾಹಿತಿ: ವಿಜ್ಞಾನ ಲೇಖಕಿ ಸುಧಾ ಸಂದೀಪ್, ಕೆ.ಪಿ.ಆಶಾಕುಮಾರಿ ಅವರನ್ನು ಸನ್ಮಾನಿಸಲಾಯಿತು. ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತರಿಗೆ ದೇಸಿ ಬಿತ್ತನೆ ಬೀಜಗಳ ಮಾರಾಟ, ಪ್ರದರ್ಶನ, ದೇಸಿ ತಳಿಗಳ ಸಂರಕ್ಷಣೆಯ ಪ್ರಾತ್ಯಕ್ಷಿತೆಯ ಮಾಹಿತಿ ನೀಡಲಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

8 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

8 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

8 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

8 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

8 hours ago