ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ.
ಈಗ ಎಲ್ಲೆಡೆ ಹತ್ತಿ ಬಿಡಿಸುವ ಕಾರ್ಯ ಚುರುಕಾಗಿದೆ. ಕೆಲ ಭಾಗಗಳಲ್ಲಿ ಹಿಂಗಾರು ಮಳೆಯಿಂದಾಗಿ ಹತ್ತಿ ಗುಣಮಟ್ಟ ಕಳೆದು ಕೊಳ್ಳುತ್ತಿದೆ. ಇದು ಸಹಜವಾಗಿಯೇ ಹತ್ತಿ ಬೆಳೆಯ ಬೆಲೆ ಕುಸಿಯುವಂತೆ ಮಾಡಿದೆ.
ಹತ್ತಿ ಬೆಳೆಗಾರರು ಆತಂಕಪಡುವುದು ಬೇಡ. ಮಳೆಯಿಂದಾಗಿ ಹತ್ತಿ ಬೆಳೆ ನಾಶವಾಗಿದ್ದರೆ, ಅದನ್ನು ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರ ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಬಳಿ ಅನುದಾನವನ್ನು ಮೀಸಲಿಟ್ಟಿದೆ. ಕ್ಷೇತ್ರದ ಶಾಸಕರ ಮೂಲಕ ಅವರ ಗಮನಕ್ಕೆ ತಂದರೆ ನೆರೆ ಪರಿಹಾರದ ಮೂಲಕ ಆ ಅನುದಾನದಿಂದ ಪರಿಹಾರ ಪಡೆಯಬಹುದಾಗಿದೆ. ಇದರೊಂದಿಗೆ ಮಳೆಯಿಂದಾಗಿ ಹಾಳಾದ ಹತ್ತಿಯನ್ನು ಬಿಡಿಸಿ ಅದರ ಬೀಜ ತೆಗೆದು ಒಣಗಿಸಿ ಅದನ್ನು ಪರ್ಯಾಯವಾಗಿ ಬಳಕೆ ಮಾಡ ಬಹುದು. ಹಾಸಿಗೆಗಳ ತಯಾರಿಕೆಯಲ್ಲಿ ಈ ಹತ್ತಿ ಬಳಸುವುದರಿಂದ ಆ ಮೂಲಕವೂ ರೈತರ ಆದಾಯ ಗಳಿಸಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರದ ಗಮನ ಸೆಳೆಯುವುದು ಅತಿಮುಖ್ಯ.
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…