ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ.
ಈಗ ಎಲ್ಲೆಡೆ ಹತ್ತಿ ಬಿಡಿಸುವ ಕಾರ್ಯ ಚುರುಕಾಗಿದೆ. ಕೆಲ ಭಾಗಗಳಲ್ಲಿ ಹಿಂಗಾರು ಮಳೆಯಿಂದಾಗಿ ಹತ್ತಿ ಗುಣಮಟ್ಟ ಕಳೆದು ಕೊಳ್ಳುತ್ತಿದೆ. ಇದು ಸಹಜವಾಗಿಯೇ ಹತ್ತಿ ಬೆಳೆಯ ಬೆಲೆ ಕುಸಿಯುವಂತೆ ಮಾಡಿದೆ.
ಹತ್ತಿ ಬೆಳೆಗಾರರು ಆತಂಕಪಡುವುದು ಬೇಡ. ಮಳೆಯಿಂದಾಗಿ ಹತ್ತಿ ಬೆಳೆ ನಾಶವಾಗಿದ್ದರೆ, ಅದನ್ನು ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರ ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಬಳಿ ಅನುದಾನವನ್ನು ಮೀಸಲಿಟ್ಟಿದೆ. ಕ್ಷೇತ್ರದ ಶಾಸಕರ ಮೂಲಕ ಅವರ ಗಮನಕ್ಕೆ ತಂದರೆ ನೆರೆ ಪರಿಹಾರದ ಮೂಲಕ ಆ ಅನುದಾನದಿಂದ ಪರಿಹಾರ ಪಡೆಯಬಹುದಾಗಿದೆ. ಇದರೊಂದಿಗೆ ಮಳೆಯಿಂದಾಗಿ ಹಾಳಾದ ಹತ್ತಿಯನ್ನು ಬಿಡಿಸಿ ಅದರ ಬೀಜ ತೆಗೆದು ಒಣಗಿಸಿ ಅದನ್ನು ಪರ್ಯಾಯವಾಗಿ ಬಳಕೆ ಮಾಡ ಬಹುದು. ಹಾಸಿಗೆಗಳ ತಯಾರಿಕೆಯಲ್ಲಿ ಈ ಹತ್ತಿ ಬಳಸುವುದರಿಂದ ಆ ಮೂಲಕವೂ ರೈತರ ಆದಾಯ ಗಳಿಸಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರದ ಗಮನ ಸೆಳೆಯುವುದು ಅತಿಮುಖ್ಯ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…