ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ.
ಈಗ ಎಲ್ಲೆಡೆ ಹತ್ತಿ ಬಿಡಿಸುವ ಕಾರ್ಯ ಚುರುಕಾಗಿದೆ. ಕೆಲ ಭಾಗಗಳಲ್ಲಿ ಹಿಂಗಾರು ಮಳೆಯಿಂದಾಗಿ ಹತ್ತಿ ಗುಣಮಟ್ಟ ಕಳೆದು ಕೊಳ್ಳುತ್ತಿದೆ. ಇದು ಸಹಜವಾಗಿಯೇ ಹತ್ತಿ ಬೆಳೆಯ ಬೆಲೆ ಕುಸಿಯುವಂತೆ ಮಾಡಿದೆ.
ಹತ್ತಿ ಬೆಳೆಗಾರರು ಆತಂಕಪಡುವುದು ಬೇಡ. ಮಳೆಯಿಂದಾಗಿ ಹತ್ತಿ ಬೆಳೆ ನಾಶವಾಗಿದ್ದರೆ, ಅದನ್ನು ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರ ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಬಳಿ ಅನುದಾನವನ್ನು ಮೀಸಲಿಟ್ಟಿದೆ. ಕ್ಷೇತ್ರದ ಶಾಸಕರ ಮೂಲಕ ಅವರ ಗಮನಕ್ಕೆ ತಂದರೆ ನೆರೆ ಪರಿಹಾರದ ಮೂಲಕ ಆ ಅನುದಾನದಿಂದ ಪರಿಹಾರ ಪಡೆಯಬಹುದಾಗಿದೆ. ಇದರೊಂದಿಗೆ ಮಳೆಯಿಂದಾಗಿ ಹಾಳಾದ ಹತ್ತಿಯನ್ನು ಬಿಡಿಸಿ ಅದರ ಬೀಜ ತೆಗೆದು ಒಣಗಿಸಿ ಅದನ್ನು ಪರ್ಯಾಯವಾಗಿ ಬಳಕೆ ಮಾಡ ಬಹುದು. ಹಾಸಿಗೆಗಳ ತಯಾರಿಕೆಯಲ್ಲಿ ಈ ಹತ್ತಿ ಬಳಸುವುದರಿಂದ ಆ ಮೂಲಕವೂ ರೈತರ ಆದಾಯ ಗಳಿಸಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರದ ಗಮನ ಸೆಳೆಯುವುದು ಅತಿಮುಖ್ಯ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…