ಎಸ್.ಎಸ್.ಭಟ್
ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ ನಂಜನಗೂಡು ತಲುಪಲು ಅಶ್ವಮೇಧ ಬಸ್ ಹತ್ತಿದವರೆಲ್ಲರಿಗೂ ಈ ಆಘಾತ ಎದುರಾಗಿದೆ.
ಆ ಬಸ್ನಲ್ಲಿ ಮೈಸೂರಿನಿಂದ ನಂಜಗೂಡಿಗೆ ಅಥವಾ ನಂಜನಗೂಡಿನಿಂದ ಮೈಸೂರಿಗೆ ಟಿಕೆಟ್ ಕೇಳಿದರೆ ಬಸ್ ನಿರ್ವಾಹಕ ಮೈಸೂರು-ತಿ.ನರಸೀಪುರ ಅಥವಾ ತಿ.ನರಸೀಪುರ-ಮೈಸೂರು ಎಂದು ಮುದ್ರಿತವಾಗಿರುವ ಟಿಕೆಟ್ ನೀಡುತ್ತಾರೆ. ಹಾಗಂತ ಪ್ರಯಾಣಿಕರೇನು ಗಾಬರಿಪಡಬೇಕಿಲ್ಲ. ಏಕೆಂದರೆ ಆ ಬಸ್ ತಿ.ನರಸೀಪುರಕ್ಕೆ ಹೋಗುವುದಿಲ್ಲ. ಅದು ನೇರವಾಗಿ ನಂಜನಗೂಡಿಗೆ ತಲುಪುತ್ತದೆ. ನಂಜನಗೂಡಿಂದಾದರೆ ಮೈಸೂರು ನಗರಕ್ಕೆ ಬರುತ್ತದೆ.
ಆದರೆ ಪ್ರಯಾಣಿಕರು ಆ ಬಸ್ ಹತ್ತಿ ಪ್ರಯಾಣ ಮಾಡಿದ ತಪ್ಪಿಗೆ ೪೬ ರೂ. ಬದಲಿಗೆ ೪೮ ರೂ. ಅಂದರೆ ೨ ರೂ. ಹೆಚ್ಚು ದರ ನೀಡಬೇಕಾಗುತ್ತದೆ. ಈ ೨ ರೂ. ಹೆಚ್ಚಳವಾಗಿರುವುದು ೧೨-೨-೨೦೨೬ ಗುರುವಾರದಿಂದ. ಈ ಹೆಚ್ಚಳದ ಕುರಿತಂತೆ ಸಾರಿಗೆ ನಿಗಮದ ನಂಜನಗೂಡು ಡಿಪೋದ ಅDiಕಾರಿ ಸುಮಾ ಅವರನ್ನು ಪ್ರಶ್ನಿಸಿದರೆ, ಈ ವಿಚಾರ ನನ್ನ ಗಮನಕ್ಕೇನೂ ಬಂದಿಲ್ಲ. ಹಾಗಾಗಲು ಸಾಧ್ಯವೇ ಇಲ್ಲ ಎನ್ನುತ್ತಾರೆ.
” ಮಲೆ ಮಹದೇಶ್ವರ ಬೆಟ್ಟಕ್ಕೆ ೧೩-೨-೨೦೨೬ರಿಂದ ೩೦ ಅಶ್ವಮೇಧ ಬಸ್ಗಳನ್ನು ಬಿಡಲಾಗಿದ್ದು ಅವರು ನಂಜನಗೂಡಿಗೆ ಟ್ರಿಪ್ ಹೋಗುವ ಹಾಗೇ ಇಲ್ಲ. ಟಿಕೆಟ್ ನೀಡುವಂತೆಯೂ ಇಲ್ಲ. ನಂಜನಗೂಡು-ಮೈಸೂರು ನಡುವಿನ ಪ್ರಯಾಣ ದರ ಹೆಚ್ಚಳವಾಗಿಯೇ ಇಲ್ಲ. ಅದನ್ನು ಈಗ ನಾವು ಪರಿಶೀಲಿಸಬೇಕಿದೆ.”
ವೀರೇಶ, ಡಿಸಿ, ಸಾರಿಗೆ ನಿಗಮ
” ಮೈಸೂರು-ತಿ.ನರಸೀಪುರ ಮಾರ್ಗದ ಮುದ್ರಿತ ಟಿಕೆಟ್ ಪಡೆದು ನಂಜನ ಗೂಡಿಗೆ ಪ್ರಯಾಣ ಬೆಳೆಸಿದರೆ ಆಗುವ ಅನಾಹುತದ ಅರಿವು ಯಾರಿಗೂ ಇಲ್ಲ. ಅಕಸ್ಮಿಕ ವಾಗಿ ಮೈಸೂರು-ನಂಜನಗೂಡು ರಸ್ತೆಯಲ್ಲಿ ಆ ಬಸ್ ಅಪಘಾತವಾದರೆ ವಿಮೆಯ ಜಾರಿಯಲ್ಲಿ ಭಾರೀ ತೊಡಕಾಗುವುದು ಖಚಿತ. ಹಾಗಾದಾಗ ಯಾರು ಜವಾಬ್ದಾರರು?”
ಎಂ.ಎನ್.ಚಂದ್ರಶೇಖರ್, ಜೆ.ಪಿ.ನಗರ, ಮೈಸೂರು
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…