ಎಸ್.ಎಸ್.ಭಟ್
ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ ನಂಜನಗೂಡು ತಲುಪಲು ಅಶ್ವಮೇಧ ಬಸ್ ಹತ್ತಿದವರೆಲ್ಲರಿಗೂ ಈ ಆಘಾತ ಎದುರಾಗಿದೆ.
ಆ ಬಸ್ನಲ್ಲಿ ಮೈಸೂರಿನಿಂದ ನಂಜಗೂಡಿಗೆ ಅಥವಾ ನಂಜನಗೂಡಿನಿಂದ ಮೈಸೂರಿಗೆ ಟಿಕೆಟ್ ಕೇಳಿದರೆ ಬಸ್ ನಿರ್ವಾಹಕ ಮೈಸೂರು-ತಿ.ನರಸೀಪುರ ಅಥವಾ ತಿ.ನರಸೀಪುರ-ಮೈಸೂರು ಎಂದು ಮುದ್ರಿತವಾಗಿರುವ ಟಿಕೆಟ್ ನೀಡುತ್ತಾರೆ. ಹಾಗಂತ ಪ್ರಯಾಣಿಕರೇನು ಗಾಬರಿಪಡಬೇಕಿಲ್ಲ. ಏಕೆಂದರೆ ಆ ಬಸ್ ತಿ.ನರಸೀಪುರಕ್ಕೆ ಹೋಗುವುದಿಲ್ಲ. ಅದು ನೇರವಾಗಿ ನಂಜನಗೂಡಿಗೆ ತಲುಪುತ್ತದೆ. ನಂಜನಗೂಡಿಂದಾದರೆ ಮೈಸೂರು ನಗರಕ್ಕೆ ಬರುತ್ತದೆ.
ಆದರೆ ಪ್ರಯಾಣಿಕರು ಆ ಬಸ್ ಹತ್ತಿ ಪ್ರಯಾಣ ಮಾಡಿದ ತಪ್ಪಿಗೆ ೪೬ ರೂ. ಬದಲಿಗೆ ೪೮ ರೂ. ಅಂದರೆ ೨ ರೂ. ಹೆಚ್ಚು ದರ ನೀಡಬೇಕಾಗುತ್ತದೆ. ಈ ೨ ರೂ. ಹೆಚ್ಚಳವಾಗಿರುವುದು ೧೨-೨-೨೦೨೬ ಗುರುವಾರದಿಂದ. ಈ ಹೆಚ್ಚಳದ ಕುರಿತಂತೆ ಸಾರಿಗೆ ನಿಗಮದ ನಂಜನಗೂಡು ಡಿಪೋದ ಅDiಕಾರಿ ಸುಮಾ ಅವರನ್ನು ಪ್ರಶ್ನಿಸಿದರೆ, ಈ ವಿಚಾರ ನನ್ನ ಗಮನಕ್ಕೇನೂ ಬಂದಿಲ್ಲ. ಹಾಗಾಗಲು ಸಾಧ್ಯವೇ ಇಲ್ಲ ಎನ್ನುತ್ತಾರೆ.
” ಮಲೆ ಮಹದೇಶ್ವರ ಬೆಟ್ಟಕ್ಕೆ ೧೩-೨-೨೦೨೬ರಿಂದ ೩೦ ಅಶ್ವಮೇಧ ಬಸ್ಗಳನ್ನು ಬಿಡಲಾಗಿದ್ದು ಅವರು ನಂಜನಗೂಡಿಗೆ ಟ್ರಿಪ್ ಹೋಗುವ ಹಾಗೇ ಇಲ್ಲ. ಟಿಕೆಟ್ ನೀಡುವಂತೆಯೂ ಇಲ್ಲ. ನಂಜನಗೂಡು-ಮೈಸೂರು ನಡುವಿನ ಪ್ರಯಾಣ ದರ ಹೆಚ್ಚಳವಾಗಿಯೇ ಇಲ್ಲ. ಅದನ್ನು ಈಗ ನಾವು ಪರಿಶೀಲಿಸಬೇಕಿದೆ.”
ವೀರೇಶ, ಡಿಸಿ, ಸಾರಿಗೆ ನಿಗಮ
” ಮೈಸೂರು-ತಿ.ನರಸೀಪುರ ಮಾರ್ಗದ ಮುದ್ರಿತ ಟಿಕೆಟ್ ಪಡೆದು ನಂಜನ ಗೂಡಿಗೆ ಪ್ರಯಾಣ ಬೆಳೆಸಿದರೆ ಆಗುವ ಅನಾಹುತದ ಅರಿವು ಯಾರಿಗೂ ಇಲ್ಲ. ಅಕಸ್ಮಿಕ ವಾಗಿ ಮೈಸೂರು-ನಂಜನಗೂಡು ರಸ್ತೆಯಲ್ಲಿ ಆ ಬಸ್ ಅಪಘಾತವಾದರೆ ವಿಮೆಯ ಜಾರಿಯಲ್ಲಿ ಭಾರೀ ತೊಡಕಾಗುವುದು ಖಚಿತ. ಹಾಗಾದಾಗ ಯಾರು ಜವಾಬ್ದಾರರು?”
ಎಂ.ಎನ್.ಚಂದ್ರಶೇಖರ್, ಜೆ.ಪಿ.ನಗರ, ಮೈಸೂರು
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…