Andolana originals

ಮ. ಬೆಟ್ಟದಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆಗಳು

ಅಕ್ರಮ ಮದ್ಯ ಮಾರಾಟ, ಇಸ್ಪೀಟ್‌ ದಂಧೆಗೆ ಕಡಿವಾಣ ಹಾಕಲು ಸಾರ್ವಜನಿಕರ ಆಗ್ರಹ

ಮಹಾದೇಶ್ ಎಂ. ಗೌಡ

ಹನೂರು: ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಭಕ್ತಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಮಹದೇಶ್ವರ ಬೆಟ್ಟಕ್ಕೆ ಕ್ಷೇತ್ರಕ್ಕೆ ಇತ್ತೀಚಿನ ದಿನಗಳಲ್ಲಿ ಜಾತ್ರಾ ಮಹೋತ್ಸವ, ಹಬ್ಬ ಹರಿದಿನಗಳು, ರಜಾ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ. ಇಂತಹ ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಕಡಿವಾಣ ಹಾಕುತ್ತಿಲ್ಲ ಎನ್ನುವುದು ಹಲವರ ಆರೋಪ.

ಮ. ಬೆಟ್ಟದಲ್ಲಿ ಮದ್ಯಪಾನ, ಮಾಂಸಾಹಾರ, ಧೂಮಪಾನ ಸೇರಿದಂತೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುವ ಎಲ್ಲ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ. ಆದರೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಮ. ಬೆಟ್ಟದ ಪುದೂರು ಗ್ರಾಮದ ನಿವಾಸಿ ಮಣಿಕಂಠ ಅಲಿಯಾಸ್ ಮಣಿ ಎಂಬವರ ಮೇಲೆ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಮ. ಬೆಟ್ಟ ಪೊಲೀಸ್ ಠಾಣೆಯಲ್ಲಿ ೮ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇವರನ್ನು ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆಯವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಆದರೆ ರಾಜಕೀಯ ಒತ್ತಡದಿಂದ ಗಡೀಪಾರು ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಪೊಲೀಸರಿಗೆ ಮಾಹಿತಿ ಇದ್ದರೂ ಕರ್ತವ್ಯ ಲೋಪ ಎಸಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಬ್ಬರು ಸಿಬ್ಬಂದಿಯನ್ನು ಅಮಾನತ್ತು ಮಾಡಿದ್ದರು. ಆದರೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ.

ಮ. ಬೆಟ್ಟದ ಖಾಸಗಿ ಲಾಡ್ಜ್‌ನಲ್ಲಿ ಕೆಲವರು ಭಾನುವಾರ ರಾತ್ರಿ ಇಸ್ಪೀಟ್ ದಂಧೆಗೆ ಕುಮ್ಮಕ್ಕು ನೀಡಿ ಒಂದು ದಿನಕ್ಕೆ ೮ ಸಾವಿರ ರೂ. ಬಾಡಿಗೆ ಪಡೆದು ಅಕ್ರಮ ಜೂಜಾಟಕ್ಕೆ ಸಾಥ್ ನೀಡಿದ್ದಾರೆ ಎಂಬ ಆರೋಪವೂ ಇದೆ. ಈ ಸಂಬಂಧ ಜಿಲ್ಲಾ ಅಪರಾಧ ವಿಭಾಗದ ತಂಡ ಅಕ್ರಮ ಜೂಜಾಟದಲ್ಲಿ ತೊಡಗಿದ್ದ ೧೪ ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು, ಪಣಕ್ಕಿಟ್ಟಿದ್ದ ೩. ೦೯ ಲಕ್ಷ ರೂ. , ೧೪ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದೆ.

೩ ದಿನಗಳ ಹಿಂದೆ ಅಪ್ರಾಪ್ತೆಯೊಬ್ಬಳನ್ನು ಮ. ಬೆಟ್ಟದ ಲಾಡ್ಜ್ ಒಂದಕ್ಕೆ ಕರೆತಂದಿದ್ದ ಜಿಲ್ಲಾ ವ್ಯಾಪ್ತಿಯ ಗ್ರಾಮದ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಒಟ್ಟಾರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ಒಂದು ವಾರದಲ್ಲಿ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇನ್ನು ತೆರೆಮರೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಪತ್ತೆ ಹಚ್ಚುವುದು ಯಾವಾಗ? ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡಿದ್ದಾರೆ.

ಕೌದಳ್ಳಿ ಗ್ರಾಮದ ಕೆಲವರು ಮಹದೇಶ್ವರ ಬೆಟ್ಟಕ್ಕೆ ಬಂದು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಇವರುಗಳ ಮೇಲೆ ನಿಗಾವಹಿಸಿದರೆ ಅಕ್ರಮ ಮದ್ಯ ಸರಬರಾಜು ತಡೆಗಟ್ಟಬಹುದಾಗಿದೆ ಎನ್ನುವುದು ಕೆಲವರ ಸಲಹೆಯಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಲಾಗಿದೆ. ಈಗಾಗಲೇ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಪ್ರಕರಣ ದಾಖಲಿಸುತ್ತಿದ್ದು, ಶೀಘ್ರದಲ್ಲಿಯೇ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು. -ಡಾ. ಬಿ. ಟಿ. ಕವಿತಾ, ಎಸ್‌ಪಿ, ಚಾ. ನಗರ

ಮ. ಬೆಟ್ಟದಲ್ಲಿ ಮದ್ಯ ಅಕ್ರಮ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಮತ್ತೆ ತಮ್ಮ ಹಳೆ ಚಾಳಿ ಮುಂದುವರಿಸಿದ್ದಾರೆ. ಕ್ಷೇತ್ರದಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಡೆಯುತ್ತಿರುವುದರಿಂದ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಶಾಶ್ವತವಾಗಿ ಮದ್ಯ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಬೇಕು. -ಚಂದ್ರು, ಗ್ರಾಪಂ ಸದಸ್ಯ, ಮ. ಬೆಟ್ಟ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago