Andolana originals

ರಾಗಿ ಖರೀದಿ ಕೇಂದ್ರದಲ್ಲಿ ಹೆಚ್ಚುತ್ತಿರುವ ಅಕ್ರಮ: ಆರೋಪ

ನವೀನ್ ಕುಮಾರ್

ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು

ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿದ್ದು, ರೈತರಿಗೆ ನಷ್ಟವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಒಟ್ಟು ನಾಲ್ಕು ಕಡೆಗಳಲ್ಲಿ ಸರ್ಕಾರ ರಾಗಿ ಖರೀದಿ ಕೇಂದ್ರ ಗಳನ್ನು ತೆರೆದಿದೆ. ಸರ್ಕಾರದಿಂದ ಒಂದು ಕ್ವಿಂಟಾಲ್ ರಾಗಿಗೆ ೪,೮೮೬ ರೂ. ಸಹಾಯಧನದಡಿ ರಾಗಿ ಖರೀದಿ ಮಾಡಲಾಗುತ್ತದೆ.

ಸಾವಿರಾರು ಕ್ವಿಂಟಾಲ್ ಖರೀದಿ: ಬೆಟ್ಟದಪುರ ರಾಗಿ ಖರೀದಿ ಕೇಂದ್ರದಲ್ಲಿ ೯೨ ಸಾವಿರ ಕೆಜಿ ಮಾರಾಟ ನಿರೀಕ್ಷೆಯಲ್ಲಿ, ಈಗ ೧೫ ಸಾವಿರ ಕ್ವಿಂಟಾಲ್ ಖರೀದಿಯಾಗಿದೆ. ಪಿರಿಯಾಪಟ್ಟಣದಲ್ಲಿ ೮೬ ಸಾವಿರ ಕ್ವಿಂಟಾಲ್ ನಿರೀಕ್ಷೆಯಲ್ಲಿ, ೧೫ ಸಾವಿರ ಕ್ವಿಂಟಾಲ್ ಖರೀದಿ ಮಾಡಲಾಗಿದೆ. ಹಾರನಹಳ್ಳಿ ಕೇಂದ್ರದಲ್ಲಿ ೪೯ ಸಾವಿರ ಕ್ವಿಂಟಾಲ್ ನಿರೀಕ್ಷೆಯಲ್ಲಿ, ೧೮ ಸಾವಿರ ಕ್ವಿಂಟಾಲ್ ಖರೀದಿಸಲಾಗಿದೆ. ರಾವಂ ದೂರಿನಲ್ಲಿ ೮೮ ಸಾವಿರ ಕ್ವಿಂಟಾಲ್ ನಿರೀಕ್ಷೆಯಲ್ಲಿ, ೧೬ ಸಾವಿರ ಕ್ವಿಂಟಾಲ್ ಖರೀದಿ ಮಾಡಲಾಗಿದೆ.

ಗಲಾಟೆ: ಕೆಲದಿನಗಳ ಹಿಂದೆ ಪಿರಿಯಾಪಟ್ಟಣ ಖರೀದಿ ಕೇಂದ್ರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಹಸಿಲ್ದಾರ್ ನಿಸರ್ಗಪ್ರಿಯ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ಆದರೆ ಉಳಿದ ಖರೀದಿ ಕೇಂದ್ರಗಳಲ್ಲಿ ಯಥಾಸ್ಥಿತಿ ಮುಂದುವರಿದಿದ್ದು ತೂಕ, ಖರೀದಿ ಎಲ್ಲದರಲ್ಲಿಯೂ ರೈತರಿಗೆ ವಂಚನೆಯಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

೪ ಕೆಜಿ ಕಳೆಯುತ್ತಿದ್ದಾರೆ: ಪ್ರತಿ ಕ್ವಿಂಟಾಲ್‌ಗೆ ರೈತರಿಂದ ೧ರಿಂದ ೨ ಕೆ.ಜಿ.ಯಷ್ಟೇ ಕಳೆಯಬೇಕು ಎಂಬ ನಿಯಮವಿದ್ದರೂ ಪ್ರತಿ ಕ್ವಿಂಟಾಲ್‌ರಾಗಿಯಲ್ಲಿ ೪ ಕೆ.ಜಿ.ಗೂ ಅಧಿಕ ರಾಗಿ ಕಳೆಯಲಾಗುತ್ತಿದ್ದು, ಇದರಿಂದ ರೈತರು ನಷ್ಟ ಅನುಭವಿಸುವಂತಾಗಿದೆ.

ಒಬ್ಬರೇ ಖರೀದಿ ಅಧಿಕಾರಿ: ಈ ಹಿಂದೆ ಕೆಎಫ್‌ಐಸಿ ವತಿಯಿಂದ ರಾಗಿ ಖರೀದಿ ನಡೆಯುತ್ತಿತ್ತು. ಇದರ ಅಧಿಕಾರಿಗಳೇ ಖರೀದಿಗೆ ಬರುತ್ತಿದ್ದರು. ಆದರೆ ಈ ಬಾರಿ ಆಹಾರ ಇಲಾಖೆಯ ಅಧಿಕಾರಿಗಳೇ ಖರೀದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಶಿಫಾರಸು ಮಾಡಿಸುತ್ತಿದ್ದಾರೆ ಎಂಬ ದೂರು ಕೇಳಿಬಂದಿದೆ.

ಪ್ರತಿ ಖರೀದಿ ಕೇಂದ್ರದಲ್ಲಿಯೂ ಗುಣಮಟ್ಟ ತಪಾಸಣೆ ಮತ್ತು ನಿರ್ವಹಣೆಗೆ ಖರೀದಿ ಅಧಿಕಾರಿಗಳನ್ನು ನೇಮಿಸಬೇಕೆಂಬ ನಿಯಮವಿದ್ದರೂ ಬೆಟ್ಟದಪುರ ಮತ್ತು ಹಾರನಹಳ್ಳಿ ಖರೀದಿ ಕೇಂದ್ರಕ್ಕೆ ಸಿ.ಮಂಜುನಾಥ್ ಎಂಬ ಒಬ್ಬರೇ ಅಧಿಕಾರಿಯನ್ನು ನೇಮಿಸಿದ್ದಾರೆ. ಇವರು ಕೆಲ ಸಂಬಂಧಿಗಳಿಂದ ಬಿಲ್ ಮಾಡಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಖರೀದಿ ಅಧಿಕಾರಿಯೇ ಇಲ್ಲದೆ ಖರೀದಿ ನಡೆಯುತ್ತಿದೆ.

ಲಾರಿಗಳು ಬರುತ್ತಿಲ್ಲ: ಹಾರನಹಳ್ಳಿ, ಬೆಟ್ಟದಪುರ, ರಾವಂದೂರು ಕೇಂದ್ರಗಳು ಪಿರಿಯಾಪಟ್ಟಣ ವೇರ್‌ಹೌಸ್‌ನಿಂದ ದೂರವಿದ್ದು ಲಾರಿಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ರಾಗಿ ಖರೀದಿಯಲ್ಲಿ ವಿಳಂಬವಾಗುತ್ತಿದ್ದು, ರೈತರು ತೊಂದರೆ ಅನುಭವಿಸುವಂತಾಗಿದೆ.

ಮಧ್ಯವರ್ತಿಗಳ ಹಾವಳಿ: ಪ್ರತಿ ಕೇಂದ್ರದಲ್ಲಿಯೂ ರೈತರಿಗಿಂತ ಮಧ್ಯವರ್ತಿಗಳ ಹಾವಳಿಯೇ ಹೆಚ್ಚಾಗಿದೆ. ಕೆಲ ಟ್ರೇಡರ್‌ಗಳೇ ಬಿಲ್ ಹರಿಯುತ್ತಿರುವುದು ಮತ್ತು ಅಧಿಕಾರಿಗಳ ಸಂಬಂಧಿಕರು ಕಾರ್ಯನಿರ್ವಹಿಸುತ್ತಿರುವುದೂ ಸೇರಿದಂತೆ ರೈತರು ತಂದ ರಾಗಿಯನ್ನು ಖರೀದಿ ಮಾಡುವ ಬದಲು ಟ್ರೇಡರ್‌ಗಳು ಇತರರ ಹೆಸರಿನಲ್ಲಿ ನೋಂದಣಿ ಮಾಡಿದ ರಾಗಿಗೆ ಮೊದಲ ಆದ್ಯತೆ ನೀಡುವುದು, ತೂಕದಲ್ಲಿ ವಂಚನೆ, ಖರೀದಿ ಕೇಂದ್ರದಲ್ಲಿ ಬಂದ ರೈತರಿಗೆ ಕೂರಲು ಸ್ಥಳವಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಹೀಗೆ ಖರೀದಿ ಕೇಂದ್ರಗಳಲ್ಲಿ ರೈತರಿಗೆ ತೊಂದರೆ ಉಂಟಾಗುತ್ತಿದೆ. ತೂಕದಲ್ಲಿ ವ್ಯತ್ಯಾಸವಾಗುತ್ತಿರುವುದರಿಂದ ಖುದ್ದು ತಹಸಿಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಎಲ್ಲಾ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತರಿಗೆ ಆಗುತ್ತಿರುವ ವಂಚನೆಯನ್ನು ತಪ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

” ದೂರು ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಲಾಗಿದೆ. ಕಳಪೆ ರಾಗಿ ಬಂದರೆ ತಿರಸ್ಕಾರ ಮಾಡಿ. ಅದು ಬಿಟ್ಟು ಹೆಚ್ಚಿಗೆ ತೂಕ ಕಳೆಯುವಂತಿಲ್ಲ ಎಂದು ಸೂಚನೆ ನೀಡಿದ್ದೇನೆ. ಬೆಟ್ಟದಪುರದ ಲಾರಿ ತೊಂದರೆ ಬಗೆಹರಿಸಲಾಗಿದೆ. ಅಧಿಕಾರಿಗಳು ಅಕ್ರಮ ಎಸಗಿದರೆ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಲಾಗುವುದು. ಆಗಾಗ್ಗೆ ದಿಢೀರ್ ಭೇಟಿ ನೀಡಿ ರೈತರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಲಾಗುವುದು.”

-ನಿಸರ್ಗಪ್ರಿಯ, ತಹಸಿಲ್ದಾರ್

 

 

ಆಂದೋಲನ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

52 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago