Andolana originals

‘ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ’

ಎ.ಎಚ್.ಗೋವಿಂದ

ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಹಲವು ಮನೆಗಳು ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯದ ಪೌಚ್‌ಗಳನ್ನು ದಾಸ್ತಾನು ಮಾಡಲಾಗುತ್ತಿದೆ. ಇದಲ್ಲದೆ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಇವರಲ್ಲಿ ಬಹುತೇಕರು ಕೂಲಿ ಕಾರ್ಮಿಕರಾಗಿದ್ದು ಮದ್ಯದ ಚಟಕ್ಕೆ ದಾಸರಾಗಿದ್ದಾರೆ ಎಂಬ ದೂರು ಕೇಳಿಬಂದಿದೆ.

ಕೂಲಿ ಕಾರ್ಮಿಕರು ಸಂಜೆ ವೇಳೆ ಮದ್ಯಪಾನಕ್ಕಾಗಿ ಹಣ ಇಲ್ಲದಿದ್ದಾಗ ಮೀಟರ್ ಬಡ್ಡಿಗೆ ಸಾಲ ಪಡೆಯುತ್ತಾರೆ. ಸಂಜೆ ೯೦ ರೂ. ಪಡೆದು ಬೆಳಿಗ್ಗೆ ಕೂಲಿ ಕೆಲಸ ಮುಗಿಸಿ ಬಂದು ಕೂಲಿ ಹಣದಲ್ಲಿ ವಾಪಸ್ ಕೊಡುವ ವ್ಯವಸ್ಥೆಯಿದೆ.

ಮದ್ಯ ವ್ಯಸನಿಗಳಾದ ಕೂಲಿ ಕಾರ್ಮಿಕರು ಗ್ರಾಮದ ಅಂಗಡಿ ಹಾಗೂ ಮನೆಗಳಲ್ಲಿ ಸಿಗುವ ಮದ್ಯದ ಬಾಟಲಿಗಳನ್ನು ತರುತ್ತಾರೆ. ಬಸ್ ನಿಲ್ದಾಣದ ಜಗುಲಿಕಟ್ಟೆಯ ಮೇಲೆ ಕುಳಿತು ಮದ್ಯ ಸೇವಿಸಿ ಖಾಲಿ ಬಾಟಲಿಗಳನ್ನು ಅಲ್ಲಿಯೇ ಬಿಸಾಡಿ ಹೋಗುತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ಪೊಲೀಸ್, ಅಬಕಾರಿ, ಕಂದಾಯ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ದೂರು ಸಲ್ಲಿಸಲಾಗಿದೆ. ಆದರೆ, ಯಾರೊಬ್ಬರೂ ಅಕ್ರಮ ಮದ್ಯ ಮಾರಾಟವನ್ನು ಸ್ಥಗಿತಗೊಳಿ ಸಲು ಮುಂದಾಗಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.

ಪಟ್ಟಣದಲ್ಲಿ ಕಳೆದ ವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲೂ ಈ ಬಗ್ಗೆ ಹನೂರು ಕ್ಷೇತ್ರದ ಶಾಸಕರಾದ ಎಂ.ಆರ್.ಮಂಜು ನಾಥ್ ಅವರು ಪ್ರಸ್ತಾಪಿಸಿದ್ದರು. ಅಕ್ರಮ ಮದ್ಯ ಮಾರಾಟದ ಬಗ್ಗೆ ಕ್ರಮ ವಹಿಸಿ ಎಂದು ಪೊಲೀಸ್ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಅಲ್ಲದೆ ಕೂಲಿ ಕಾರ್ಮಿಕರು ದುಡಿದ ಹಣವನು ಮದ್ಯಕ್ಕೆ ಬಳಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಆದರೆ, ಗ್ರಾಮದಲ್ಲಿ ಶಾಸಕರ ಸೂಚನೆಗೂ ಯಾವುದೇ ಕಿಮ್ಮತ್ತು ಇಲ್ಲದೆ ಮೊದಲಿಗಿಂತಲ್ಲೂ ಹೆಚ್ಚಾಗಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

” ಅಕ್ರಮವಾಗಿ ಮದ್ಯಮಾರಾಟ ಮಾಡುವವರ ವಿರುದ್ಧ ಗ್ರಾಮ ಪಂಚಾಯಿತಿಯಿಂದ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇಲ್ಲ. ಆದರೆ, ತಡೆಗಟ್ಟಬೇಕು ಎಂದು ಸಂಬಂಧಪಟ್ಟ ಅಬಕಾರಿ ಇಲಾಖೆಯ ವರಿಗೆ ಪತ್ರ ಬರೆಯಲಾಗಿದೆ.”

-ಜುನೈದ್ ಅಹಮ್ಮದ್, ಪಿಡಿಒ

” ಗ್ರಾಮದ ಕೆಲವು ಅಂಗಡಿಗಳು ಮತ್ತು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರ ಬಗ್ಗೆ ಸಂಬಂಧ ಪಟ್ಟವರ ಗಮನಕ್ಕೆ ತರಲಾಗಿದೆ. ಆಗೊಮ್ಮೆ ಹೀಗೊಮ್ಮೆ ಅಬಕಾರಿ ಹಾಗೂ ಪೊಲೀ ಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಹೋಗುತ್ತಿದ್ದಾರೆ. ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಇತ್ತ ಗಮನಹರಿಸಿ ಕೂಲಿ ಕಾರ್ಮಿಕರ ಹಿತ ಕಾಪಾಡಬೇಕು.”

 -ಕೃಷ್ಣ, ಪಾಳ್ಯ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

10 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago