Andolana originals

ನೇರುಗಳಲೆ ಗ್ರಾಪಂ ವ್ಯಾಪಿಯಲ್ಲಿ ಅಕ್ರಮ ಗಣಿಗಾರಿಕೆ

ಸೋಮವಾರಪೇಟೆ: ತಾಲ್ಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ಸುತ್ತಮುತ್ತ ವ್ಯಾಪಕವಾಗಿ ನಿಯಮಬಾಹಿರವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಹೊಸಳ್ಳಿ ಗ್ರಾಮದಲ್ಲಿ ತಹಸಿಲ್ದಾರ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಹಿರಿಯ ಅಽಕಾರಿಗಳು ಮತ್ತು ಗ್ರಾಮಸ್ಥರ ಸಭೆ ಮಂಗಳವಾರ ನಡೆಯಿತು.

ಹೊಸಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು ೧೭ ಕಲ್ಲು ಕ್ವಾರಿಗಳಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈ ವಿಚಾರವಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಗ್ರಾಮದ ಪ್ರಮುಖರಾದ ಭೋಜೇಗೌಡ, ಸಂಪತ್, ತಿಮ್ಮಯ್ಯ, ಸಚಿನ್, ಅನಿಲ್ ದೂರಿದರು.

ಗ್ರಾಮೀಣ ರಸ್ತೆಯಲ್ಲಿ ಭಾರದ ಮಿತಿ ಇಲ್ಲದೆ ಹತ್ತು ಚಕ್ರಗಳ ಟಿಪ್ಪರ್‌ಗಳು ಓಡಾಡುತ್ತಿವೆ. ಸಂಜೆ ಹೊತ್ತಿನಲ್ಲಿ ಕಲ್ಲು ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ನಡೆಯುತ್ತಿದೆ. ಅಕ್ಕಪಕ್ಕದ ಮನೆಗಳು ಬಿರುಕು ಬಿಟ್ಟಿವೆ. ಕ್ರಷರ್‌ಗಳಿಂದ ದೂಳು ಬರುತ್ತಿದ್ದು, ವ್ಯವಸಾಯ ಮಾಡಲು ಆಗುತ್ತಿಲ್ಲ. ಬಹುತೇಕ ಜನರು ಶ್ವಾಸಕೋಶ ಸಂಬಂಽ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರದ ವತಿಯಿಂದ ಗ್ರಾಮದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ ನಡೆಸಬೇಕೆಂದು ಆಗ್ರಹಿಸಿದರು.

ನಿಯಮಬಾಹಿರ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸಬೇಕು. ತಪ್ಪಿದಲ್ಲಿ ಗ್ರಾಮಸ್ಥರಿಗೆ ದಯಾಮರಣಕ್ಕೆ ಅನು ಮತಿ ಕೊಡಿಸಬೇಕು ಎಂದು ತಹಸಿಲ್ದಾರ್ ಅವರನ್ನು ಆಗ್ರಹಿಸಿದರು. ಗ್ರಾಮಕ್ಕೆ ಜೇನುಕಲ್ಲು ಬೆಟ್ಟ ಮೀಸಲು ಅರಣ್ಯ ಸಮೀಪದಲ್ಲಿದೆ. ಈ ಅರಣ್ಯಕ್ಕೆ ಹೊಂದಿಕೊಂಡ ಜಾಗದಲ್ಲಿ ಕಲ್ಲು ಕ್ವಾರಿ ಕೆಲಸ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಗ್ರಾಮಸ್ಥರ ಕೋರಿಕೆಯಂತೆ ಅಧಿಕಾರಿಗಳು ಎಲ್ಲಾ ಕಲ್ಲು ಕ್ವಾರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಯಮ ಪಾಲಿಸದ ಕಲ್ಲುಕ್ವಾರಿಗಳನ್ನು ಸ್ಥಗಿತಗೊಳಿಸಲು ಕ್ರಮಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಎಚ್.ಡಿ.ರೋಜ ಅವರಿಗೆ ತಹಸಿಲ್ದಾರ್ ಕೃಷ್ಣಮೂರ್ತಿ ಸೂಚಿಸಿದರು. ಕಂದಾಯ ಮತ್ತು ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೇ ನಡೆಸಿ ಲೋಪದೋಷ ಕಂಡು ಬಂದಲ್ಲಿ ಕಲ್ಲುಕ್ವಾರಿಗಳನ್ನು ಮುಟ್ಟುಗೊಲು ಹಾಕಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಸಭೆಯಲ್ಲಿ ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ವಿನೋದ್. ಪಿಎಸ್‌ಐ ಮುದ್ದು ಮಾದೇವ. ಲೋಕೋಪಯೋಗಿ ಇಲಾಖೆಯ ಎಇಇ ಕುಮಾರ್, ಆರ್‌ಟಿಒ, ಸರ್ವೇ, ಅರಣ್ಯ ಇಲಾಖೆಯ ಅಽಕಾರಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

44 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

4 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

5 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

18 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

18 hours ago